ಪ್ರತಿಭಟನಾನಿರತ ಕುಸ್ತಿಪಟುಗಳ ಬೆಂಬಲಕ್ಕೆ ನಿಂತ ಸಿನಿಮಾ ತಾರೆಯರು

Date:

Advertisements

ಕುಸ್ತಿ ಫೆಡರೇಷನ್‌ ಅಧ್ಯಕ್ಷ ಬ್ರಿಜ್‌ ಭೂಷಣ್‌ ವಿರುದ್ಧ ಕ್ರಮಕ್ಕೆ ಆಗ್ರಹ

ʼಬೇಟಿ ಬಚಾವೋʼ ಎಂದ ಬಹುಭಾಷಾ ನಟ ಪ್ರಕಾಶ್‌ ರಾಜ್‌

ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಎದುರಿಸುತ್ತಿರುವ ಕುಸ್ತಿ ಫೆಡರೇಷನ್‌ (ಡಬ್ಲ್ಯೂಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿ ಪಟುಗಳಿಗೆ ಸ್ವರಾ ಭಾಸ್ಕರ್‌, ಮಂಸೋರೆ, ಪ್ರಕಾಶ್‌ ರಾಜ್‌ ಸೇರಿದಂತೆ ಹಲವು ಸಿನಿಮಾ ತಾರೆಯರು ಬೆಂಬಲ ಸೂಚಿಸಿದ್ದಾರೆ.

Advertisements

ಪ್ರತಿಭಟನಾನಿರತ ಕುಸ್ತಿ ಪಟುಗಳಿಗೆ ತಾವು ಬೆಂಬಲ ಸೂಚಿಸಿ ತಾವು ಮಾತನಾಡಿರುವ ವಿಡಿಯೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಸ್ವರಾ ಭಾಸ್ಕರ್‌, “ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಭಾರತವನ್ನು ಪ್ರತಿನಿಧಿಸಿದ ಕುಸ್ತಿಪಟುಗಳು ತಮ್ಮ ಮೇಲಿನ ಲೈಂಗಿಕ ದೌರ್ಜನ್ಯದ ವಿರುದ್ಧ ರಸ್ತೆಯಲ್ಲಿ ಪ್ರತಿಭಟನೆ ನಡೆಸುವಂಥ ಸ್ಥಿತಿ ನಿರ್ಮಾಣವಾಗಿರುವುದು ನಿಜಕ್ಕೂ ನಾಚಿಕೆಗೇಡು. ಆರೋಪಿ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್ ಅವರ ಮೇಲೆ ಕ್ರಮಕೈಗೊಳ್ಳುವ ಬದಲು ಅವರನ್ನು ರಕ್ಷಿಸುವುದರಲ್ಲೇ ಮಗ್ನವಾಗಿದೆ. ಇದೇ ಪ್ರತಿಭಟನಾನಿರತ ಮಹಿಳಾ ಕುಸ್ತಿಪಟುಗಳು ಪದಕಗಳನ್ನು ಗೆದ್ದು ಬಂದಾಗ ಅವರನ್ನು ಅಭಿನಂದಿಸಲು, ಅವರ ಜೊತೆ ಫೋಟೋ ತೆಗಿಸಿಕೊಳ್ಳಲು ಓಡೋಡಿ ಬರುತ್ತಿದ್ದ ಆಡಳಿತರೂಢ ಪಕ್ಷದ ನಾಯಕರು ಈಗ ಅದೇ ಮಹಿಳಾ ಕ್ರೀಡಾಳುಗಳು ತಮ್ಮ ಮೇಲೆ ದೌರ್ಜನ್ಯ ನಡೆದಿದೆ ಎಂದು ರಸ್ತೆಗಿಳಿದು ಅಳಲು ತೋಡಿಕೊಳ್ಳುತ್ತಿದ್ದಾರೆ. ಆದರೆ, ಆ ನಾಯಕರು ಈಗ್ಯಾಕೆ ಹತ್ತಿರ ಸುಳಿಯುತ್ತಿಲ್ಲ. ಈ ದೇಶದಲ್ಲಿ ಜನಪ್ರಿಯತೆ ಗಳಿಸಿರುವ ಕ್ರೀಡಾಳುಗಳ ಪರಿಸ್ಥಿತಿಯೇ ಹೀಗಾದರೆ, ಸಮಾನ್ಯ ಮಹಿಳೆಯರ ಗತಿಯೇನು” ಎಂದು ಪ್ರಶ್ನಿಸಿದ್ದಾರೆ. ಪ್ರತಿಭಟನಾನಿರತರಿಗೆ ದೇಶವ್ಯಾಪಿಯಾಗಿ ಬೆಂಬಲ ಸೂಚಿಸುವಂತೆ ಕರೆ ನೀಡಿದ್ದಾರೆ.

ಕುಸ್ತಿಪಟುಗಳ ಪ್ರತಿಭಟನೆಯನ್ನು ಬೆಂಬಲಿಸಿ ಬಹುಭಾಷಾ ನಟ ಪ್ರಕಾಶ್‌ ರಾಜ್‌ ಸರಣಿ ಟ್ವೀಟ್‌ಗಳನ್ನು ಮಾಡಿದ್ದು, “ಮನ್‌ ಕಿ ಬಾತ್‌ ಸಾಹೇಬರೇ ನಮ್ಮ ಈ ಕ್ರೀಡಾಪಟುಗಳ ಮಾನದ ಬಾತ್‌ ಬಗ್ಗೆ ಬಾಯಿ ಬಿಚ್ಚುವಿರಾ? ಇದೇ ಕ್ರೀಡಾಳುಗಳು ಗೆದ್ದಾಗ ಅವರ ಜೊತೆ ನೀವು ಸೆಲ್ಫೀ ತೆಗೆದುಕೊಂಡಿದ್ದಾಗಿದೆ. ಈಗ ಅವರಿಗೊಸ್ಕರ ಸ್ವಲ್ಪ ನಿಸ್ವಾರ್ಥಿಯಾಗಿ ವರ್ತಿಸಿ ಹೆಣ್ಣುಮಕ್ಕಳನ್ನು ರಕ್ಷಿಸಿ” ಎಂದಿದ್ದಾರೆ.

ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ, ರಾಷ್ಟ್ರ ಪ್ರಶಸ್ತಿ ವಿಜೇತ ಮಂಸೋರೆ ಕೂಡ ಮಹಿಳಾ ಕುಸ್ತಿಪಡುಗಳ ಮೇಲಿನ ದೌರ್ಜನ್ಯವನ್ನು ಖಂಡಿಸಿದ್ದು, “ಕುಸ್ತಿಪಟುಗಳು ಮಾಡುತ್ತಿರುವ ಪ್ರತಿಭಟನೆ ದೇಶಕ್ಕೆ ಮಾಡುತ್ತಿರುವ ಅವಮಾನ ಎಂದಾದರೆ, ಕುಸ್ತಿಪಟುಗಳಿಗೆ ಆಗಿರುವ ದೌರ್ಜನ್ಯ ಇಡೀ ದೇಶದ ಮಹಿಳೆಯರಿಗೆ ಆಗಿರುವ ದೌರ್ಜನ್ಯ, ಅವಮಾನವಲ್ಲವೇ? ಮಹಿಳೆಯರು ದೇಶದ ಪ್ರಜೆಗಳಲ್ಲವೇ? ಅವರಿಗೆ ನ್ಯಾಯ ಕೊಡಿಸಬೇಕಾದ ಕರ್ತವ್ಯ ಇಲ್ಲಿನ ಸರ್ಕಾರದ ಹೊಣೆಯಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

ಕೇವಲ ಸಿನಿಮಾ ತಾರೆಯರು ಮಾತ್ರವಲ್ಲದೆ ಒಲಂಪಿಕ್‌ ಪದಕ ವಿಜೇತ ನೀಜರ್‌ ಚೋಪ್ರಾ, ಕ್ರಿಕೆಟ್‌ ದಿಗ್ಗಜ ಕಪಿಲ್‌ ದೇವ್‌, ಸಾನಿಯಾ ಮಿರ್ಜಾ, ವೀರೇಂದ್ರ ಸೆಹ್ವಾಗ್‌, ಇರ್ಫಾನ್‌ ಪಠಾಣ್, ಹರ್ಭಜನ್‌ ಸಿಂಗ್‌ ಸೇರಿದಂತೆ ಹಲವು ಗಣ್ಯರು ಪ್ರತಿಭಟನಾನಿರತ ಕುಸ್ತಿಪಟುಗಳ ಪರ ಬೆಂಬಲ ಸೂಚಿಸಿದ್ದು, ಪ್ರಕರಣದ ತನಿಖೆಗೆ ಆಗ್ರಹಿಸಿದ್ದಾರೆ.

ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಭಾರತವನ್ನು ಪ್ರತಿನಿಧಿಸಿರುವ 7 ಮಂದಿ ಮಹಿಳಾ ಕ್ರೀಡಾಪಟುಗಳು ಬ್ರಿಜ್‌ ಭೂಷಣ್‌ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ದೂರುದಾರರಲ್ಲಿ 16ನೇ ವಯಸ್ಸಿನ ಅಪ್ರಾಪ್ತ ಕುಸ್ತಿ ಪಟು ಕೂಡ ಇದ್ದಾರೆ. ಈ ಹಿನ್ನೆಲೆ ಬ್ರಿಜ್‌ ಭೂಷಣ್‌ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆಯೂ ಆಗ್ರಹಗಳು ಕೇಳಿಬಂದಿವೆ. ಭಾರತದ ಜನಪ್ರಿಯ ಕುಸ್ತಿ ಪಟುಗಳಾದ ಬಜರಂಗ್ ಪೂನಿಯಾ, ವಿನೇಶ್ ಫೋಗಟ್ ಮತ್ತು ಸಾಕ್ಷಿ ಮಲಿಕ್ ಸೇರಿದಂತೆ ಹಲವು ಕುಸ್ತಿಪಟುಗಳು ಕಳೆದ 6 ದಿನಗಳಿಂದ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

c6d189e709d010a95cabcbe8c5246c21
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ...

ಹಣ ಪಡೆದು ವಂಚನೆ ಆರೋಪ: ನಟ ಧ್ರುವ ಸರ್ಜಾ ವಿರುದ್ಧ ಮಹಾರಾಷ್ಟ್ರದಲ್ಲಿ ಎಫ್‌ಐಆರ್‌ ದಾಖಲು

ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ರಾಘವೇಂದ್ರ ಹೆಗಡೆ ಅವರಿಗೆ ಕೋಟ್ಯಂತರ ರೂಪಾಯಿ...

Download Eedina App Android / iOS

X