ಕೇಂದ್ರ ಸರ್ಕಾರ ನಡೆಸುವ ಎಲ್ಲ ಆಸ್ಪತ್ರೆ ಮತ್ತು ಕೇಂದ್ರದ ಆರೋಗ್ಯ ಯೋಜನೆಗೆ ಒಳಪಡುವ ವೈದ್ಯರು ಜನೌಷಧ ವಿಭಾಗಗಳಲ್ಲಿ ಲಭ್ಯವಿರುವ ಔಷಧಗಳನ್ನೇ ರೋಗಿಗಳಿಗೆ ಬರೆದುಕೊಡಬೇಕು. ಆದೇಶವನ್ನು ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.
ಜೆನರಿಕ್ ಔಷಧಗಳನ್ನು ಮಾತ್ರ ಬರೆಯುವಂತೆ ನೋಡಿಕೊಳ್ಳಬೇಕು ಎಂದು ಕೇಂದ್ರ ಸರ್ಕಾರ ಆದೇಶದಲ್ಲಿ ತಿಳಿಸಿದೆ. ಹಲವಾರು ಬಾರಿ ಆರೋಗ್ಯ ಯೋಜನೆ (ಸಿಜಿಎಚ್ಎಸ್) ಅಡಿಯ ‘ಕ್ಷೇಮ ಕೇಂದ್ರ’ ಮತ್ತು ವೈದ್ಯರಿಗೆ ಸೂಚನೆ ನೀಡಿದ್ದರೂ ಸಹ ಕೆಲವು ಸಂದರ್ಭಗಳಲ್ಲಿ ಬ್ರಾಂಡೆಡ್ ಔಷಧ ಬರೆಯುವುದನ್ನು ಮುಂದುವರಿಸಿದ್ದಾರೆ. ಈ ನಡೆ ಒಳಿತಲ್ಲ ಎಂದು ಆರೋಗ್ಯ ಸಚಿವಾಲಯ ಹೇಳಿದೆ.
ಬ್ರಾಂಡೆಡ್ ಔಷಧಗಳನ್ನೇ ಬರೆದುಕೊಡುತ್ತಿರುವುದು, ಎಲ್ಲ ಸಂಸ್ಥೆಗಳ ಮುಖ್ಯಸ್ಥರೂ ಗಮನಿಸಿದ್ದಾರೆ. ಹೀಗಾಗಿ, ಮುಂದಿನ ದಿನಗಳಲ್ಲಿ ಕಡ್ಡಾಯವಾಗಿ ಜನೌಷಧವನ್ನೇ ಬರೆದುಕೊಡಲು ಸೂಚಿಸಲಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಖಚಿತ ಪಡಿಸಿಕೊಂಡ ಹಿನ್ನೆಲೆಯಲ್ಲಿ ಎಚ್ಚರಿಕೆ ರವಾನಿಸಲಾಗಿದೆ, ಎಂದು ಕೇಂದ್ರಗಳಲ್ಲಿ ರೋಗಿಗಳಿಗೆ ಜೆನರಿಕ್ ಆರೋಗ್ಯ ಸೇವೆಗಳ ಮಹಾನಿರ್ದೇಶಕ ಡಾ.ಅತುಲ್ ಗೋಯೆಲ್ ಹೇಳಿದ್ದಾರೆ.
ಈ ಸುದ್ದಿ ಓದಿದ್ದೀರಾ?: ಸಿಬಿಎಸ್ಇ ಫಲಿತಾಂಶ: ಎರಡನೇ ಸ್ಥಾನ ಪಡೆದ ಸಿಲಿಕಾನ್ ಸಿಟಿ