ಕರ್ನಾಟಕ ಮೂಲದ ಬಾಲಿವುಡ್ ನಟಿ ಸುಲೋಚನಾ ಲಾತ್ಕರ್ ನಿಧನ

Date:

ಬಾಲಿವುಡ್ ಹಾಗೂ ಮರಾಠಿ ಸಿನಿಮಾ ರಂಗದ ಹಿರಿಯ ನಟಿ ಸುಲೋಚನಾ ಲಾತ್ಕರ್ ಅವರು ಭಾನುವಾರ ಸಂಜೆ ನಿಧನರಾಗಿದ್ದಾರೆ.

94 ವರ್ಷದ ಸುಲೋಚನಾ ಲಾತ್ಕರ್ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಸುಲೋಚನಾ ಅವರನ್ನು ಮೇ ತಿಂಗಳಿನಿಂದ ಮುಂಬೈನ ದಾದರ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೂನ್ 4 ರಂದು ಅವರ ಆರೋಗ್ಯವು ಸಂಪೂರ್ಣ ಹದಗೆಟ್ಟಿತ್ತು ನಿರಂತರ ಆಮ್ಲಜನಕ ಪೂರೈಕೆಯೊಂದಿಗೆ ವೆಂಟಿಲೇಟರ್‌ನಲ್ಲಿ ಇರಿಸಲಾಗಿತ್ತು. ಆಸ್ಪತ್ರೆಯಲ್ಲಿ ಶುಕ್ರವಾರ ಸಂಜೆ 6.30ರ ಸುಮಾರಿಗೆ ನಿಧನರಾದರು ಎಂದು ಪುತ್ರಿ ಕಾಂಚನ್ ತಿಳಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಡಕಾಳತಾ ಗ್ರಾಮದಲ್ಲಿ 1928, ಜುಲೈ 30 ರಂದು ಜನಿಸಿದ್ದ ಸುಲೋಚನಾ ಲಾತ್ಕರ್ ಅವರು 1940 ರಲ್ಲಿ ಮರಾಠಿ ರಂಗಭೂಮಿ ಪ್ರವೇಶಿಸಿದ್ದರು. ಆನಂತರ ಮರಾಠಿ, ಹಿಂದಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದರು. ಮರಾಠಿಯಲ್ಲಿ 50 ಹಾಗೂ ಹಿಂದಿಯಲ್ಲಿ 250ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಕುಜ ದೋಷ: ಅತ್ಯಾಚಾರ ಸಂತ್ರಸ್ತೆಯ ಜಾತಕ ಪರಿಶೀಲನೆಗೆ ಸೂಚಿಸಿದ ಅಲಹಾಬಾದ್ ಹೈಕೋರ್ಟ್‌ಗೆ ಸುಪ್ರೀಂ ತಡೆ

ಸುಲೋಚನಾ ಲಾಟ್ಕರ್ ಅವರು 1960 ಮತ್ತು 70ರ ದಶಕದಲ್ಲಿ ಬಾಲಿವುಡ್‌ನ ತಾಯಿ ಪಾತ್ರದ ನಟಿಯಾಗಿ ಗುರುತಿಸಲ್ಪಟ್ಟಿದ್ದರು.ಆ ಕಾಲದಲ್ಲಿ ಬಾಲಿವುಡ್‌ನ ಮೂವರು ದಿಗ್ಗಜ ನಟರಾದ ಸುನಿಲ್ ದತ್, ದೇವಾನಂದ್ ಮತ್ತು ರಾಜೇಶ್ ಖನ್ನಾ ಅವರ ತಾಯಿಯ ಪಾತ್ರವನ್ನು ನಿರ್ವಹಿಸಿ ಮೆಚ್ಚುಗೆ ಗಳಿಸಿದ್ದರು.

