ರಾಷ್ಟ್ರಪತಿಗಳು ಏಕೆ ಸಂಸತ್ ಭವನ ಉದ್ಘಾಟಿಸಬಾರದು: ನಟ ಕಮಲ್‌ ಹಾಸನ್‌ ಪ್ರಶ್ನೆ

Date:

“ದೇಶದ ಹೆಮ್ಮೆಯ ಈ ಕ್ಷಣವು ರಾಜಕೀಯವಾಗಿ ವಿಭಜನೆಯಾಗಿದೆ. ನಾನು ನನ್ನ ಪ್ರಧಾನಿಯವರಿಗೆ ಒಂದು ಸರಳ ಪ್ರಶ್ನೆ ಕೇಳುತ್ತೇನೆ. ನಮ್ಮ ಹೊಸ ಸಂಸತ್ತಿನ ಉದ್ಘಾಟನೆಗೆ ಭಾರತದ ರಾಷ್ಟ್ರಪತಿಗಳು ಏಕೆ ಹಾಜರಾಗಬಾರದು ಎಂದು ದಯವಿಟ್ಟು ದೇಶಕ್ಕೆ ತಿಳಿಸಿ” ಎಂದು ನಟ ಹಾಗೂ ಮಕ್ಕಳ್ ನೀಧಿ ಮಯಂ ಪಕ್ಷದ ಅಧ್ಯಕ್ಷ ಕಮಲ್ ಹಾಸನ್ ಪ್ರಶ್ನಿಸಿದ್ದಾರೆ.

ಈ ಬಗ್ಗೆ ಟ್ವಿಟರ್‌ನಲ್ಲಿ ಬರೆದುಕೊಂಡಿರುವ ಅವರು, ಎಲ್ಲ ರಾಜಕೀಯ ಪಕ್ಷಗಳು ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು, ಉದ್ಘಾಟನಾ ಸಮಾರಂಭವನ್ನು ರಾಷ್ಟ್ರೀಯ ಐಕ್ಯತೆಯ ವಿಶೇಷ ಸಂದರ್ಭವನ್ನಾಗಿಸಬೇಕು ಎಂದು ಮನವಿ ಮಾಡಿದ್ದಾರೆ.

“ಪ್ರಧಾನಿಯವರು ಈ ಪ್ರಮಾದವನ್ನು ಸರಿಪಡಿಸಬೇಕು. ಇಲ್ಲದಿದ್ದರೆ, ಇದು ದೊಡ್ಡ ಪ್ರಮಾದವಾಗಿ ಇತಿಹಾಸದಲ್ಲಿ ದಾಖಲಾಗುತ್ತದೆ. ಒಂದು ವೇಳೆ ಇದನ್ನು ಸರಿಪಡಿಸಿದರೆ, ರಾಜಕೀಯ ನಾಯಕತ್ವದ ಮೈಲುಗಲ್ಲಾಗುತ್ತದೆ” ಎಂದು ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ನೂತನ ಸಂಸತ್ ಭವನದಲ್ಲಿ ಎಲ್ಲ ಪಕ್ಷದ ಸದಸ್ಯರೂ ಇರಬೇಕಾಗುತ್ತದೆ ಎಂದಿರುವ ಕಮಲ್, ಅಸಮಾಧಾನಗಳನ್ನು ಸಾರ್ವಜನಿಕ ವೇದಿಕೆಗಳಲ್ಲಿ ಮತ್ತು ಹೊಸ ಸಂಸತ್ತಿನಲ್ಲಿಯೂ ಪ್ರಸ್ತಾಪಿಸಬಹುದು. ಹಾಗಾಗಿ, ಬಹಿಷ್ಕಾರ ನಿರ್ಧಾರವನ್ನು ಮರುಪರಿಶೀಲಿಸುವಂತೆ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಗುಜರಾತ್‌ | 10ನೇ ತರಗತಿ ಫಲಿತಾಂಶ; 157 ಶಾಲೆಗಳಲ್ಲಿ ಶೂನ್ಯ ಫಲಿತಾಂಶ; ಟ್ವಿಟರ್‌ನಲ್ಲಿ ಟ್ರೆಂಡಿಂಗ್

“ವಿಶ್ವದ ಕಣ್ಣು ನಮ್ಮ ದೇಶದ ಮೇಲಿದೆ. ಹಾಗಾಗಿ ನೂತನ ಸಂಸತ್ತಿನ ಉದ್ಘಾಟನಾ ಸಮಾರಂಭವನ್ನು ರಾಷ್ಟ್ರೀಯ ಐಕ್ಯತಾ ವಿಶೇಷ ಸಂದರ್ಭವಾಗಿಸಬೇಕಿದೆ. ನಮ್ಮ ರಾಜಕೀಯ ಭಿನ್ನಾಭಿಪ್ರಾಯಗಳನ್ನು ಮುಂದೂಡೋಣ” ಎಂದಿದ್ದಾರೆ.

