ಸುದೀಪ್‌, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಂಟಿ ಸುದ್ದಿಗೋಷ್ಠಿಯ ಸಂಪೂರ್ಣ ವಿವರ

Date:

ಸ್ಟಾರ್‌ ನಟ ಕಿಚ್ಚ ಸುದೀಪ್‌ ಬಿಜೆಪಿಯಲ್ಲಿನ ಕೆಲ ಆಪ್ತರ ಪರ ಈ ಬಾರಿಯ ಚುನಾವಣೆಯಲ್ಲಿ ಪ್ರಚಾರ ಮಾಡುವುದಾಗಿ ಸ್ಪಷ್ಟ ಪಡಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ ಬೆಂಗಳೂರಿನ ಅಶೋಕ ಹೋಟೆಲ್‌ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಯೋಜಿಸಿರುವ ಜಂಟಿ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದಾರೆ. ಕಂದಾಯ ಸಚಿವ ಆರ್‌ ಅಶೋಕ್‌ ಮತ್ತು ಆರೋಗ್ಯ ಸಚಿವ ಕೆ. ಸುಧಾಕರ್‌ ಕೂಡ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡಿದ್ದಾರೆ.

- Advertisement -

ಸುದ್ದಿಗೋಷ್ಠಿಯ ಪ್ರಮುಖ ಅಂಶಗಳು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ದೇಶದ ಬೃಹತ್ ಉದ್ಯಮ ಸಂಸ್ಥೆ ಟಾಟಾ ಸನ್ಸ್ ಬೋರ್ಡ್...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಸುದೀಪ್‌ : ನನ್ನ ರಾಜಕೀಯ ನಡೆ ಅಥವಾ ನಿಲುವುಗಳು ಅಂಥೇನಿಲ್ಲ. ನಾನು ಪ್ರೀತಿಯಿಂದ ಮಾಮ ಎಂದು ಕರೆಯುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬೆಂಬಲ ಸೂಚಿಸುತ್ತಿದ್ದೇನೆ.

ಸುದೀಪ್‌ : ಬಸವರಾಜ ಬೊಮ್ಮಾಯಿ ಅವರ ಅವಧಿಯಲ್ಲಿ ಉತ್ತಮ ಕೆಲಸಗಳು ನಡೆದಿವೆ. ಹೀಗಾಗಿ ಅವರನ್ನು ಬೆಂಬಲಿಸುತ್ತಿದ್ದೇನೆ.

ಬಸವರಾಜ ಬೊಮ್ಮಾಯಿ : ಸುದೀಪ್‌ ಅವರು ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿಲ್ಲ. ನನ್ನ ಸ್ಥಾನ ಮತ್ತು ನಾನಿರುವ ರಾಜಕೀಯ ಪಕ್ಷಕ್ಕೆ ಬೆಂಬಲ ಸೂಚಿಸಲು ಬಂದಿದ್ದಾರೆ.

ಬಸವರಾಜ ಬೊಮ್ಮಾಯಿ : ಸುದೀಪ್‌ ಜೊತೆಗೆ ಈ ವಿಚಾರದ ಬಗ್ಗೆ ಎರಡ್ಮೂರು ಬಾರಿ ಮಾತನಾಡಿದ್ದೇನೆ. ಪಕ್ಷ ಸೇರಿಕೊಳ್ಳದಿದ್ದರೂ ನನ್ನ ಮತ್ತು ನನ್ನ ಪಕ್ಷದ ಪರವಾಗಿ ಅವರು ಪ್ರಚಾರ ಮಾಡಲು ಒಪ್ಪಿಕೊಂಡಿದ್ದಾರೆ.

ಸುದೀಪ್‌ : ಬಿಜೆಪಿಯ ಎಲ್ಲ ಅಭ್ಯರ್ಥಿಗಳ ಪ್ರಚಾರ ಮಾಡಲು ನನ್ನಿಂದ ಸಾಧ್ಯವಾಗಲ್ಲ. ಬಸವರಾಜ ಬೊಮ್ಮಾಯಿ ಅವರು ಸೂಚಿಸುವ ನಿರ್ದಿಷ್ಟ ಅಭ್ಯರ್ಥಿಗಳಿಗೆ ನನ್ನ ಬೆಂಬಲ ಸೂಚಿಸಿ ಪ್ರಚಾರ ಮಾಡುತ್ತೇನೆ.

ಸುದೀಪ್‌ : ಬೇರೆ ಪಕ್ಷಗಳಲ್ಲಿನ ಆಪ್ತರು ತಮ್ಮ ಪರ ಪ್ರಚಾರ ಮಾಡುವಂತೆ ನೆರವು ಕೇಳಿದರೆ ಖಂಡಿತವಾಗಿ ಅವರ ಪರವಾಗಿಯೂ ಪ್ರಚಾರ ಮಾಡುತ್ತೇನೆ.

