ನಟ ವಿಕ್ರಮ್‌ ಹುಟ್ಟುಹಬ್ಬ | ʼತಂಗಲಾನ್‌ʼ ಚಿತ್ರದ ಮೇಕಿಂಗ್‌ ವಿಡಿಯೋ ಬಿಡುಗಡೆ

Date:

57ನೇ ವಸಂತಕ್ಕೆ ಕಾಲಿಟ್ಟ ಸ್ಟಾರ್‌ ನಟ

ಭಿನ್ನ ಪಾತ್ರದಲ್ಲಿ ಮಿಂಚಿದ ಚಿಯಾನ್‌

ತಮಿಳಿನ ಖ್ಯಾತ ನಟ ಚಿಯಾನ್‌ ವಿಕ್ರಮ್‌ ಸೋಮವಾರ 57ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ನಟನಿಗೆ ಚಿತ್ರರಂಗದ ಗಣ್ಯರು ಮತ್ತು ಅಭಿಮಾನಿಗಳು ಶುಭಾಶಯ ಕೋರುತ್ತಿದ್ದಾರೆ. ಇದೇ ಸಂದರ್ಭದಲ್ಲಿ ವಿಕ್ರಮ್‌ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿರುವ ʼತಂಗಲಾನ್‌ʼ ಚಿತ್ರದ ಮೇಕಿಂಗ್‌ ವಿಡಿಯೋ ಬಿಡುಗಡೆಯಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕೋಲಾರದ ʼಕೆಜಿಎಫ್‌ʼ ಚಿನ್ನದ ಗಣಿಯ ಹಿಂದಿನ ಅಸಲಿ ಕಥೆಯನ್ನು ಆಧರಿಸಿ ಸಿದ್ಧಗೊಳ್ಳುತ್ತಿರುವ ಈ ಚಿತ್ರದಲ್ಲಿ ವಿಕ್ರಮ್‌ ಬುಡಕಟ್ಟು ಸಮುದಾಯದ ನಾಕಯಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಎರಡು ನಿಮಿಷಗಳ ಮೇಕಿಂಗ್‌ ವಿಡಿಯೋದಲ್ಲಿ ಚಿತ್ರೀಕರಣದ ಕೆಲ ದೃಶ್ಯಗಳನ್ನು ಹಂಚಿಕೊಳ್ಳಲಾಗಿದ್ದು, ಬುಡಕಟ್ಟು ಜನರು ತಮ್ಮ ಅಸ್ತಿತ್ವಕ್ಕಾಗಿ ಬ್ರಿಟಿಷರ ವಿರುದ್ಧ ಸೆಣೆಸಾಡುವ ದೃಶ್ಯಗಳು ಕೂಡ ಗಮನ ಸೆಳೆಯುವಂತಿವೆ. ವಿಕ್ರಮ್‌ ಅವರ ಪಾತ್ರ ಮತ್ತು ವೇಷ ಚಿತ್ರದ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ.

ಪ್ರಶಾಂತ್‌ ನೀಲ್‌ ʼಕೆಜಿಎಫ್‌ʼ ಕುರಿತ ಕಾಲ್ಪನಿಕ ಕಥೆಯನ್ನು ತೆರೆಗೆ ಅಳವಡಿಸಿದ ಬೆನ್ನಲ್ಲೇ ʼತಂಗಲಾನ್‌ʼ ಚಿತ್ರವನ್ನು ಘೋಷಿಸಿದ್ದ ತಮಿಳಿನ ಖ್ಯಾತ ನಿರ್ದೇಶಕ ಪ. ರಂಜಿತ್‌, ʼಕೆಜಿಎಫ್‌ʼನ ಹಿನ್ನೆಲೆ ಮತ್ತು 1870 ರಿಂದ 1940ರ ನಡುವೆ ʼಕೆಜಿಎಫ್‌ʼ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ನಡೆದ ನೈಜ ಘಟನೆಗಳನ್ನು ಸಿನಿ ರಸಿಕರ ಮುಂದಿಡಲು ಸಜ್ಜಾಗಿದ್ದಾರೆ.

ಈಗಾಗಲೇ ಶೇ.80 ರಷ್ಟು ಚಿತ್ರೀಕರಣ ಪೂರ್ಣಗೊಂಡಿದ್ದು, ಕೊನೆಯ ಹಂತದ ಶೂಟಿಂಗ್‌ ಸದ್ಯದಲ್ಲೇ ಪ್ರಾರಂಭವಾಗಲಿದೆ. ʼಪೊನ್ನಿಯನ್‌ ಸೆಲ್ವನ್‌-2ʼ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿರುವ ವಿಕ್ರಮ್‌ ಶೀಘ್ರವೇ ‘ತಂಗಲಾನ್‌’ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ.

ವಿಕ್ರಮ್‌ ಮತ್ತು ಪ. ರಂಜಿತ್‌ ಕಾಂಬಿನೇಶನ್‌ನ ಈ ಚಿತ್ರದಲ್ಲಿ ಪಾರ್ವತಿ ಮೆನನ್‌, ಮಾಳವಿಕ ಮೋಹನನ್‌, ಪಸುಪತಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಜಿ.ವಿ ಪ್ರಕಾಶ್‌ ಸಂಗೀತ ಸಂಯೋಜನೆಯ ಹೊಣೆ ಹೊತ್ತುಕೊಂಡಿದ್ದು, ಜ್ಞಾನವೇಲ್‌ ರಾಜ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

Sanket
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಕ್ಷೇಪಾರ್ಹ ದೃಶ್ಯಗಳಿದ್ದರೆ ಬಿಗ್‌ಬಾಸ್‌ ಪ್ರಸಾರ ನಿಲ್ಲಿಸಿ: ಕೇಂದ್ರಕ್ಕೆ ಕೇರಳ ಹೈಕೋರ್ಟ್ ನಿರ್ದೇಶನ

ಮಲಯಾಳಂ ರಿಯಾಲಿಟಿ ಶೋ ಬಿಗ್‌ಬಾಸ್‌ ಕಾರ್ಯಕ್ರಮದಲ್ಲಿ ಪ್ರಸಾರದ ನಿಯಮಾವಳಿಗಳನ್ನು ಉಲ್ಲಂಘಿಸುವ ಆಕ್ಷೇಪಾರ್ಹ...

ಹೆಣ್ಣುಮಕ್ಕಳ ಬಗ್ಗೆ ನಾಲಿಗೆ ಹರಿಬಿಟ್ಟ ಎಚ್‌ಡಿಕೆ ‘ದಾರಿತಪ್ಪಿದ ಮಗ’: ಪ್ರಕಾಶ್ ರಾಜ್

ನಾಡಿನ ಹೆಣ್ಣು ಮಕ್ಕಳ ಬಗ್ಗೆ ಅತ್ಯಂತ ಹಗುರ ಮತ್ತು ಅವಹೇಳನಕಾರಿಯಾಗಿ ಮಾತನಾಡಿರುವ...

ಖ್ಯಾತ ಕನ್ನಡ ಸಿನಿಮಾ ನಿರ್ಮಾಪಕ ಸೌಂದರ್ಯ ಜಗದೀಶ್​ ಆತ್ಮಹತ್ಯೆ!

ಬೆಂಗಳೂರಿನ ಜೆಟ್​ಲಾಗ್​ ಪಬ್ ಮಾಲೀಕ ಹಾಗೂ ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ...