ದೇಶದಲ್ಲಿ ₹1 ಲಕ್ಷ ಕೋಟಿ, ರಾಜ್ಯದಲ್ಲಿ ₹21 ಸಾವಿರ ಕೋಟಿ ಸಕ್ಕರೆ ವಹಿವಾಟು: ಸಚಿವ ಶಿವಾನಂದ ಪಾಟೀಲ

Date:

Advertisements

ಕರ್ನಾಟಕದಿಂದಲೇ ₹21 ಸಾವಿರ ಕೋಟಿ ಸಕ್ಕರೆ ವಹಿವಾಟು ನಡೆದಿದ್ದು, ದೇಶದಲ್ಲಿ ಇದೇ ವರ್ಷ ₹1 ಲಕ್ಷ ಕೋಟಿಗೂ ಅಧಿಕ ಸಕ್ಕರೆ ವಹಿವಾಟು ನಡೆದಿದೆ. ನಮ್ಮ ರಾಜ್ಯದ್ದೇ ಇದರಲ್ಲಿ ಸಿಂಹಪಾಲು ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ ತಿಳಿಸಿದರು.

ಬೆಳಗಾವಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಒಂದೇ ವರ್ಷದಲ್ಲಿ ಕಬ್ಬು ಕಳಿಸಿದ ರೈತರಿಗೆ ₹20 ಸಾವಿರ ಕೋಟಿಗೂ ಅಧಿಕ ಬಿಲ್‌ ನೀಡಲಾಗಿದೆ. ಶೇ.99ರಷ್ಟು ಬಿಲ್‌ ಪಾವತಿಯಾಗಿದ್ದು, ಕೆಲವರದ್ದು ಮಾತ್ರ ತಾಂತ್ರಿಕ ಕಾರಣ ಬಾಕಿ ಉಳಿದಿದೆ” ಎಂದರು.

“ರಾಜ್ಯದಲ್ಲಿ ಸಹಕಾರ ಹಾಗೂ ಖಾಸಗಿ ವಲಯ ಸೇರಿ 76 ಸಕ್ಕರೆ ಕಾರ್ಖಾನೆಗಳು ಚಾಲ್ತಿಯಲ್ಲಿವೆ. ಬೆಳಗಾವಿಯಲ್ಲಿರುವ ಎಸ್‌.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಗೆ ಪ್ರತಿ ಕಾರ್ಖಾನೆಯೂ ಪ್ರತಿ ಟನ್‌ ಸಕ್ಕೆರೆಗೆ ₹1 ಪಾವತಿಸುತ್ತದೆ. ಹೀಗೆ ಪಾವತಿಯಾದ ಮೊತ್ತವೇ ₹8 ಕೋಟಿ ಆಗಿದೆ” ಎಂದು ವಿವರಿಸಿದರು.

Advertisements

ಆರ್‌ ವಿ ದೇಶಪಾಂಡೆ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, “ವರಿಷ್ಠರು ಒಪ್ಪಿದರೆ ಮುಖ್ಯಮಂತ್ರಿ ಆಗುತ್ತೇನೆ ಎಂದು ಆರ್.ವಿ.ದೇಶಪಾಂಡೆ ಹೇಳಿದ್ದು ವೈಯಕ್ತಿಕ ವಿಚಾರ. ಅವರು ಹಿರಿಯ ಶಾಸಕ. ಮುಖ್ಯಮಂತ್ರಿ ಸ್ಥಾನ ಬಯಸುವುದರಲ್ಲಿ ತಪ್ಪೇನಿದೆ? ಆದರೆ, ಸದ್ಯ ಸಿಎಂ ಕುರ್ಚಿ ಖಾಲಿ ಇಲ್ಲ” ಎಂದರು.

ಪಂಚಮಸಾಲಿ 2ಎ ಮೀಸಲಾತಿ ವಿಚಾರವಾಗಿ ಪ್ರತಿಕ್ರಿಯಿಸಿ, “ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಬೇಡಿಕೆ ಸಂಬಂಧ ಕೂಡಲಸಂಗಮದ ಸ್ವಾಮೀಜಿ ಹಲವು ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ಸಮಯ ಬಂದಾಗ ಸಿಎಂ ನಿರ್ಧಾರ ತೆಗೆದುಕೊಳ್ಳಲಿದ್ದಾರೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X