“ಈ ಐತಿಹಾಸಿಕ ಸಾಧನೆಗಾಗಿ ಭಾರತ ಸರ್ಕಾರವನ್ನು ನಾನು ಅಭಿನಂದಿಸುತ್ತೇನೆ. ಸಮಾರಂಭಕ್ಕೆ ಗೌರವಾನ್ವಿತ ರಾಷ್ಟ್ರಪತಿಯವರಿಗೆ ಆಹ್ವಾನ ನೀಡದಿರುವ ಬಗ್ಗೆ ಮತ್ತು ಉದ್ಘಾಟನಾ ಸಮಾರಂಭದಲ್ಲಿ ವಿಪಕ್ಷಗಳು ಪಾಲ್ಗೊಳ್ಳದಿರುವ ಬಗ್ಗೆ ಅಸಮಾಧಾನ ಉಳಿಸಿಕೊಂಡು ದೇಶದ ಹಿತದೃಷ್ಟಿಯಿಂದ ನಾನು ಉದ್ಘಾಟನೆಯಲ್ಲಿ ಪಾಲ್ಗೊಳ್ಳುತ್ತೇನೆ” ಎಂದು ತಿಳಿಸಿದ್ದಾರೆ.

ಕಾಂಗ್ರೆಸ್, ಎಎಪಿ, ಟಿಎಂಸಿ, ಸಮಾಜವಾದಿ ಪಕ್ಷ ಸೇರಿದಂತೆ 20 ವಿರೋಧ ಪಕ್ಷಗಳು, ಸಂಸತ್ ಭವನದ ಉದ್ಘಾಟನಾ ಸಮಾರಂಭ ಬಹಿಷ್ಕರಿಸುವುದಾಗಿ ಘೋಷಿಸಿವೆ. ಹಾಗೆಯೇ ಬಿಜೆಡಿ, ಟಿಡಿಪಿ, ವೈಎಸ್‌ಆರ್‌ ಕಾಂಗ್ರೆಸ್, ಜೆಡಿಎಸ್ ಸೇರಿ ಹಲವು ಪಕ್ಷಗಳು ಸಮಾರಂಭದಲ್ಲಿ ಪಾಲ್ಗೊಳ್ಳುವುದಾಗಿ ತಿಳಿಸಿವೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ ಟಿಕೆಟ್‌ | ಬಣ ಬಡಿದಾಟಕ್ಕೆ ಪೂರ್ಣವಿರಾಮವಿಟ್ಟ ಸಿಎಂ, ಡಿಸಿಎಂ; ಅಭ್ಯರ್ಥಿ ಯಾರು?

ಕೋಲಾರ ಟಿಕೆಟ್‌ ವಿಚಾರವಾಗಿ ಕರ್ನಾಟಕ ಕಾಂಗ್ರೆಸ್ ಪಾಳಯದಲ್ಲಿ ಉಂಟಾಗಿದ್ದ ಬಣಗಳ ಬಡಿದಾಟವನ್ನು...

ಕಂಗನಾ ರಣಾವತ್ ಬಗ್ಗೆ ವಿವಾದಾತ್ಮಕ ಹೇಳಿಕೆ; ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆ

ಹಿಮಾಚಲ ಪ್ರದೇಶದ ಮಂಡಿಯಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಖ್ಯಾತ ನಟಿ ಕಂಗನಾ ರಣಾವತ್...

ಲೋಕಸಭೆ ಕದನ | ಸಂಘರ್ಷ ಪೀಡಿತ ಮಣಿಪುರದಲ್ಲಿ ಬಿಜೆಪಿ ಸ್ಥಿತಿ ಏನಾಗಿದೆ?

ಮಣಿಪುರದಲ್ಲಿ ಬಿಜೆಪಿ ಕಳೆದೆರಡು ಚುನಾವಣೆಯಲ್ಲೂ ಮತಪ್ರಮಾಣದಲ್ಲಿ ಏರಿಕೆ ಕಂಡಿದ್ದರೂ ಈ ಬಾರಿ...

‘ಈಸ್ಟರ್ ಭಾನುವಾರ’ ಕೆಲಸದ ದಿನವೆಂದು ಘೋಷಣೆ; ಮಣಿಪುರ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ

ಕ್ರೈಸ್ತರ ಪ್ರಮುಖ ಹಬ್ಬವಾದ 'ಈಸ್ಟರ್ ಭಾನುವಾರ'ವನ್ನು (ಮಾರ್ಚ್‌ 31) ಕೆಲಸದ ದಿನವಾಗಿ...