ಪಶ್ಚಿಮ ಬಂಗಾಳದಲ್ಲಿ ʼದಿ ಕೇರಳ ಸ್ಟೋರಿʼ ಚಿತ್ರದ ನಿಷೇಧಕ್ಕೆ ಸುಪ್ರೀಂ ತಡೆ

Date:

ʼದಿ ಕೇರಳ ಸ್ಟೋರಿʼ ಚಿತ್ರ ನಿಷೇಧಿಸಿ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ಚಿತ್ರದ ಪ್ರದರ್ಶನ ರದ್ದುಗೊಳಿಸಿದ್ದ ತಮಿಳನಾಡಿನ ಥಿಯೇಟರ್‌ ಮಾಲೀಕರು

ʼದಿ ಕೇರಳ ಸ್ಟೋರಿʼ ಚಿತ್ರದ ಪ್ರದರ್ಶನವನ್ನು ನಿಷೇಧಿಸಿ ಪಶ್ಚಿಮ ಬಂಗಾಳ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ ನೀಡಿದೆ. ವಿವಾದಕ್ಕೆ ಕಾರಣವಾಗಿರುವ ಮತಾಂತರದ ಅಂಶ ಆಧಾರಹಿತ ಎಂಬ ಸೂಚನೆಯನ್ನು ಚಿತ್ರದ ಜೊತೆಗೆ ಪ್ರದರ್ಶಿಸುವಂತೆ ನಿರ್ಮಾಪಕರಿಗೂ ತಾಕೀತು ಮಾಡಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಗುರುವಾರ ಮೂರನೇ ಬಾರಿಗೆ ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್‌, “ಕಥಾಹಂದರದ ಕಾರಣಕ್ಕೆ ಚಿತ್ರವನ್ನು ನಿಷೇಧಿಸಿಲಾಗಿದೆ ಎಂಬ ಪಶ್ಚಿಮ ಬಂಗಾಳ ಸರ್ಕಾರದ ಸಮರ್ಥನೆ ಸರಿಯಲ್ಲ. ಹೀಗಾಗಿ ಚಿತ್ರದ ಮೇಲಿನ ನಿರ್ಬಂಧಕ್ಕೆ ತಡೆ ನೀಡಲಾಗುವುದು” ಎಂದು ತಿಳಿಸಿದ್ದಾರೆ.

ಇದೇ ವೇಳೆ ತಮಿಳುನಾಡು ಸರ್ಕಾರಕ್ಕೂ ಸೂಚನೆ ಹೊರಡಿಸಿರುವ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳು, “ರಾಜ್ಯದಲ್ಲಿ ʼದಿ ಕೇರಳ ಸ್ಟೋರಿʼ ಪ್ರದರ್ಶನ ಕಾಣುತ್ತಿರುವ ಚಿತ್ರಮಂದಿರಗಳಿಗೆ ಭದ್ರತೆ ಒದಗಿಸುವಂತೆ” ಆದೇಶಿಸಿದ್ದಾರೆ. ಜೊತೆಗೆ ವಿವಾದಕ್ಕೆ ಕಾರಣವಾಗಿರುವ 32 ಸಾವಿರ ಮಹಿಳೆಯರ ಮತಾಂತರದ ಅಂಶ ಆಧಾರ ರಹಿತ ಎಂಬ ಸೂಚನೆಯನ್ನು ಚಿತ್ರದ ಜೊತೆಗೆ ಪ್ರದರ್ಶಿಸುವಂತೆ ನಿರ್ಮಾಪಕರಿಗೆ ತಾಕೀತು ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ʼದಹಾಡ್‌ʼ ವೆಬ್‌ ಸರಣಿಗೆ ಹಂತಕ ಸೈನೇಡ್ ಮೋಹನ್‌ ಕಥೆ ಸ್ಫೂರ್ತಿಯೇ?

