ಅದ್ದೂರಿಯಾಗಿ ಸೆಟ್ಟೇರಿದ ʼಭೈರತಿ ರಣಗಲ್‌ʼ

Date:

ಚಿತ್ರೀಕರಣಕ್ಕೆ ಚಾಲನೆ ನೀಡಿದ ಗೀತಾ ಶಿವರಾಜ್‌ ಕುಮಾರ್‌

ಜೂನ್‌ ಎರಡನೇ ವಾರದಿಂದ ಶೂಟಿಂಗ್‌ ಆರಂಭ

ಸ್ಯಾಂಡಲ್‌ವುಡ್‌ನ ಹಿರಿಯ ನಟ ಶಿವರಾಜ್‌ ಕುಮಾರ್‌ ಅಭಿನಯದ ಬಹುನಿರೀಕ್ಷಿತ ʼಭೈರತಿ ರಣಗಲ್‌ʼ ಸಿನಿಮಾ ಶುಕ್ರವಾರ ಅದ್ದೂರಿಯಾಗಿ ಸೆಟ್ಟೇರಿದೆ. ಶಿವರಾಜ್‌ ಕುಮಾರ್‌ ಅವರ ಪತ್ನಿ ಗೀತಾ ಕ್ಲ್ಯಾಪ್‌ ಮಾಡುವ ಚಿತ್ರೀಕರಣಕ್ಕೆ ಚಾಲನೆ ನೀಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ʼಭೈರತಿ ರಣಗಲ್‌ʼ ಚಿತ್ರವನ್ನು ʼಮಫ್ತಿʼ ಖ್ಯಾತಿಯ ನರ್ತನ್‌ ನಿರ್ದೇಶಿಸುತ್ತಿದ್ದಾರೆ. 2017ರಲ್ಲಿ ತೆರೆಕಂಡಿದ್ದ ಶ್ರೀ ಮುರಳಿ ಮುಖ್ಯಭೂಮಿಕೆಯಲ್ಲಿ ತೆರೆಕಂಡಿದ್ದ ʼಮಫ್ತಿʼ ಚಿತ್ರದಲ್ಲಿ ಶಿವಣ್ಣ, ʼಭೈರತಿ ರಣಗಲ್‌ʼ ಪಾತ್ರದಲ್ಲಿ ನಟಿಸಿದ್ದರು. ಖಳನ ಪಾತ್ರವಾದರೂ ಶಿವಣ್ಣ ಅವರ ಭಿನ್ನ ಅವತಾರ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿತ್ತು. ಅಂದಿನಿಂದಲೂ ʼಭೈರತಿ ರಣಗಲ್‌ʼ ಹೆಸರಿನ ಸಿನಿಮಾ ಮಾಡುವಂತೆ ಶಿವಣ್ಣ ಮತ್ತು ನರ್ತನ್‌ ಇಬ್ಬರಿಗೂ ಅಭಿಮಾನಿಗಳು ಮನವಿ ಮಾಡುತ್ತಲೇ ಬಂದಿದ್ದರು. ಎಲ್ಲರ ಬಯಕೆಯಂತೆ ಕೊನೆಗೂ ಈ ಬಹುನಿರೀಕ್ಷಿತ ಸಿನಿಮಾದ ಮುಹೂರ್ತ ನೆರವೇರಿದೆ.

ಮುಹೂರ್ತದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ನರ್ತನ್‌, “ಇವತ್ತು ನಮ್ಮ ಸಿನಿಮಾದ ಮುಹೂರ್ತ ನೆರವೇರಿದೆ. ಸದ್ಯ ಶಿವಣ್ಣ ಘೋಸ್ಟ್‌ ಸಿನಿಮಾದ ಕೊನೆಯ ಹಂತದ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದಾರೆ. ಜೂನ್‌ 10ರಿಂದ ʼಭೈರತಿ ರಣಗಲ್‌ʼ ಶೂಟಿಂಗ್‌ ಪ್ರಾರಂಭವಾಗಲಿದೆ” ಎಂದಿದ್ದಾರೆ.

ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡಿರುವ ನರ್ತನ್‌, ” ʼಭೈರತಿ ರಣಗಲ್‌ʼ ʼಪ್ರೀಕ್ವೆಲ್‌ʼ ಮತ್ತು ʼಸೀಕ್ವೆಲ್‌ʼ ಮಾದರಿಯಲ್ಲಿ ತೆರೆಗೆ ಬರಲಿದೆ. ʼಮಫ್ತಿʼ ಸಿನಿಮಾದಲ್ಲಿ ʼಭೈರತಿ ರಣಗಲ್‌ʼ ಪಾತ್ರದ ಪರಿಚಯವಾಗಿತ್ತು. ಈಗ ʼಭೈರತಿ ರಣಗಲ್‌ʼ ʼಪ್ರೀಕ್ವೆಲ್‌ʼನಲ್ಲಿ ಆತನ ಹಿನ್ನೆಲೆ ʼಸೀಕ್ವೆಲ್‌ʼನಲ್ಲಿ ಬಂಧನದ ನಂತರದ ಕಥೆಯನ್ನು ನಿರೀಕ್ಷಿಸಬಹುದು” ಎನ್ನುವ ಮೂಲಕ ನಿರೀಕ್ಷೆಯನ್ನು ಹೆಚ್ಚಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಅಭಿಮಾನಿಯ ಕೊನೆ ಆಸೆ ಈಡೇರಿಸಿದ ಹೃದಯವಂತ ಶಾರುಖ್‌ ಖಾನ್‌

ʼವೇದʼ ಚಿತ್ರಕ್ಕೆ ಬಂಡವಾಳ ಹೂಡಿ ಯಶಸ್ವಿ ನಿರ್ಮಾಪಕಿ ಎನ್ನಿಸಿಕೊಂಡಿರುವ ಗೀತಾ ಶಿವರಾಜ್‌ ಕುಮಾರ್‌, ತಮ್ಮ ʼಗೀತಾ ಪಿಕ್ಚರ್ಸ್‌ʼ ಬ್ಯಾನರ್‌ನಡಿಯಲ್ಲಿ ʼಭೈರತಿ ರಣಗಲ್‌ʼ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಕೆಜಿಎಫ್‌ ಖ್ಯಾತಿಯ ಸಂಗೀತ ನಿರ್ದೇಶಕ ರವಿ ಬಸ್ರೂರ್‌ ಈ ಚಿತ್ರಕ್ಕೆ ಹಿನ್ನೆಲೆ ಸಂಗೀತ ನೀಡಲಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘RCB ಸೋಲಿಗೆ ಅಶ್ವಿನಿ ಪುನೀತ್ ರಾಜ್​ಕುಮಾರ್ ಕಾರಣ’ ಎಂದು ಅವಹೇಳನಕಾರಿ ಟ್ವೀಟ್: ಕಮಿಷನರ್‌ಗೆ ದೂರು

ಕನ್ನಡ ಚಿತ್ರರಂಗದ ನಟ, ದಿವಂಗತ ಪುನೀತ್ ರಾಜ್‌ಕುಮಾರ್ ಅವರ ಪತ್ನಿ ಅಶ್ವಿನಿ...

ಅಕ್ರಮವಾಗಿ ಮಗು ದತ್ತು ಪಡೆದ ಪ್ರಕರಣ: ರೀಲ್ಸ್‌ ಸ್ಟಾರ್ ಸೋನು ಶ್ರೀನಿವಾಸ್ ಗೌಡಗೆ ಜಾಮೀನು

ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ, ಬಿಗ್...

ಪ್ರಕಾಶ್ ರಾಜ್ ಬಿಜೆಪಿ ಸೇರ್ಪಡೆ ವದಂತಿ: ಬಹುಭಾಷಾ ನಟ ಹೇಳಿದ್ದೇನು?

ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ರಾಜಕೀಯ ಮುಖಂಡರು ಆ ಪಕ್ಷದಿಂದ ಈ ಪಕ್ಷಕ್ಕೆ...

ಸಿನಿಮಾ ವಿಮರ್ಶೆ | ನೋಡುಗನನ್ನು ನಜೀಬನ ಮರುಭೂಮಿಯ ಆಡಿನ ದೊಡ್ಡಿಗೆ ಕರೆದೊಯ್ಯುವ ‘ಆಡುಜೀವಿತಂ’

ಮಲಯಾಳಂ ಸಾಹಿತ್ಯ ಜಗತ್ತಿನಲ್ಲಿ ದಾಖಲೆ ನಿರ್ಮಿಸಿದ ಕಾದಂಬರಿ 'ಆಡುಜೀವಿತಂ'(ಆಡು ಜೀವನ). ಇದು...