ಒಂದು ತಿಂಗಳ ವಿರಾಮದ ಬಳಿಕ ಚಿತ್ರೀಕರಣದಲ್ಲಿ ಭಾಗಿ: ನಟ ಶಿವಣ್ಣ

Date:

Advertisements

ಒಂದು ತಿಂಗಳ ವಿರಾಮದ ಬಳಿಕ ಸಂಪೂರ್ಣ ಚಿತ್ರೀಕರಣದಲ್ಲಿ ಭಾಗಿಯಾಗುತ್ತೇನೆ ಎಂದು ನಟ ಶಿವರಾಜ್‌ಕುಮಾರ್ ಹೇಳಿದರು.

ಅಮೆರಿಕದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆಗೊಳಗಾಗಿ ಬೆಂಗಳೂರಿಗೆ ಆಗಮಿಸಿದ ಬಳಿಕ ತಮ್ಮ ನಿವಾಸದ ಬಳಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು, ಹೋಗಬೇಕಿದ್ದರೆ ಬಹಳ ಎಮೋಷನ್ ಆಗಿದ್ದೆ. ಏನೇ ಇದ್ದರೂ ಎದುರಿಸಬೇಕಿತ್ತು. ಧೈರ್ಯವಾಗಿ ಹೋಗಬೇಕಿತ್ತು, ಹೋಗಿ ಬಂದೆ. ಹೋಗಬೇಕಿದ್ದರೆ ಸ್ವಲ್ಪ ಭಯ ಇತ್ತು. ಅಭಿಮಾನಿಗಳ ಆಶೀರ್ವಾದದಿಂದ ಹೋಗಿಬಂದೆ. ವಿಮಾನ ನಿಲ್ದಾಣದಿಂದ ಇಳಿದು ಆಸ್ಪತ್ರೆ ಮುಂದೆ ಹೋಗಬೇಕಿದ್ದಾಗಲೇ ಧೈರ್ಯ ಬಂತು. ಆಪರೇಷನ್ ಮುಗಿದ ಮೇಲೆ ಬಂದು ಹೇಳಿದ ಮೇಲೆ ಎಲ್ಲವೂ ಆಗಿದೆ ಅಂತ ಗೊತ್ತಾಯ್ತು ಎಂದರು.

ವಿಮಾನದಲ್ಲಿ 20 ಗಂಟೆಯಾಯಿತು. ಆರು ಗಂಟೆ ಕಾಲ ಸರ್ಜರಿ ನಡೆಯಿತು. ಎರಡನೇ ದಿನದಿಂದಲೇ ನಡೆಯಲು ಶುರು ಮಾಡಿದೆ. ಆ ಶಕ್ತಿ ಎಲ್ಲಿಂದ ಬಂತೋ ಗೊತ್ತಿಲ್ಲ. ಅಭಿಮಾನಿಗಳಷ್ಟೇ ಅಲ್ಲ, ಇಂಡಸ್ಟ್ರಿ ಅವರು ಧೈರ್ಯ ತುಂಬಿದರು. ಗೀತಾ ಅವರ ಬಗ್ಗೆ ಮಾತಾಡಲ್ಲ. ಗೀತಾ ಹೆಂಡತಿನೂ ಹೌದು, ತಾಯಿನೂ ಹೌದು. ಈ ಬಾರಿ ಮಗಳು ನಿವೇದಿತಾ ತಾಯಿಗಿಂತ ಹೆಚ್ಚು ನೋಡಿಕೊಂಡಿದ್ದಾಳೆ. ನಿವೇದಿತಾ ಗೆಳತಿ ಅನು ಒಂದು ತಿಂಗಳು ನಮ್ಮ ಜೊತೆ ಇದ್ದರು ಎಂದು ತಿಳಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಭಾರತೀಯ ಕಿರುಚಿತ್ರ ‘ಅನುಜಾ’ ಆಸ್ಕರ್ ಪ್ರಶಸ್ತಿಗೆ ನಾಮನಿರ್ದೇಶನ

ಇಂಡಸ್ಟ್ರಿ ಆರೈಕೆ, ಜನರ ಆರೈಕೆ, ಮಾಧ್ಯಮ ಆರೈಕೆ ಇವತ್ತು ಒಳ್ಳೆಯದಾಗಿದೆ. ಗಂಡಸರಿಗೆ ತಾಯಂದಿರು ತುಂಬಾ ಇರುತ್ತಾರೆ. ಅಮ್ಮ, ಹೆಂಡತಿ ಮಗಳು ಹೀಗೆ. ಈ ಬಾರಿ ನಿವೇದಿತಾ ಕೂಡ ನಮ್ಮ ಜೊತೆ ಇದ್ದಳು. ವಿಶ್ರಾಂತಿ ಹೇಳಿದ್ದಾರೆ. ನಾರ್ಮಲ್ ಕೆಲಸ ಮಾಡುತ್ತೇನೆ. ಮಾರ್ಚ್ ಬಳಿಕ ಚಿತ್ರೀಕರಣ ಶುರು ಮಾಡುತ್ತೇನೆ ಎಂದು ಹೇಳಿದರು.

ಎರಡು ಮೂರು ದಿನ ದ್ರವ ಆಹಾರದಲ್ಲಿ ಇದ್ದೆ. ಎರಡು ದಿನ, ಮೂರು ದಿನದ ಬಳಿಕ ನಿಧಾನವಾಗಿ ನಡೆಯಲು ಶುರು ಮಾಡಿದೆ. ಜೀವನವೇ ಒಂದು ಪಾಠ, ಜೀವನದಲ್ಲಿ ಇದೆಲ್ಲ ತಾನಾಗಿ ಬರುತ್ತೆ. ನಾನು ಎಲ್ಲವನ್ನೂ ಧೈರ್ಯವಾಗಿ ಮಾಡಿದೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ...

ಹಣ ಪಡೆದು ವಂಚನೆ ಆರೋಪ: ನಟ ಧ್ರುವ ಸರ್ಜಾ ವಿರುದ್ಧ ಮಹಾರಾಷ್ಟ್ರದಲ್ಲಿ ಎಫ್‌ಐಆರ್‌ ದಾಖಲು

ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ರಾಘವೇಂದ್ರ ಹೆಗಡೆ ಅವರಿಗೆ ಕೋಟ್ಯಂತರ ರೂಪಾಯಿ...

Download Eedina App Android / iOS

X