ಹಳದಿ ಜ್ವರ | ಲಸಿಕೆ ಹಾಕಿಸಿಕೊಳ್ಳದ 72 ಮಂದಿ ಕ್ವಾರಂಟೈನ್

Date:

Advertisements
  • ಸುಡಾನ್‌ನಿಂದ ಬಂದವರಲ್ಲಿ ಕೇರಳ ಮೂಲದವರು ಹೆಚ್ಚು
  • ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ 6 ದಿನ ಕ್ವಾರಂಟೈನ್‌

ರಾಜಧಾನಿ ಬೆಂಗಳೂರಿನಲ್ಲಿ ಹಳದಿ ಜ್ವರದ ಭೀತಿ ಹೆಚ್ಚಾಗಿದೆ. ಯುದ್ಧಪೀಡಿತ ಸುಡಾನ್​ನಿಂದ ಆಪರೇಷನ್ ಕಾವೇರಿ ಅಡಿಯಲ್ಲಿ ರಕ್ಷಣೆ ಮಾಡಿ ಭಾರತಕ್ಕೆ ಬಂದವರಲ್ಲಿ 78 ಮಂದಿ ಲಸಿಕೆ ಪಡೆದ ಪ್ರಮಾಣ ಪತ್ರ ಹೊಂದಿಲ್ಲದ ಕಾರಣ, ಅವರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ.

ದೇಶದಲ್ಲಿ ಕಳೆದ ಕೆಲ ದಿನಗಳಿಂದ ಕೋವಿಡ್‌ಗೆ ಒಳಗಾಗುತ್ತಿರುವವರ ಸಂಖ್ಯೆ ಕ್ಷೀಣಿಸಿದೆ. ಆದರೆ, ಹಳದಿ ಜ್ವರ ಮತ್ತು ಅಕಾಲಿಕ ಮಳೆಯ ಪರಿಣಾಮ ಬೆಂಗಳೂರಿನಲ್ಲಿ ಮಲೇರಿಯಾ ಮತ್ತು ಚಿಕನ್‌ ಗುನ್ಯಾಗೆ ಒಳಾಗುತ್ತಿರುವವರಲ್ಲಿ ಕ್ರಮೇಣ ಏರಿಕೆ ಕಂಡಿದೆ.

ಸುಡಾನ್‌ನಿಂದ ಬೆಂಗಳೂರಿಗೆ ಬಂದಿಳಿದವರಲ್ಲಿ, ಕೇರಳ ಮೂಲದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಕರ್ನಾಟಕ, ತೆಲಂಗಾಣ, ತಮಿಳುನಾಡಿನವರು ನಂತರದ ಸ್ಥಾನದಲ್ಲಿದ್ದಾರೆ. ಹೀಗಾಗಿ, ಲಸಿಕೆ ಪಡೆಯದವರನ್ನು ಆರು ದಿನ ರಾಜೀವ್‌ ಗಾಂಧಿ ಆಸ್ಪತ್ರೆಯಲ್ಲಿ ಕ್ವಾರಂಟೈನ್‌ ಮಾಡಲಾಗುತ್ತದೆ. ಕಣ್ಣು ಉರಿ, ಹಳದಿ ಕಣ್ಣು, ಜ್ವರ, ಶೀತ, ಸುಸ್ತು, ಮೈ ಕೈ ನೋವು ಇವುಗಳು ಹಳದಿ ಜ್ವರದ ಲಕ್ಷಣಗಳಾಗಿವೆ. ಕ್ವರಂಟೈನ್‌ನಲ್ಲಿರುವವರಿಗೆ ಈ ಲಕ್ಷಣಗಳು ಕಂಡುಬಂದಿಲ್ಲ. ಚಿಕಿತ್ಸೆ ನೀಡಲು ಸೂಚಿಸಲಾಗಿದೆ ಎಂದು ಆರೋಗ್ಯ ಇಲಾಖೆಯ ಆಯುಕ್ತ ರಂದೀಪ್‌ ಹೇಳಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ?: ತಾಪಮಾನ ಹೆಚ್ಚಳ; ಮಧ್ಯಾಹ್ನದ ಕಾರ್ಯಕ್ರಮ ರದ್ದುಮಾಡಿ | 10 ಮುಖ್ಯ ಅಂಶ

ಸುಡಾನ್‌ನಲ್ಲಿ ಸಿಲುಕಿಕೊಂಡಿದ್ದ 229 ಮಂದಿ ಭಾನುವಾರ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿದ್ದರು. ಇವರಲ್ಲಿ 31 ಮಂದಿ ಲಸಿಕೆ ಹಾಕಿಸಿಕೊಳ್ಳದವರನ್ನು ಕ್ವಾರಂಟೈನ್‌ ಮಾಡಲಾಗಿದೆ. ಆಪರೇಷನ್‌ ಕಾವೇರಿ ಕಾರ್ಯಾಚರಣೆಯಡಿ ಒಟ್ಟು ದೇಶದ ವಿವಿಧ ರಾಜ್ಯಗಳ 582 ಮಂದಿ ಬೆಂಗಳೂರಿಗೆ ಬಂದಿಳಿದಿದ್ದಾರೆ.

