ತಮಿಳು ಚಿತ್ರನಿರ್ದೇಶಕ ನನ್ನ ಜನನಾಂಗಕ್ಕೆ ‘ರಾಡ್’ ತುರುಕಿಸಿದ್ದರು : ನಟಿ ಸೌಮ್ಯ ಗಂಭೀರ ಆರೋಪ

Date:

Advertisements

ಹೇಮಾ ಸಮಿತಿ ವರದಿಯ ಬಳಿಕ ಮಲಯಾಳಂ ಚಿತ್ರರಂಗದಲ್ಲಿ ಲೈಂಗಿಕ ದೌರ್ಜನ್ಯ, ಅತ್ಯಾಚಾರದ ಬಗ್ಗೆ ಸುದ್ದಿಯಾಗುತ್ತಿರುವ ನಡುವೆ ಈಗ ತಮಿಳು ಚಿತ್ರರಂಗದ ನಿರ್ದೇಶಕರೊಬ್ಬರ ಮೇಲೆ ತಮಿಳು, ಮಲಯಾಳಂ ಸಿನಿಮಾದ ನಟಿ ಸೌಮ್ಯ ಗಂಭೀರ ಆರೋಪ ಮಾಡಿದ್ದಾರೆ. ಜನನಾಂಗಕ್ಕೆ ‘ರಾಡ್’ ತುರುಕಿಸಿ ನಿರ್ದೇಶಕರೊಬ್ಬರು ಖುಷಿಪಟ್ಟಿದ್ದರು ಎಂದು ತಮಿಳು ನಟಿ ಸೌಮ್ಯ ಹೇಳಿದ್ದಾರೆ.

ತಮಿಳು ನಿರ್ದೇಶಕರೊಬ್ಬರು ತನ್ನ ಮೇಲೆ ಮಾಡಿರುವ ಭೀಕರವಾದ ಮಾನಸಿಕ, ದೈಹಿಕ ಮತ್ತು ಲೈಂಗಿಕ ದೌರ್ಜನ್ಯದ ಬಗ್ಗೆ ಜನಪ್ರಿಯ ನಟಿ ಸೌಮ್ಯಾ ಎನ್‌ಡಿಟಿವಿಯ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ಮಗಳು ಎಂದು ಹೇಳಿಕೊಂಡೇ ತನ್ನ ಮೇಲೆ ಒಂದು ವರ್ಷ ನಿರಂತರವಾಗಿ ಅತ್ಯಾಚಾರ ಎಸಗಿರುವುದಾಗಿ ತಿಳಿಸಿದ್ದಾರೆ.

ತನ್ನನ್ನು ಲೈಂಗಿಕ ಗುಲಾಮರಂತೆ ಇರಿಸಿಕೊಂಡಿದ್ದರು. ಅಷ್ಟು ಮಾತ್ರವಲ್ಲದೆ ನಟಿಯ ಜನನಾಂಗಕ್ಕೆ ‘ರಾಡ್‌’ ತುರಿಕಿಸಿ ನಿರ್ದೇಶಕ ಖುಷಿ ಪಟ್ಟಿರುವುದಾಗಿಯೂ ಹೇಳಿದ್ದಾರೆ. ಆದರೆ ಸದ್ಯಕ್ಕೆ ತಾನು ನಿರ್ದೇಶಕ ಹೆಸರು ಬಹಿರಂಗಪಡಿಸುವುದಿಲ್ಲ ಎಂದಿದ್ದಾರೆ.

Advertisements

ಇದನ್ನು ಓದಿದ್ದೀರಾ? ನಿರೀಕ್ಷಣಾ ಜಾಮೀನು ಕೋರಿ ಕೇರಳ ಹೈಕೋರ್ಟ್ ಮೆಟ್ಟಿಲೇರಿದ ಮಲಯಾಳಂ ಚಿತ್ರ ನಿರ್ದೇಶಕ ರಂಜಿತ್

“ನಾನು ಆತನ ಹೆಸರನ್ನು ಬಹಿರಂಗವಾಗಿ ಹೇಳುವುದಿಲ್ಲ. ನಾನು ಸದ್ಯ ಹಲವು ಲೈಂಗಿಕ ದೌರ್ಜನ್ಯ ಪ್ರಕರಣಗಳ ತನಿಖೆಯನ್ನು ನಡೆಸುತ್ತಿರುವ ಕೇರಳ ಸರ್ಕಾರ ರಚಿಸಿದ ವಿಶೇಷ ತನಿಖಾ ಸಂಸ್ಥೆಗೆ ಆ ನಿರ್ದೇಶಕನ ಹೆಸರನ್ನು ತಿಳಿಸುತ್ತೇನೆ” ಎಂದು ನಟಿ ಸೌಮ್ಯ ತಿಳಿಸಿದ್ದಾರೆ.

“ನಾನು 18 ವರ್ಷದ ಹುಡುಗಿಯಾಗಿದ್ದೆ. ನನ್ನ ಪೋಷಕರಿಗೆ ಚಿತ್ರರಂಗದ ಬಗ್ಗೆ ಯಾವ ಮಾಹಿತಿಯೂ ಇರಲಿಲ್ಲ. ಆರಂಭದಲ್ಲಿ ನನ್ನ ಬಳಿ ಆ ವ್ಯಕ್ತಿ ಮಾತನಾಡುತ್ತಿರಲಿಲ್ಲ. ಆತನ ಪತ್ನಿ ನಿರ್ದೇಶಕಿಯಾಗಿದ್ದರು. ಆದರೆ ನಿಜವಾಗಿ ಆತನೇ ಎಲ್ಲಾ ಸಿನಿಮಾದ ನಿರ್ದೇಶನ ಮಾಡುತ್ತಿದ್ದ” ಎಂದು ಹೇಳಿದ್ದಾರೆ.

ಒಂದು ವರ್ಷ ನಡೆದ ಈ ದೌರ್ಜನ್ಯದಿಂದಾಗಿ ನಾನು ಸಂಪೂರ್ಣವಾಗಿ ಮಾನಸಿಕವಾಗಿ ಆಘಾತಕ್ಕೆ ಒಳಗಾಗಿದ್ದೆ. ಈ ಆಘಾತದಿಂದ ಹೊರಗೆ ಬರಲು ನನಗೆ 30 ವರ್ಷಗಳು ಬೇಕಾಯಿತು ಎಂದಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ...

ಹಣ ಪಡೆದು ವಂಚನೆ ಆರೋಪ: ನಟ ಧ್ರುವ ಸರ್ಜಾ ವಿರುದ್ಧ ಮಹಾರಾಷ್ಟ್ರದಲ್ಲಿ ಎಫ್‌ಐಆರ್‌ ದಾಖಲು

ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ರಾಘವೇಂದ್ರ ಹೆಗಡೆ ಅವರಿಗೆ ಕೋಟ್ಯಂತರ ರೂಪಾಯಿ...

Download Eedina App Android / iOS

X