ಕೇರಳದ ಯುವತಿಯರನ್ನು ಬಲವಂತವಾಗಿ ಮತಾಂತರಿಸಿ ಭಯೋತ್ಪಾದಕ ಸಂಘಟನೆಗೆ ಸೇರ್ಪಡೆ ಮಾಡಲಾಗಿದೆ ಎಂಬ ಎಳೆಯ ಸುತ್ತ ಮೂಡಿಬಂದಿರುವ ʼದಿ ಕೇರಳ ಸ್ಟೋರಿʼ ಚಿತ್ರವನ್ನು ಮೇ 8ರಂದು ಪಶ್ಚಿಮ ಬಂಗಾಳ ಸರ್ಕಾರ ನಿಷೇಧಿಸಿತ್ತು. ತಮ್ಮ ರಾಜ್ಯದಲ್ಲಿ ದ್ವೇಷ ಹರಡುವುದನ್ನು ತಡೆಯಲು ಮತ್ತು ಹಿಂಸಾಚಾರದ ಘಟನೆಗಳನ್ನು ತಪ್ಪಿಸಿ, ಶಾಂತಿಯನ್ನು ಕಾಪಾಡಲು ಈ ಕ್ರಮ ಕೈಗೊಂಡಿರುವುದಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದರು. ಬಿಡುಗಡೆಗೂ ಮೊದಲೇ ವಿವಾದ ಸೃಷ್ಟಿಸಿದ್ದ ʼದಿ ಕೇರಳ ಸ್ಟೋರಿʼ ಚಿತ್ರದ ಪ್ರದರ್ಶನಗಳನ್ನು ತಮಿಳುನಾಡಿನ ಮಲ್ಟಿಪ್ಲೆಕ್ಸ್‌ ಮಾಲೀಕರ ಸಂಘ ಕೂಡ ರದ್ದುಗೊಳಿಸಿತ್ತು.

ಈ ಹಿನ್ನೆಲೆ “ʼನಮ್ಮ ಚಿತ್ರವನ್ನು ಪ್ರದರ್ಶಿಸದಂತೆ ಪಶ್ಚಿಮ ಬಂಗಾಳ ಸರ್ಕಾರ ನಿಷೇಧ ಹೇರಿದೆ. ತಮಿಳುನಾಡಿನಲ್ಲೂ ಅನಧಿಕೃತವಾಗಿ ಚಿತ್ರದ ಪ್ರದರ್ಶನವನ್ನು ರದ್ದುಗೊಳಿಸಲಾಗಿದೆ ಎಂದು ಆರೋಪಿಸಿ ಚಿತ್ರದ ನಿರ್ಮಾಪಕರು ರಾಜ್ಯ ಸರ್ಕಾರಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೆಣ್ಣುಮಕ್ಕಳ ಬಗ್ಗೆ ನಾಲಿಗೆ ಹರಿಬಿಟ್ಟ ಎಚ್‌ಡಿಕೆ ‘ದಾರಿತಪ್ಪಿದ ಮಗ’: ಪ್ರಕಾಶ್ ರಾಜ್

ನಾಡಿನ ಹೆಣ್ಣು ಮಕ್ಕಳ ಬಗ್ಗೆ ಅತ್ಯಂತ ಹಗುರ ಮತ್ತು ಅವಹೇಳನಕಾರಿಯಾಗಿ ಮಾತನಾಡಿರುವ...

ಖ್ಯಾತ ಕನ್ನಡ ಸಿನಿಮಾ ನಿರ್ಮಾಪಕ ಸೌಂದರ್ಯ ಜಗದೀಶ್​ ಆತ್ಮಹತ್ಯೆ!

ಬೆಂಗಳೂರಿನ ಜೆಟ್​ಲಾಗ್​ ಪಬ್ ಮಾಲೀಕ ಹಾಗೂ ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ...

‘RCB ಸೋಲಿಗೆ ಅಶ್ವಿನಿ ಪುನೀತ್ ರಾಜ್​ಕುಮಾರ್ ಕಾರಣ’ ಎಂದು ಅವಹೇಳನಕಾರಿ ಟ್ವೀಟ್: ಕಮಿಷನರ್‌ಗೆ ದೂರು

ಕನ್ನಡ ಚಿತ್ರರಂಗದ ನಟ, ದಿವಂಗತ ಪುನೀತ್ ರಾಜ್‌ಕುಮಾರ್ ಅವರ ಪತ್ನಿ ಅಶ್ವಿನಿ...