ಸುದೀಪ್ ಸಿನಿಮಾ ಪ್ರದರ್ಶಿಸದಂತೆ ಚುನಾವಣಾ ಆಯೋಗಕ್ಕೆ ವಕೀಲರ ಮನವಿ

Date:

Advertisements
  • ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಬೆಂಬಲ ಘೋಷಿಸಿರುವ ಸುದೀಪ್
  • ನಿಮಗೇಕೆ ರಾಜಕೀಯದ ಸಹವಾಸ ಎನ್ನುತ್ತಿರುವ ಅಭಿಮಾನಿಗಳು

ಈ ಬಾರಿಯ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪರ ಬೆಂಬಲ ಘೋಷಿಸಿರುವ ನಟ ಸುದೀಪ್ ಅಭಿನಯದ ಸಿನಿಮಾ ಅಥವಾ ಕಿರುತೆರೆ ಕಾರ್ಯಕ್ರಮಗಳನ್ನು ಪ್ರಸಾರ ಮಾಡದಂತೆ ವಕೀಲರೊಬ್ಬರು ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದ್ದಾರೆ.

ಸುದೀಪ್ ಚುನಾವಣಾ ಪ್ರಚಾರಕ್ಕೆ ಸಂಬಂಧಿಸಿ ಚುನಾವಣಾ ಆಯೋಗಕ್ಕೆ ಪತ್ರ ಬರೆದಿರುವ ಶಿವಮೊಗ್ಗ ಮೂಲದ ವಕೀಲ ಕೆ.ಪಿ ಶ್ರೀಪಾಲ, “ನಟ ಸುದೀಪ್ ಅವರು ಭಾರತೀಯ ಜನತಾ ಪಕ್ಷದ ಪರ ಸ್ಟಾರ್ ಪ್ರಚಾರಕರಾಗಿದ್ದಾರೆ. ರಾಜಕೀಯ ಪಕ್ಷದ ಪರವಾಗಿ ಪ್ರಚಾರ ಮಾಡುತ್ತಿರುವುದಾಗಿ ಅವರೇ ಘೋಷಿಸಿದ್ದಾರೆ‌. ಹೀಗಾಗಿ ಚುನಾವಣೆ ಮುಗಿಯುವ ವರೆಗೂ ಅವರು ನಟಿಸಿರುವ ಸಿನಿಮಾ, ರಿಯಾಲಿಟಿ ಶೋ ಮತ್ತು ಜಾಹೀರಾತುಗಳು ಚಿತ್ರಮಂದಿರ ಹಾಗೂ ಕಿರುತೆರೆಯಲ್ಲಿ ಪ್ರದರ್ಶನವಾಗದಂತೆ ಕ್ರಮ ಜರುಗಿಸಿ, ಇಲ್ಲವಾದರೆ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗುತ್ತದೆ” ಎಂದು ಮನವಿ ಮಾಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆಗೆ ಬುಧವಾರ ಜಂಟಿ ಸುದ್ದಿಗೋಷ್ಠಿ ನಡೆಸಿದ್ದ ಸುದೀಪ್, “ನಾನು ಚಿತ್ರರಂಗಕ್ಕೆ ಕಾಲಿಟ್ಟ ಆರಂಭದ ದಿನಗಳಲ್ಲಿ ಬೊಮ್ಮಾಯಿ ಅವರು ನನ್ನ ಕಷ್ಟಕ್ಕೆ ನೆರವಾಗಿದ್ದರು. ಹೀಗಾಗಿ ಅವರ ಪರ ಚುನಾವಣಾ ಪ್ರಚಾರ ಮಾಡಲು ನಿರ್ಧರಿಸಿದ್ದೇನೆ. ಬೊಮ್ಮಾಯಿ ಮಾಮಾ ಯಾವ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ಹೇಳುತ್ತಾರೊ ಅಂಥವರ ಪರ ಮಾತ್ರ ನಾನು ಪ್ರಚಾರಕ್ಕಿಳಿಯಲಿದ್ದೇನೆ. ಆದರೆ, ಬಿಜೆಪಿ ಸೇರುವುದಿಲ್ಲ” ಎಂದಿದ್ದರು.

