ವಸತಿ ಯೋಜನೆಗಳಲ್ಲಿ ಶೇ.15 ಮೀಸಲಾತಿ |‌ ಕೇಂದ್ರದ ಮಾದರಿ ಅನುಸರಿಸಿದ್ದೇವೆ: ಸಚಿವ ಜಮೀರ್ ಅಹಮದ್

Date:

Advertisements

ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಶೇ.15 ರಷ್ಟು ಮೀಸಲು ನಿರ್ಧಾರ ಈಗ ಕೈಗೊಂಡ ತೀರ್ಮಾನವಲ್ಲ. 2019 ರಲ್ಲಿ ಸಮ್ಮಿಶ್ರ ಸರ್ಕಾರದಲ್ಲಿ ಎಚ್ ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ರಚಿಸಿದ್ದ ಸಂಪುಟ ಉಪ ಸಮಿತಿ ಶಿಫಾರಸ್ಸು ಮಾಡಿತ್ತು ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ಸಾಚಾರ್ ಸಮಿತಿ ವರದಿ ಪ್ರಕಾರ ಕೇಂದ್ರ ಸರ್ಕಾರದಲ್ಲಿ ಈಗಾಗಲೇ ವಸತಿ ಯೋಜನೆಗಳಲ್ಲಿ ಶೇ.15 ರಷ್ಟು ಮೀಸಲಾತಿ ಅಲ್ಪಸಂಖ್ಯಾತ ಸಮುದಾಯಕ್ಕೆ ಇದೆ. ಅದೇ ರೀತಿ ರಾಜ್ಯದಲ್ಲೂ ನೀಡಬೇಕು ಎಂಬ ಬೇಡಿಕೆ ಇತ್ತು. ಹೀಗಾಗಿ ಕೇಂದ್ರದ ಮಾದರಿಯನ್ನೇ ಅನುಸರಿಸಲಾಗಿದೆ” ಎಂದು ಹೇಳಿದ್ದಾರೆ.

“ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಯಾಗಿದ್ದಾಗ ರಚಿಸಿದ್ದ ಸಂಪುಟ ಉಪ ಸಮಿತಿ ಶಿಫಾರಸ್ಸು ಮಾಡಿತ್ತು.ಇದೀಗ ಸಂಪುಟದ ಮುಂದೆ ಬಂದು ಒಪ್ಪಿಗೆ ದೊರೆತಿದೆ. ಈಗಾಗಲೇ ಇದ್ದ ಶೇ.10 ರಷ್ಟು ಮೀಸಲಾತಿ ಪ್ರಮಾಣ ಶೇ. 15ಕ್ಕೆ ಹೆಚ್ಚಿಸಲಾಗಿದೆ” ಎಂದಿದ್ದಾರೆ.

Advertisements

“ಅಲ್ಪಸಂಖ್ಯಾತ ಸಮುದಾಯದಲ್ಲಿ ಹೆಚ್ಚಿನ ಬಡ ಕುಟುಂಬಗಳಿದ್ದು ವಸತಿ ರಹಿತರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಮೀಸಲಾತಿ ಪ್ರಮಾಣ ಹೆಚ್ಚಿಸುವ ಬೇಡಿಕೆ ಇತ್ತು. 2021 ರಾಷ್ಟ್ರೀಯ ಅಲ್ಪಸಂಖ್ಯಾತ ರ ಆಯೋಗವು ಸಹ ಶೇ.15 ರಷ್ಟು ಮೀಸಲಾತಿ ಜಾರಿಗೊಳಿಸಬೇಕು ಎಂದು ತಿಳಿಸಿತ್ತು. ಈ ವಾಸ್ತವ ಅಂಶ ತಿಳಿಯದೆ ಪ್ರತಿಪಕ್ಷಗಳು ಅನಗತ್ಯ ಟೀಕೆ ಮಾಡುತ್ತಿರುವುದು ಶೋಭೆ ತರುವುದಿಲ್ಲ” ಎಂದು ಜಮೀರ್ ಅಹಮದ್ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X