ದಕ್ಷಿಣ ಆಫ್ರಿಕಾ, ದಕ್ಷಿಣ ಅಮೆರಿಕಾ, ಉಗಾಂಡ, ನೈಜೀರಿಯಾ, ಕೀನ್ಯಾ ಸೇರಿ ಕೆಲ ದೇಶಗಳಲ್ಲಿ ಹಳದಿ ಜ್ವರ ಹೆಚ್ಚಳವಾಗಿದೆ. ಹೀಗಾಗಿ ಹಳದಿಜ್ವರ ಕಾಣಿಸಿಕೊಂಡ ದೇಶಗಳಿಂದ ಬರುವವರು ಕಡ್ಡಾಯವಾಗಿ ಹಳದಿ ಜ್ವರದ ಲಸಿಕೆ ಪಡೆದು, ಅದಕ್ಕೆ ಸಂಬಂಧಿಸಿದ ದಾಖಲಾತಿ ತೋರಿಸಿದರಷ್ಟೆ ಅವರನ್ನು ಬಿಡಲಾಗುತ್ತದೆ. ಇಲ್ಲವಾದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಕ್ವಾರಂಟೈನ್‌ ಮಾಡಿ ರೋಗಗಳ ಗುಣ ಲಕ್ಷಣಗಳು ಕಾಣಿಸಿಕೊಳ್ಳದಿದ್ದರೆ ಆಸ್ಪತ್ರೆಯಿಂದ ತೆರಳುವಂತೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ಆರೋಗ್ಯ ಇಲಾಖೆ ಹೇಳಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊರೋನಾ ಸಮಯದಲ್ಲಿ ತಬ್ಲಿಘಿ ಸಭೆ: 70 ಜನರ ವಿರುದ್ಧದ FIR ರದ್ದು; ಕೋರ್ಟ್‌ ಆದೇಶ

ದೇಶದಲ್ಲಿ ಕೊರೋನಾ ಆಕ್ರಮಣ ಆರಂಭವಾಗಿದ್ದ ಸಮಯ 2020ರ ಮಾರ್ಚ್‌ನಲ್ಲಿ ದೆಹಲಿಯಲ್ಲಿ ತಬ್ಲಿಘಿ...

ದಾವಣಗೆರೆ | ಹೃದಯಾಘಾತಕ್ಕೆ ಯುವಕ ಬಲಿ

ದಾವಣಗೆರೆಯ ಉದ್ಯಮಿಯೊಬ್ಬರ ಪುತ್ರ ಕಾಲೇಜು ವಿದ್ಯಾರ್ಥಿ ಹೃದಯಾಘಾತದಿಂದ (Heart Attack) ಕುಸಿದು...

ಮಹಿಳೆಯರನ್ನು ಗರ್ಭಕೋಶ ಕ್ಯಾನ್ಸರ್‌ನಿಂದ ರಕ್ಷಿಸಲು ಎಚ್‌ಪಿವಿ ಲಸಿಕೆ ಅತ್ಯಗತ್ಯ: ಡಾ. ಮಂಗಳ

ಮಹಿಳೆಯರಲ್ಲಿ ಗರ್ಭಕೋಶದ ಕ್ಯಾನ್ಸರ್ ಹೆಚ್ಚಾಗಿ ಕಂಡುಬರುತ್ತಿದೆ. ಈ ಸಮಸ್ಯೆಯಿಂದ ರಕ್ಷಣೆ ಪಡೆಯಲು...

ಕೋವಿಡ್ ಲಸಿಕೆಗೂ ಹಠಾತ್ ಸಾವುಗಳಿಗೂ ಯಾವುದೇ ಸಂಬಂಧವಿಲ್ಲ: ಆರೋಗ್ಯ ಸಚಿವಾಲಯ

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಮತ್ತು ರಾಷ್ಟ್ರೀಯ ರೋಗ ನಿಯಂತ್ರಣ...

Download Eedina App Android / iOS

X