ಈ ಸುದ್ದಿ ಓದಿದ್ದೀರಾ? ನಟ ಸುದೀಪ್‌‌ಗೆ ಅಪರಿಚಿತರಿಂದ ಬೆದರಿಕೆ

Advertisements
Bose Military School

ಸುದೀಪ್, ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿಯ ಪರ ಚುನಾವಣಾ ಪ್ರಚಾರ ಮಾಡುವುದಾಗಿ ಘೋಷಿಸುತ್ತಲೇ ಅವರ ಅಭಿಮಾನಿಗಳು ಮತ್ತು ನೆಟ್ಟಿಗರು, “ನಿಮಗೆ ರಾಜಕೀಯ ಬೇಕಾಗಿರಲಿಲ್ಲ. ಬೊಮ್ಮಾಯಿ ಪರ ಎನ್ನುತ್ತಲೇ ಬಿಜೆಪಿಯನ್ನು ಬೆಂಬಲಿಸುತ್ತಿದ್ದೀರಿ. ಕಲಾವಿದ ಕಲೆಗೆ ಸೀಮಿತವಾಗಿದ್ದರೇ ಚೆಂದ” ಎಂದು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ.

c6d189e709d010a95cabcbe8c5246c21
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Advertisements
Advertisements
Advertisements

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡೊನಾಲ್ಡ್ ಟ್ರಂಪ್‌ಗೆ ಬಾಯಿ ಮುಚ್ಚಲು ನೊಬೆಲ್ ಪ್ರಶಸ್ತಿ ನೀಡಬೇಕು: ಸಿನಿಮಾ ನಿರ್ಮಾಪಕ ಹನ್ಸಲ್ ಮೆಹ್ತಾ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ನೊಬೆಲ್ ಪ್ರಶಸ್ತಿ ನೀಡಬೇಕು ಎಂದು ಚಲನಚಿತ್ರ...

ನಿರ್ದೇಶಕ ನಂದ ಕಿಶೋರ್‌ ವಿರುದ್ಧ 22 ಲಕ್ಷ ರೂ. ವಂಚನೆ ಆರೋಪ

ಕನ್ನಡದ ಖ್ಯಾತ ಸಿನಿಮಾ ನಿರ್ದೇಶಕ ನಂದ ಕಿಶೋರ್‌ ವಿರುದ್ಧ 22 ಲಕ್ಷ...

‘ಮತ್ತೆ ಮೊದಲಿಂದ’– ಯೋಗರಾಜ್ ಭಟ್ಟರ ಸಂಗೀತದ ಹೊಸ ಪ್ರಯೋಗ

ಸ್ಯಾಂಡಲ್‌ವುಡ್‌ ಖ್ಯಾತ ನಿರ್ದೇಶಕ ಯೋಗರಾಜ್ ಭಟ್ ಸಂಗೀತದಲ್ಲಿ ಹೊಸದೊಂದು ಪ್ರಯೋಗಕ್ಕೆ ಮುಂದಾಗಿದ್ದು,...

30 ವರ್ಷಗಳ ನಂತರ ಮತ್ತೆ ಒಂದಾದ ರಜನಿ-ಮೋಹನ್ ಬಾಬು; ʼಕಣ್ಣಪ್ಪʼನ ಮೆಚ್ಚಿದ ಸೂಪರ್‌ ಸ್ಟಾರ್

ಭಾರತೀಯ ಚಿತ್ರರಂಗದ ಸೂಪರ್‌ಸ್ಟಾರ್ ರಜನಿಕಾಂತ್ ಹಾಗೂ ನಟ ಮೋಹನ್ ಬಾಬು ಬರೋಬ್ಬರಿ...

Download Eedina App Android / iOS

X