‘ಮಕ್ಕಳ ಪಾಲನೆ ಪೂರ್ಣಾವಧಿ ಕೆಲಸ’ – ಪತ್ನಿಗೆ ಪತಿ ಹಣ ನೀಡಬೇಕು: ಹೈಕೋರ್ಟ್‌ ಆದೇಶ

Date:

Advertisements

ತನ್ನ ಮಕ್ಕಳನ್ನು ಪಾಲನೆ ಮಾಡುವುದಕ್ಕಾಗಿ ಪತ್ನಿಗೆ ಉಪನ್ಯಾಸಕಿ ಹುದ್ದೆ ತೊರೆಯುವಂತೆ ಮಾಡಿದ್ದ ಪತಿ ವಿರುದ್ಧ ಹೈಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ. ಪತ್ನಿಗೆ ಪ್ರತಿ ತಿಂಗಳು 36,000 ರೂ. ನೀಡುವಂತೆ ಜೀವನಾಂಶ ನೀಡುವಂತೆ ಪತಿಗೆ ಆದೇಶಿಸಿದೆ.

ಕೆನರಾ ಬ್ಯಾಂಕ್‌ನಲ್ಲಿ ಮ್ಯಾನೇಜರ್ ಆಗಿದ್ದ ಪತಿ, ತನ್ನ ಮಕ್ಕಳನ್ನು ಪೋಷಿಸುವ ಸಲುವಾಗಿ ಉಪನ್ಯಾಸಕಿಯಾಗಿದ್ದ ಪತ್ನಿಯ ಕೆಲಸ ಬಿಡಿಸಿದ್ದರು. ಅಲ್ಲದೆ, ಆಕೆಗೆ ಜೀವನಾಂಶವನ್ನೂ ನೀಡದೆ ವಂಚಿಸಿದ್ದರು. ತನ್ನ ಪತಿಯ ವರ್ತನೆಯಿಂದ ಬೇಸತ್ತ ಮಹಿಳೆ, ಹೋರ್ಟ್‌ ಮೆಟ್ಟಿಲೇರಿದ್ದರು. ಆಕೆಯ ಅರ್ಜಿ ವಿಚಾರಣೆ ನಡೆಸಿದ್ದ ಸೆಷನ್ಸ್‌ ಕೋರ್ಟ್‌, ಆಕೆಯ ಜೀವನ ವೆಚ್ಚ ಮತ್ತು ಮಕ್ಕಳ ಪಾಲನೆಯ ವೆಚ್ಚಕ್ಕಾಗಿ ಮಾಸಿಕ 18,000 ರೂ. ನೀಡುವಂತೆ ಆದೇಶಿಸಿತ್ತು. ಆದೇಶವನ್ನು ಪ್ರಶ್ನಿಸಿ ಪತಿ ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ಪತಿಯ ವಾದವನ್ನು ತಿರಸ್ಕರಿಸಿದೆ. ಸೆಷನ್ಸ್‌ ನ್ಯಾಯಾಲಯದ ತೀರ್ಪನ್ನು ಮಾರ್ಪಡಿಸಿ, ಆಕೆಗೆ ಮಾಸಿಕ 36,000 ರೂ. ನೀಡುವಂತೆ ಆದೇಶಿಸಿದೆ.

Advertisements

ಹೆಂಡತಿಯು ‘ಸೋಮಾರಿಯಾಗಿದ್ದಾಳೆ’ ಎಂಬ ಪತಿಯ ವಾದವನ್ನು ಉಲ್ಲೇಖಿಸಿದ ನ್ಯಾಯಾಲಯ, “ಪತ್ನಿಯು ದುಡಿಯುವ ಸಾಮರ್ಥ್ಯ ಹೊಂದಿದ್ದಾಳೆ. ಆದರೆ, ಆಕೆ ಉದ್ಯೋಗ ತೊರೆಯುವಂತೆ ಮಾಡಲಾಗಿದೆ. ಆಕೆಯ ದುಡಿಮೆಯನ್ನು ನಿರ್ಬಂಧಿಸಲಾಗಿದೆ. ಹೀಗಾಗಿ, ಆಕೆ ಜೀವನಾಂಶಕ್ಕೆ ಅರ್ಹಳಾಗಿದ್ದಾರೆ. ಈ ಪ್ರಕರಣ ಮಾತ್ರವಲ್ಲದೆ, ಪ್ರತಿ ಪ್ರಕರಣವನ್ನು ಅರ್ಹತೆಯ ಮೇಲೆ ಪರಿಗಣಿಸಬೇಕು. ಹೆಂಡತಿ, ಗೃಹಿಣಿ ಮತ್ತು ತಾಯಿಯಾಗಿ ಅವಿಶ್ರಾಂತವಾಗಿ ಮಹಿಳೆ ಕೆಲಸ ಮಾಡುತ್ತಾಳೆ. ಮಕ್ಕಳನ್ನು ನೋಡಿಕೊಳ್ಳುವುದು ಪೂರ್ಣ ಸಮಯದ ಕೆಲಸವಾಗಿದೆ” ಎಂದು ನ್ಯಾಯಾಲಯ ಹೇಳಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X