ಲೈಂಗಿಕ ದೌರ್ಜನ್ಯ ಅಪರಾಧಿಗಳಿಗೆ 5 ವರ್ಷ ನಿಷೇಧ: ದಕ್ಷಿಣ ಭಾರತೀಯ ಕಲಾವಿದರ ಸಂಘದ ನಿರ್ಣಯ

Date:

Advertisements

ದಕ್ಷಿಣ ಭಾರತೀಯ ಕಲಾವಿದರ ಸಂಘ ಅಥವಾ ‘ನಾಡಿಗರ್ ಸಂಗಮ್’ ಲೈಂಗಿಕ ದೌರ್ಜನ್ಯಗಳಲ್ಲಿ ತಪ್ಪಿತಸ್ಥರೆಂದು ಕಂಡುಬಂದ ವ್ಯಕ್ತಿಗಳಿಗೆ ತಮಿಳು ಚಲನಚಿತ್ರೋದ್ಯಮದಿಂದ 5 ವರ್ಷಗಳ ನಿಷೇಧವನ್ನು ವಿಧಿಸುವ ಕುರಿತು ಮಹತ್ವದ ನಿರ್ಣಯವನ್ನು ಅಂಗೀಕರಿಸಿದೆ.

ನಡಿಗರ್ ಸಂಗಮ್’ ಅಥವಾ ಎಸ್ಐಎಎ ಚಲನಚಿತ್ರ, ದೂರದರ್ಶನ ಮತ್ತು ರಂಗ ಭೂಮಿಯ ಪ್ರತಿನಿಧಿಗಳ ವೇದಿಕೆಯಾಗಿದೆ. ಸೆ.4ರಂದು ಎಸ್ಐಎಎ ಲಿಂಗ ಸಂವೇದನೆ ಮತ್ತು ಆಂತರಿಕ ದೂರುಗಳ ಸಮಿತಿಯ  ಸಭೆಯ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ತಮಿಳು ಚಲನಚಿತ್ರೋದ್ಯಮದಲ್ಲಿ ಲೈಂಗಿಕ ಕಿರುಕುಳಕ್ಕೆ ಒಳಗಾದವರಿಗೆ ಜಿಎಸ್‌ಐಸಿಸಿ ಎಲ್ಲ ಕಾನೂನು ನೆರವು ನೀಡಲಿದೆ ಎಂದು ನಿರ್ಣಯವು ಹೇಳಿದೆ.

ನಿರ್ಣಯದ ಪ್ರಕಾರ, ಸಂತ್ರಸ್ತರು ತಮ್ಮ ದೂರುಗಳನ್ನು ಈಗಾಗಲೇ ಮೀಸಲಿರಿಸಿದ ಫೋನ್ ಸಂಖ್ಯೆ ಅಥವಾ ಈಮೇಲ್ ಮೂಲಕ ಕಲಾವಿದರ ಸಂಘಕ್ಕೆ ನೀಡಬಹುದು. ಇದಲ್ಲದೆ ಸಂತ್ರಸ್ತರು ತಮ್ಮ ದೂರುಗಳ ನೇರವಾಗಿ ಮಾಧ್ಯಮಗಳೊಂದಿಗೆ ಹಂಚಿಕೊಳ್ಳುವ ಮೊದಲು ಸಮಿತಿಯನ್ನು ಸಂಪರ್ಕಿಸುವಂತೆ ಸಮಿತಿಯು ಸಲಹೆಯನ್ನು ನೀಡಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಗೌರಿ ಲಂಕೇಶ್: ಕೋಮುವಾದಿ ಕತ್ತಲಿಗೆ ಸವಾಲೆಸೆದ ಬೆಳ್ಳಂಬೆಳಕಿನ ದೀವಟಿಗೆ

ಮಲಯಾಳಂ ಸಿನಿಮಾ ರಂಗದಲ್ಲಿ ಮಹಿಳೆಯರ ಮೇಲೆ ವ್ಯಾಪಕ ಲೈಂಗಿಕ ದೌರ್ಜನ್ಯದ ಬಗ್ಗೆ ಹೇಮಾ ಸಮಿತಿಯ ವರದಿ ಬಹಿರಂಗಗೊಳಿಸಿದ ಬೆನ್ನಲ್ಲಿ ಮಲಯಾಳಂ ಸಿನಿಮಾ ರಂಗದ ಹಿರಿಯ ನಟ ಹಾಗೂ ಸಿಪಿಐ(ಎಂ) ಶಾಸಕ ಮುಖೇಶ್, ನಟರಾದ ಸಿದ್ದಿಕ್, ಜಯಸೂರ್ಯ, ಎಡವೇಲ ಬಾಬು, ಬಾಬುರಾಜ್ ಮತ್ತು ನಿರ್ದೇಶಕರಾದ ರಂಜಿತ್ ಮತ್ತು ವಿಕೆ ಪ್ರಕಾಶ್ ವಿರುದ್ಧ ಪ್ರಕರಣಗಳು ದಾಖಲಾಗಿದೆ.

ತಮಿಳು ಸಿನಿಮಾದಲ್ಲೂ ಲೈಂಗಿಕ ದೌರ್ಜನ್ಯದ ಆರೋಪಗಳು ಕೇಳಿ ಬಂದಿದ್ದವು. ಲೈಂಗಿಕ ದೌರ್ಜನ್ಯದ ಬಗ್ಗೆ ಕೆಲವು ತಮಿಳು ನಟಿಯರು ತಮ್ಮ ಸ್ವಂತ ಅನುಭವಗಳನ್ನು ಹಂಚಿಕೊಂಡಿದ್ದರು. ಇದರ ಬೆನ್ನಲ್ಲಿ ತಮಿಳು ನಟ ಮತ್ತು ನಾಡಿಗರ್ ಸಂಗಮ್‌ನ ಪ್ರಧಾನ ಕಾರ್ಯದರ್ಶಿ ವಿಶಾಲ್, ಹೇಮಾ ಸಮಿತಿಯಂತೆಯೇ ಸಮಿತಿಯನ್ನು ರಚಿಸುವುದಾಗಿ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ...

Download Eedina App Android / iOS

X