ಸುದೀಪ್‌ : ಸ್ವತಃ ಬಸವರಾಜ ಬೊಮ್ಮಾಯಿ ಅವರೇ ಹೇಳಿದರೂ ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಒಂದು ವೇಳೆ ಚುನಾವಣೆಗೆ ಸ್ಪರ್ಧಿಸುವ ದಿನ ಬಂದರೆ ಖಂಡಿತ ಎಲ್ಲರಿಗೂ ತಿಳಿಸುತ್ತೇನೆ.

ಸುದೀಪ್‌ : ಡಿ.ಕೆ ಶಿವಕುಮಾರ್‌ ಕೂಡ ನನ್ನನ್ನು ಅವರ ಪಕ್ಷಕ್ಕೆ ಕರೆದಿದದ್ದರು. ನಾನೊಬ್ಬ ನಟ ನನ್ನನ್ನು ಎಲ್ಲರೂ ತಮ್ಮ ಪಕ್ಷಗಳಿಗೆ ಆಹ್ವಾನಿಸುತ್ತಾರೆ. ಆದರೆ, ನನಗೆ ರಾಜಕೀಯದಲ್ಲಿ ಆಸಕ್ತಿ ಇಲ್ಲ.

ಸುದೀಪ್‌ : ಒಬ್ಬ ಭಾರತೀಯನಾಗಿ ಮೋದಿ ಅವರ ಕಾರ್ಯ ವೈಖರಿಯನ್ನು ಮೆಚ್ಚಿಕೊಂಡಿದ್ದೇನೆ.

ಸುದೀಪ್‌ : ಪ್ರಚಾರಕ್ಕೆ ಸಂಬಂಧಿಸಿದ ನೀಲನಕ್ಷೆ ಇನ್ನೂ ಸಿದ್ಧಗೊಂಡಿಲ್ಲ. ಬೊಮ್ಮಾಯಿ ಅವರು ಸೂಚಿಸಿದ ಕಡೆಗೆ ಹೋಗಿ ಪ್ರಚಾರದಲ್ಲಿ ಪಾಲ್ಗೊಳ್ಳುತ್ತೇನೆ.

ಬಸವರಾಜ ಬೊಮ್ಮಾಯಿ : ಸುದೀಪ್‌ ನಮ್ಮ ಪರ ಪ್ರಚಾರ ಮಾಡಲು ಬಂದಿರುವುದು ಖುಷಿಯ ವಿಚಾರ. ಅವರ ಆಗಮನದಿಂದ ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ. ಅವರ ಮನಸ್ಸಿನಲ್ಲೂ ಕೆಲವು ವಿಚಾರಗಳಿವೆ ಮುಂದಿನ ದಿನಗಳಲ್ಲಿ ಎಲ್ಲವೂ ಹಂತ ಹಂತವಾಗಿ ಬಹಿರಂಗ ಪಡಿಸುತ್ತಾರೆ. ನಮ್ಮ ಪರ ಪ್ರಚಾರ ಮಾಡುತ್ತಿರುವುದಕ್ಕೆ ಸುದೀಪ್‌ ಮತ್ತವರ ಕುಟುಂಬಸ್ಥರಿಗೆ ಧನ್ಯವಾದ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಟೋಕರೆಕ್ಟ್ ಎಡವಟ್ಟು: ‘ಆತ್ಮಹತ್ಯೆ’ ಪೋಸ್ಟ್ ಹಾಕಿ ಮುಂಬೈ ಪೊಲೀಸರ ಬೆವರಿಳಿಸಿದ ಮರಾಠಿ ನಟ!

ಮರಾಠಿ ಚಿತ್ರರಂಗದ ಜನಪ್ರಿಯ ನಟ ವಿಕಾಸ್ ಸಮುದ್ರೆ ಅವರು ಸಾಮಾಜಿಕ ಜಾಲತಾಣದಲ್ಲಿ...

ನಟ ಶಿವರಾಜ್‌ಕುಮಾರ್ ಜನ ಪರವಾಗಿ ನಿಲ್ಲಬೇಕು; ನಟ ಪ್ರಕಾಶ್‌ ರಾಜ್ ಕರೆ

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗ ನಟ ಶಿವರಾಜ್ ಕುಮಾರ್ ಸೇರಿದಂತೆ ಹಲವು...

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್‌ಗೆ ತಾತ್ಕಾಲಿಕ ರಿಲೀಫ್, ‘ಮಾಫಿ ಸಾಕ್ಷಿ’ ಆದೇಶ ವಜಾ

ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ...

ದಸರಾ ಸಿನಿಮೋತ್ಸವ: ಸಂಸ್ಕೃತಿಯ ವಿಕೇಂದ್ರೀಕರಣ ಮತ್ತು ದೃಶ್ಯ ಪ್ರಜ್ಞೆಯ ಉಳಿವು

ಸಿನಿಮೋತ್ಸವಗಳನ್ನು ಲಾಭ-ನಷ್ಟದ ವ್ಯಾಪಾರಿ ಕನ್ನಡಕದಿಂದ ನೋಡುವುದು ಸರಿಯಲ್ಲ. ದಸರೆಯ ಸಾಂಸ್ಕೃತಿಕ ಘನತೆಯ...