ಅಬ್ ದಿಲ್ಲಿ ದುರ್ ನಹಿನ್, ಸುಜಾತಾ, ಆಯೆ ದಿನ್ ಬಹರ್ ಕೆ, ದಿಲ್ ದೇಕೆ ದೇಖೋ, ಆಶಾ, ಮಜ್ಬೂರ್, ನೈರೋಶ್ನಿ, ಆಯಿ ಮಿಲನ್ ಕಿ ಬೇಲಾ, ಗೋರಾ ಔರ್ ಕಾಲಾ, ದೇವರ್, ಬಾಂದಿನಿ, ಶ್ರೀ420, ನಾಗಿನ್, ಅಬ್ ದಿಲ್ಲಿ ದುರ್ ನಹಿನ್ ಮತ್ತು ಮಿಸ್ಟರ್ ಅಂಡ್ ಮಿಸಸ್ ಸುಲೋಚನಾ ನಟಿಸಿದ ಪ್ರಮುಖ ಬಾಲಿವುಡ್ ಚಿತ್ರಗಳು.

ಸುಲೋಚನಾ ಅವರಿಗೆ 1999 ರಲ್ಲಿ ಪದ್ಮಶ್ರೀ ಪ್ರಶಸ್ತಿ ಮತ್ತು 2009 ರಲ್ಲಿ ಮಹಾರಾಷ್ಟ್ರ ಸರ್ಕಾರದಿಂದ ಪ್ರತಿಷ್ಠಿತ ಮಹಾರಾಷ್ಟ್ರ ಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

ಸುಲೋಚನಾ ಅವರ ನಿಧನಕ್ಕೆ ಬಾಲಿವುಡ್‌ನ ಹಿರಿಯ ಬಾಲಿವುಡ್ ನಟ ಅಭಿತಾಬ್ ಬಚ್ಚನ್, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸೇರಿ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಸೋಮವಾರ ಮುಂಬೈನ ಶಿವಾಜಿ ಪಾರ್ಕ್‌ನ ದಾದರ್‌ನ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಶ್ಚಿಮ ಬಂಗಾಳ| ರಾಮನವಮಿ ಮೆರವಣಿಗೆ ವೇಳೆ ಕಲ್ಲು ತೂರಾಟ; ಪೂರ್ವ ಯೋಜಿತ ಎಂದ ಮಮತಾ

ಪಶ್ಚಿಮ ಬಂಗಾಳದ ಪುರ್ಬಾ ಮೇದಿನಿಪೋರ್ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಮೇಲೆ ಕಲ್ಲು...

ಮತದಾರರಿಗೆ ಗುರುತಿನ ಚೀಟಿ: ಸುಪ್ರೀಂ ಪ್ರಶ್ನೆಗೆ ಅಪಾಯದ ಕೆಲಸ ಎಂದ ಚುನಾವಣಾ ಆಯೋಗ

ಮುಕ್ತ ಹಾಗೂ ನ್ಯಾಯ ಸಮ್ಮತ ಮತದಾನ ನಡೆಸಲು ಚುನಾವಣೆ ಪ್ರಕ್ರಿಯೆಯಲ್ಲಿ ಪಾವಿತ್ರತೆ...

ಪಶ್ಚಿಮ ಬಂಗಾಳ ರಾಜ್ಯಪಾಲದ ವಿರುದ್ಧ ಚುನಾವಣಾ ಆಯೋಗಕ್ಕೆ ಟಿಎಂಸಿ ದೂರು

ರಾಜ್ಯದಲ್ಲಿ ಲೋಕಸಭಾ ಚುನಾವಣಾ ನಡೆಯುವ ಹಿನ್ನೆಲೆ ಮಧ್ಯಪ್ರದೇಶ ಮಾಡುತ್ತಿರುವ ಪಶ್ಚಿಮ ಬಂಗಾಳ...

ಬಿಟ್‌ಕಾಯಿನ್ ಹಗರಣ| ನಟಿ ಶಿಲ್ಪಾ ಶೆಟ್ಟಿ, ಪತಿ ರಾಜ್‌ಕುಂದ್ರಾಗೆ ಸೇರಿದ ಬರೋಬ್ಬರಿ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

ಬಿಟ್‌ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ಇಡಿ) ನಟಿ ಶಿಲ್ಪಾ ಶೆಟ್ಟಿ...