ನಟ ವಿಕ್ರಮ್‌ ಹುಟ್ಟುಹಬ್ಬ | ʼತಂಗಲಾನ್‌ʼ ಚಿತ್ರದ ಮೇಕಿಂಗ್‌ ವಿಡಿಯೋ ಬಿಡುಗಡೆ

Date:

Advertisements

57ನೇ ವಸಂತಕ್ಕೆ ಕಾಲಿಟ್ಟ ಸ್ಟಾರ್‌ ನಟ

ಭಿನ್ನ ಪಾತ್ರದಲ್ಲಿ ಮಿಂಚಿದ ಚಿಯಾನ್‌

ತಮಿಳಿನ ಖ್ಯಾತ ನಟ ಚಿಯಾನ್‌ ವಿಕ್ರಮ್‌ ಸೋಮವಾರ 57ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ನಟನಿಗೆ ಚಿತ್ರರಂಗದ ಗಣ್ಯರು ಮತ್ತು ಅಭಿಮಾನಿಗಳು ಶುಭಾಶಯ ಕೋರುತ್ತಿದ್ದಾರೆ. ಇದೇ ಸಂದರ್ಭದಲ್ಲಿ ವಿಕ್ರಮ್‌ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿರುವ ʼತಂಗಲಾನ್‌ʼ ಚಿತ್ರದ ಮೇಕಿಂಗ್‌ ವಿಡಿಯೋ ಬಿಡುಗಡೆಯಾಗಿದೆ.

Advertisements

ಕೋಲಾರದ ʼಕೆಜಿಎಫ್‌ʼ ಚಿನ್ನದ ಗಣಿಯ ಹಿಂದಿನ ಅಸಲಿ ಕಥೆಯನ್ನು ಆಧರಿಸಿ ಸಿದ್ಧಗೊಳ್ಳುತ್ತಿರುವ ಈ ಚಿತ್ರದಲ್ಲಿ ವಿಕ್ರಮ್‌ ಬುಡಕಟ್ಟು ಸಮುದಾಯದ ನಾಕಯಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಎರಡು ನಿಮಿಷಗಳ ಮೇಕಿಂಗ್‌ ವಿಡಿಯೋದಲ್ಲಿ ಚಿತ್ರೀಕರಣದ ಕೆಲ ದೃಶ್ಯಗಳನ್ನು ಹಂಚಿಕೊಳ್ಳಲಾಗಿದ್ದು, ಬುಡಕಟ್ಟು ಜನರು ತಮ್ಮ ಅಸ್ತಿತ್ವಕ್ಕಾಗಿ ಬ್ರಿಟಿಷರ ವಿರುದ್ಧ ಸೆಣೆಸಾಡುವ ದೃಶ್ಯಗಳು ಕೂಡ ಗಮನ ಸೆಳೆಯುವಂತಿವೆ. ವಿಕ್ರಮ್‌ ಅವರ ಪಾತ್ರ ಮತ್ತು ವೇಷ ಚಿತ್ರದ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ.

ಪ್ರಶಾಂತ್‌ ನೀಲ್‌ ʼಕೆಜಿಎಫ್‌ʼ ಕುರಿತ ಕಾಲ್ಪನಿಕ ಕಥೆಯನ್ನು ತೆರೆಗೆ ಅಳವಡಿಸಿದ ಬೆನ್ನಲ್ಲೇ ʼತಂಗಲಾನ್‌ʼ ಚಿತ್ರವನ್ನು ಘೋಷಿಸಿದ್ದ ತಮಿಳಿನ ಖ್ಯಾತ ನಿರ್ದೇಶಕ ಪ. ರಂಜಿತ್‌, ʼಕೆಜಿಎಫ್‌ʼನ ಹಿನ್ನೆಲೆ ಮತ್ತು 1870 ರಿಂದ 1940ರ ನಡುವೆ ʼಕೆಜಿಎಫ್‌ʼ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ನಡೆದ ನೈಜ ಘಟನೆಗಳನ್ನು ಸಿನಿ ರಸಿಕರ ಮುಂದಿಡಲು ಸಜ್ಜಾಗಿದ್ದಾರೆ.

ಈಗಾಗಲೇ ಶೇ.80 ರಷ್ಟು ಚಿತ್ರೀಕರಣ ಪೂರ್ಣಗೊಂಡಿದ್ದು, ಕೊನೆಯ ಹಂತದ ಶೂಟಿಂಗ್‌ ಸದ್ಯದಲ್ಲೇ ಪ್ರಾರಂಭವಾಗಲಿದೆ. ʼಪೊನ್ನಿಯನ್‌ ಸೆಲ್ವನ್‌-2ʼ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿರುವ ವಿಕ್ರಮ್‌ ಶೀಘ್ರವೇ ‘ತಂಗಲಾನ್‌’ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ.

ವಿಕ್ರಮ್‌ ಮತ್ತು ಪ. ರಂಜಿತ್‌ ಕಾಂಬಿನೇಶನ್‌ನ ಈ ಚಿತ್ರದಲ್ಲಿ ಪಾರ್ವತಿ ಮೆನನ್‌, ಮಾಳವಿಕ ಮೋಹನನ್‌, ಪಸುಪತಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಜಿ.ವಿ ಪ್ರಕಾಶ್‌ ಸಂಗೀತ ಸಂಯೋಜನೆಯ ಹೊಣೆ ಹೊತ್ತುಕೊಂಡಿದ್ದು, ಜ್ಞಾನವೇಲ್‌ ರಾಜ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

c6d189e709d010a95cabcbe8c5246c21
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ...

ಹಣ ಪಡೆದು ವಂಚನೆ ಆರೋಪ: ನಟ ಧ್ರುವ ಸರ್ಜಾ ವಿರುದ್ಧ ಮಹಾರಾಷ್ಟ್ರದಲ್ಲಿ ಎಫ್‌ಐಆರ್‌ ದಾಖಲು

ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ರಾಘವೇಂದ್ರ ಹೆಗಡೆ ಅವರಿಗೆ ಕೋಟ್ಯಂತರ ರೂಪಾಯಿ...

Download Eedina App Android / iOS

X