ರಾಮಾಯಣ | ನಟ ಯಶ್ ವಿರುದ್ಧ ಕೆಆರ್‌ಕೆ ಟೀಕೆ: ಅಭಿಮಾನಿಗಳ ಆಕ್ರೋಶ

Date:

ನಿತೇಶ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ ‘ರಾಮಾಯಣ’ ಚಲನಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಈ ಬೆನ್ನಲ್ಲೇ, ಚಿತ್ರದಲ್ಲಿ ರಾವಣನ ಪಾತ್ರ ನಿರ್ವಹಿಸಿರುವ ರಾಕಿಂಗ್ ಸ್ಟಾರ್ ಯಶ್ ಅವರ ನಟನೆಯನ್ನು ಚಿತ್ರ ವಿಮರ್ಶಕ ಕಮಾಲ್ ರಶೀದ್ ಖಾನ್ (ಕೆಆರ್‌ಕೆ) ತೀವ್ರವಾಗಿ ಟೀಕಿಸಿದ್ದಾರೆ. ‘ಯಶ್ ಒಬ್ಬ ಕಳಪೆ ನಟ ಹಾಗೂ ರಾವಣನ ಪಾತ್ರಕ್ಕೆ ಅವರ ಧ್ವನಿ ಸೂಕ್ತವಾಗಿಲ್ಲ’ ಎಂದಿದ್ದಾರೆ. ಅವರ ಟೀಕೆಗಾಗಿ ಯಶ್ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಕೆಆರ್‌ಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಕೆಆರ್‌ಕೆ, ‘ರಾಮಾಯಣ’ ಟ್ರೇಲರ್ ವೀಕ್ಷಿಸಿದ ಬಳಿಕ ಯಶ್ ಅವರ ನಟನಾ ಶೈಲಿ ಮತ್ತು ಹಿಂದಿ ಉಚ್ಚಾರಣೆಯನ್ನು ಬಹಿರಂಗವಾಗಿ ಪ್ರಶ್ನಿಸಿದ್ದಾರೆ. “ರಾವಣನಂಥ ಗಂಭೀರ ಮತ್ತು ಪೌರಾಣಿಕ ಪಾತ್ರದಲ್ಲಿ ಯಶ್ ಅವರ ಸಂಭಾಷಣೆ ಸಾಟಿಯಾಗುತ್ತಿಲ್ಲ, ಅವರಿಗೆ ಸರಾಗವಾಗಿ ಹಿಂದಿ ಮಾತನಾಡಲು ಬರದಿದ್ದರೆ ಬೇರೊಬ್ಬರಿಂದ ಡಬ್ಬಿಂಗ್ ಮಾಡಿಸಬೇಕಿತ್ತು” ಎಂಬರ್ಥದಲ್ಲಿ ಕೆಆರ್‌ಕೆ ಪೋಸ್ಟ್ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಕೆಆರ್‌ಕೆ ಅವರ ಈ ಹೇಳಿಕೆ ಹೊರಬೀಳುತ್ತಿದ್ದಂತೆ ಯಶ್ ಅಭಿಮಾನಿಗಳು ರೊಚ್ಚಿಗೆದ್ದಿದ್ದಾರೆ. ಕಮೆಂಟ್ ಬಾಕ್ಸ್‌ನಲ್ಲಿ ಕಮಾಲ್ ರಶೀದ್ ಖಾನ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದಕ್ಷಿಣ ಭಾರತದ ನಟರಾದ ಕಾರಣ ಅವರ ಮಾತಿನಲ್ಲಿ ಪ್ರಾದೇಶಿಕ ಶೈಲಿ ಇರುವುದು ಸಹಜ ಎಂದು ಸಮರ್ಥಿಸಿಕೊಂಡ ನೆಟ್ಟಿಗರು, “ಅಭಿನಯ ಮತ್ತು ಸ್ಕ್ರೀನ್ ಪ್ರೆಸೆಂಟ್ ಭಾಷೆಗಿಂತಲೂ ಹೆಚ್ಚು ಪ್ರಭಾವಶಾಲಿಯಾಗಿರುತ್ತದೆ” ಎಂದು ಹೇಳಿದ್ದಾರೆ.

ಅಷ್ಟೇ ಅಲ್ಲದೆ, ಕೆಆರ್‌ಕೆ ಯಾವುದೇ ಸಿನಿಮಾಗೆ ನೆಗೆಟಿವ್ ರಿವ್ಯೂ ನೀಡಿದರೆ ಆ ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಬ್ಲಾಕ್‌ಬಸ್ಟರ್ ಆಗುವುದು ಖಚಿತ ಎಂದು ಹಲವರು ಕಾಲೆಳೆದಿದ್ದಾರೆ.

ಇದೇ ವೇಳೆ, ಕೆಲವು ನೆಟ್ಟಿಗರು ರಾವಣನ ಪಾತ್ರಕ್ಕೆ ಹಿಂದಿ ಆವೃತ್ತಿಯಲ್ಲಿ ಮತ್ತಷ್ಟು ತೀವ್ರತೆ ತರಲು ಧ್ವನಿ ಬದಲಾಯಿಸುವ ಅಗತ್ಯವಿದೆ ಎಂದೂ ಅಭಿಪ್ರಾಯಪಟ್ಟಿದ್ದಾರೆ.

ರಾಮಾಯಣ ಸಿನಿಮಾದಲ್ಲಿ ರಣಬೀರ್ ಕಪೂರ್ ರಾಮನಾಗಿ, ಸಾಯಿ ಪಲ್ಲವಿ ಸೀತೆಯಾಗಿ ಹಾಗೂ ಯಶ್ ರಾವಣನಾಗಿ ನಟಿಸಿದ್ದಾರೆ. ಬಿಗ್ ಬಜೆಟ್ ಸಿನಿಮಾದ ಟ್ರೇಲರ್ ಪ್ರೇಕ್ಷಕರಲ್ಲಿ ಭಾರೀ ಕುತೂಹಲ ಹುಟ್ಟುಹಾಕಿದ್ದು, ಕೆಆರ್‌ಕೆ ಟೀಕೆಯ ಹೊರತಾಗಿಯೂ ಯಶ್ ಅವರ ರಾವಣನ ಅವತಾರಕ್ಕೆ ಚಿತ್ರಪ್ರೇಮಿಗಳಿಂದ ವ್ಯಾಪಕ ಮೆಚ್ಚುಗೆಯೂ ವ್ಯಕ್ತವಾಗುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ ರಾಜಕೀಯ ತಂತ್ರ

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ....

6ನೇ ತರಗತಿಯಿಂದ ಮೂರು ಭಾಷಾ ನೀತಿ ಅನುಷ್ಠಾನ ಪರಿಶೀಲಿಸಿ: ಸಿಬಿಎಸ್‌ಇಗೆ ಸುಪ್ರೀಂ ಕೋರ್ಟ್‌ ಸೂಚನೆ

ಸಿಬಿಎಸ್‌ಇ ಶಾಲೆಗಳಲ್ಲಿ ಮೂರು ಭಾಷಾ ನೀತಿಯನ್ನು ಜಾರಿಗೆ ತರುವ ವಿಷಯಕ್ಕೆ ಸಂಬಂಧಿಸಿದಂತೆ...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ...