ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಹೆಚ್ಚಳ; ರಾಜ್ಯದಲ್ಲಿ ವರ್ಷಕ್ಕೆ 1.4 ಲಕ್ಷ ಪ್ರಕರಣ ದಾಖಲು

Date:

Advertisements
  • ಅಂಗಡಿಗಳ ಮುಂದೆ ಧೂಮಪಾನಿಗಳ ಕಂಡರೆ ಮಾಲೀಕರಿಗೆ ದಂಡ
  • ಧೂಮಪಾನ ವ್ಯಸನಿಗಳಾಗುತ್ತಿರುವ 24 ವರ್ಷದೊಳಗಿನ ಯುವಕರು

‘ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ’ ಜಾರಿಯಾಗಿ ಇಲ್ಲಿಗೆ ಇಪ್ಪತ್ತು ವರ್ಷಗಳಾಗಿದೆ. ಇದನ್ನು ತಡೆಗಟ್ಟಲು ಆರೋಗ್ಯ ಇಲಾಖೆ ‘ಸ್ಟಾಪ್‌ ಟ್ಯುಬಾಕೊ’ ಅಪ್ಲಿಕೇಶನ್‌ ಜಾರಿ ಮಾಡಿ ಹರಸಾಹಸ ಮಾಡಿದರೂ ಕರ್ನಾಟಕದಲ್ಲಿ ಪ್ರಕರಣಗಳು ವರ್ಷಕ್ಕೆ 1.4 ಲಕ್ಷದಂತೆ ವರದಿಯಾಗುತ್ತಿವೆ ಎಂದು ರಾಜ್ಯ ತಂಬಾಕು ನಿಯಂತ್ರಣ ಕೋಶ ಹೇಳಿದೆ.

ಇತ್ತೀಚೆಗೆ ಧೂಮಪಾನಿಗಳಿಗೆ ವಯಸ್ಸಿನ ಮಿತಿ ಇಲ್ಲದಂತಾಗಿದೆ. ಈ ಬಗ್ಗೆ ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮವಹಿಸಿದರೂ ಮಾರಾಟ ಮಳಿಗೆಗಳಲ್ಲಿ ಎಗ್ಗಿಲ್ಲದೆ ವಯಸ್ಸಿನ ಮಿತಿ ಗಮನಿಸದೆ ಯುವಜನತೆಗೆ ತಂಬಾಕು ಮಾರಾಟ ಮಾಡಲಾಗುತ್ತಿದೆ. ಹೆಚ್ಚಾಗಿ 24 ವರ್ಷದೊಳಗಿನ ಯುವಕರು ಧೂಮಪಾನ ವ್ಯಸನಿಗಳಾಗುತ್ತಿದ್ದಾರೆ ಎಂದು ರಾಜ್ಯ ತಂಬಾಕು ನಿಯಂತ್ರಣ ಕೋಶ (ಎಸ್‌ಟಿಸಿಸಿ) ಆತಂಕ ವ್ಯಕ್ತಪಡಿಸಿದೆ.

2003ರಲ್ಲಿ ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಕಾಯಿದೆ (ಕೋಟ್ಪಾ) ಅಡಿ ಭಾರತದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಲಾಯಿತು. ಈ ಕಾನೂನನ್ನು 2013ರಲ್ಲಿ ಕರ್ನಾಟಕದಲ್ಲಿ ಪರಿಣಾಮಕಾರಿಯಾಗಿ ಜಾರಿಗೊಳಿಸಲಾಯಿತು.

Advertisements

ಇತ್ತೀಚಿನ ವರ್ಷಗಳಲ್ಲಿ ವರದಿಯಾದ ಪ್ರಕರಣಗಳು ಎಷ್ಟು?

2013ರಲ್ಲಿ ಪೋಲಿಸ್ ಮತ್ತು ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಕಾರ್ಯಾಚರಣೆ ನಡೆಸಿ, 46,935 ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಪ್ರಕರಣಗಳನ್ನು ದಾಖಲಿಸಿದ್ದರು. 2014ರಲ್ಲಿ ಈ ಸಂಖ್ಯೆ 1.4 ಲಕ್ಷಕ್ಕೆ ಏರಿಕೆಯಾಯಿತು. ಅಂದಿನಿಂದ ಇಲ್ಲಿಯವರೆಗೂ ಪ್ರಕರಣಗಳು ವಾರ್ಷಿಕವಾಗಿ ಏರಿಕೆಯಾಗುತ್ತಲೇ ಇವೆ ಎಂದು ತಂಬಾಕು ನಿಯಂತ್ರಣ ಕೋಶ ಹೇಳಿದೆ.

ಈ ಸುದ್ದಿ ಓದಿದ್ದೀರಾ? ಗರಿಷ್ಠ 40 ಡಿಗ್ರಿ ತಾಪಮಾನ; ಪಶ್ಚಿಮ ಬಂಗಾಳ ಶಾಲಾ ಕಾಲೇಜುಗಳಿಗೆ ವಾರದ ರಜೆ ಘೋಷಣೆ

2019 ಮತ್ತು 2020ರಲ್ಲಿ 1.8 ಲಕ್ಷ ಪ್ರಕರಣಗಳು ದಾಖಲಾಗಿವೆ. 1.4 ಲಕ್ಷ ಪ್ರಕರಣಗಳು 2021 ಮತ್ತು 2022ರಲ್ಲಿ ದಾಖಲಾಗಿವೆ. ಕೊರೊನಾ ಸೋಂಕು ಉಲ್ಬಣಗೊಂಡಿದ್ದರಿಂದ ಈ ವೇಳೆ ದೇಶದಾದ್ಯಂತ ಲಾಕ್‌ಡೌನ್ ಘೋಷಣೆಯಾಗಿತ್ತು. ಹೀಗಾಗಿ ಈ 2021 ಮತ್ತು 2022ರಲ್ಲಿ ಪ್ರಕರಣಗಳು ಅಷ್ಟಾಗಿ ಬೆಳಕಿಗೆ ಬಂದಿರಲಿಲ್ಲ. ಆದರೆ, ಇತ್ತೀಚಿನ ದಿನಗಳಲ್ಲಿ ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆಯಾಗುತ್ತಿವೆ.

ಅಂಗಡಿ ಮಾಲೀಕರಿಗೂ ದಂಡ

“ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವವರನ್ನು ಪತ್ತೆ ಹಚ್ಚಿ ಅವರಿಗೆ ಸಿಒಟಿಪಿಎ ಅಡಿಯಲ್ಲಿ ₹200 ದಂಡ ವಿಧಿಸಲಾಗುತ್ತಿತ್ತು. ಇದು ಕಡಿಮೆ ಮೊತ್ತದ ದಂಡ ಮತ್ತು ಈ ಬಗ್ಗೆ ಧೂಮಪಾನಿಗಳು ಕ್ಯಾರೆ ಎನ್ನುತ್ತಿಲ್ಲ. ಹೀಗಾಗಿ, ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದನ್ನು ಕ್ರಮೇಣವಾಗಿ ನಿಯ್ರಂತಿಸಲು ಅಂಗಡಿ ಮಾಲೀಕರಿಗೂ ದಂಡ ವಿಧಿಸಲು ಚಿಂತಿಸಲಾಗುತ್ತಿದೆ” ಎಸ್‌ಟಿಸಿಸಿಯ ಅಧಿಕಾರಿ ಪ್ರಭಾಕರ್‌ ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊರೋನಾ ಸಮಯದಲ್ಲಿ ತಬ್ಲಿಘಿ ಸಭೆ: 70 ಜನರ ವಿರುದ್ಧದ FIR ರದ್ದು; ಕೋರ್ಟ್‌ ಆದೇಶ

ದೇಶದಲ್ಲಿ ಕೊರೋನಾ ಆಕ್ರಮಣ ಆರಂಭವಾಗಿದ್ದ ಸಮಯ 2020ರ ಮಾರ್ಚ್‌ನಲ್ಲಿ ದೆಹಲಿಯಲ್ಲಿ ತಬ್ಲಿಘಿ...

ದಾವಣಗೆರೆ | ಹೃದಯಾಘಾತಕ್ಕೆ ಯುವಕ ಬಲಿ

ದಾವಣಗೆರೆಯ ಉದ್ಯಮಿಯೊಬ್ಬರ ಪುತ್ರ ಕಾಲೇಜು ವಿದ್ಯಾರ್ಥಿ ಹೃದಯಾಘಾತದಿಂದ (Heart Attack) ಕುಸಿದು...

ಮಹಿಳೆಯರನ್ನು ಗರ್ಭಕೋಶ ಕ್ಯಾನ್ಸರ್‌ನಿಂದ ರಕ್ಷಿಸಲು ಎಚ್‌ಪಿವಿ ಲಸಿಕೆ ಅತ್ಯಗತ್ಯ: ಡಾ. ಮಂಗಳ

ಮಹಿಳೆಯರಲ್ಲಿ ಗರ್ಭಕೋಶದ ಕ್ಯಾನ್ಸರ್ ಹೆಚ್ಚಾಗಿ ಕಂಡುಬರುತ್ತಿದೆ. ಈ ಸಮಸ್ಯೆಯಿಂದ ರಕ್ಷಣೆ ಪಡೆಯಲು...

ಕೋವಿಡ್ ಲಸಿಕೆಗೂ ಹಠಾತ್ ಸಾವುಗಳಿಗೂ ಯಾವುದೇ ಸಂಬಂಧವಿಲ್ಲ: ಆರೋಗ್ಯ ಸಚಿವಾಲಯ

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಮತ್ತು ರಾಷ್ಟ್ರೀಯ ರೋಗ ನಿಯಂತ್ರಣ...

Download Eedina App Android / iOS

X