‘ಥಗ್ ಲೈಫ್’ ಸಿನಿಮಾ ತಡೆಯದಂತೆ ಹೈಕೋರ್ಟ್ ಮೆಟ್ಟಿಲೇರಿದ ಕಮಲ್ ಹಾಸನ್ ಚಿತ್ರ ತಂಡ

Date:

Advertisements

ಕನ್ನಡ ತಮಿಳಿನಿಂದ ಹುಟ್ಟಿದೆ ಎಂದು ಹೇಳಿಕೆ ನೀಡಿದ ತಮಿಳು ನಟ ಕಮಲ್ ಹಾಸನ್ ಕ್ಷಮೆಯಾಚಿಸುವಂತೆ ಕನ್ನಡಪರ ಸಂಘಟನೆಗಳು ಆಗ್ರಹಿಸಿದೆ. ಆದರೆ ನಟ ಕ್ಷಮೆ ಕೇಳಲು ನಿರಾಕರಿಸಿದ್ದಾರೆ. ಈ ಬೆನ್ನಲ್ಲೇ ಕ್ಷಮೆ ಕೇಳದಿದ್ದರೆ ಕಮಲ್ ಹಾಸನ್ ಸಿನಿಮಾವನ್ನು ಬಹಿಷ್ಕರಿಸಲಾಗುವುದು ಎಂದು ಚಿತ್ರರಂಗ ಹೇಳಿದೆ. ಈ ಎಲ್ಲಾ ಬೆಳವಣಿಗೆ ನಡುವೆ ‘ಥಗ್ ಲೈಫ್’ ಸಿನಿಮಾ ತಡೆಯದಂತೆ ಸಿನಿಮಾ ತಂಡವು ಕರ್ನಾಟಕ ಹೈಕೋರ್ಟ್ ಮೊರೆಹೋಗಿದೆ.

ಕಮಲ್ ಹಾಸನ್ ಅಭಿನಯದ ‘ಥಗ್ ಲೈಫ್’ ಚಿತ್ರದ ಸಹ-ನಿರ್ಮಾಪಕರಾದ ರಾಜ್‌ಕಮಲ್ ಫಿಲ್ಮ್ಸ್ ಇಂಟರ್‌ನ್ಯಾಷನಲ್ ‘ಥಗ್ ಲೈಫ್’ ಸಿನಿಮಾ ತಡೆಯದಂತೆ ಹೈಕೋರ್ಟ್ ಮೆಟ್ಟಿಲೇರಿದೆ. ರಾಜ್ಯದಲ್ಲಿ ಯಾವುದೇ ಅಡೆತಡೆಯಿಲ್ಲದೆ ಚಿತ್ರವನ್ನು ಪ್ರದರ್ಶಿಸಲು ಅವಕಾಶ ನೀಡುವಂತೆ ನಿರ್ದೇಶನ ನೀಡುವಂತೆ ಕೋರಿದೆ.

ಇದನ್ನು ಓದಿದ್ದೀರಾ? ಕನ್ನಡ ತಮಿಳಿನಿಂದ ಹುಟ್ಟಿದೆ ಹೇಳಿಕೆ: ತಪ್ಪಾಗಿದ್ದರೆ ಮಾತ್ರ ಕ್ಷಮೆ ಕೇಳುವೆ ಎಂದ ಕಮಲ್ ಹಾಸನ್

Advertisements

ನಟ ಕಮಲ್ ಹಾಸನ್ ತಮ್ಮ ಹೇಳಿಕೆಗೆ ಕ್ಷಮೆಯಾಚಿಸದಿದ್ದರೆ ಚಿತ್ರದ ಪ್ರದರ್ಶನಕ್ಕೆ ಅವಕಾಶ ನೀಡುವುದಿಲ್ಲ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ(ಕೆಎಫ್‌ಸಿಸಿ) ಸಹ ಘೋಷಿಸಿದೆ. ಆದರೆ ಕಮಲ್ ಹಾಸನ್ ಮಾತ್ರ ಕ್ಷಮೆಯಾಚಿಸಲು ನಿರಾಕರಿಸಿದ್ದು, ಇದೀಗ ಚಿತ್ರ ತಂಡ ಹೈಕೋರ್ಟ್ ಮೆಟ್ಟಿಲೇರಿದೆ.

ಇನ್ನು ಚಿತ್ರತಂಡವು “ನಟನ ಹೇಳಿಕೆಯನ್ನು ತಪ್ಪಾಗಿ ಉಲ್ಲೇಖಿಸಲಾಗಿದೆ. ವಾಸ್ತವವಾಗಿ ತಮಿಳುನಾಡು ಮತ್ತು ಕರ್ನಾಟಕದ ಜನರ ನಡುವಿನ ಸೌಹಾರ್ದತೆಯನ್ನು ಎತ್ತಿ ತೋರಿಸುವ ಉದ್ದೇಶವನ್ನು ಈ ಚಿತ್ರ ಹೊಂದಿದೆ” ಎಂದು ವಾದಿಸಿದೆ.

“ಉದ್ದೇಶಪೂರ್ವಕವಾಗಿ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಇದರಿಂದಾಗಿ ಅನಗತ್ಯ ಆಕ್ರೋಶ ಉಂಟಾಗಿದೆ. ಹಾಗಾಗಿ 300 ಕೋಟಿ ರೂಪಾಯಿ ವೆಚ್ಚದ ಈ ಚಿತ್ರದ ಪ್ರದರ್ಶನವನ್ನು ಕರ್ನಾಟಕದಲ್ಲಿ ತಡೆಯುವ ಯಾವುದೇ ಪ್ರಯತ್ನವನ್ನು ತಡೆಯಲು ನ್ಯಾಯಾಲಯ ಮಧ್ಯಪ್ರವೇಶಿಸಬೇಕು” ಎಂದು ಚಿತ್ರತಂಡ ಒತ್ತಾಯಿಸಿದೆ.

ಮಣಿರತ್ನಂ ನಿರ್ದೇಶನದ ಥಗ್ ಲೈಫ್‌ ಚಿತ್ರದಲ್ಲಿ ತ್ರಿಶಾ ಕೃಷ್ಣನ್ ಮತ್ತು ಟಿಆರ್ ಸಿಲಂಬರಸನ್ ಕೂಡ ನಟಿಸಿದ್ದಾರೆ, ಎಆರ್ ರೆಹಮಾನ್ ಸಂಗೀತ ನೀಡಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X