21 ಐಎಎಸ್‌ ಅಧಿಕಾರಿಗಳ ವರ್ಗಾವಣೆ

Date:

Advertisements

ಮೈಸೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾಗಿರುವ ಹಗರಣವನ್ನು ಬಯಲಿಗೆಳೆದಿದ್ದ ಮೈಸೂರು ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರ ಸೇರಿದಂತೆ 21 ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಅಧಿಕಾರಿಗಳನ್ನು ವಿವಿಧ ಇಲಾಖೆಗಳಿಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಸದ್ಯ, ರಾಜ್ಯ ಸರ್ಕಾರಕ್ಕೆ ಮುಡಾ ಹಗರಣ ತಲೆನೋವಾಗಿದೆ. ವರ್ಷದ ಹಿಂದೆಯೇ ಹಗರಣದ ಬಗ್ಗೆ ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರ ಅವರು ರಾಜ್ಯ ಸರ್ಕಾರದ ಗಮನಕ್ಕೆ ತಂದಿದ್ದರು. ಆದರೆ, ಇದೀಗ ಹಗರಣ ಭಾರೀ ಸದ್ದು ಮಾಡುತ್ತಿದೆ. ಈ ನಡುವೆ, ಹಗರಣವನ್ನು ಸರ್ಕಾರದ ಗಮನಕ್ಕೆ ತಂದಿದದ್ದ ಕೆ.ವಿ ರಾಜೇಂದ್ರ ಅವರನ್ನು ಪ್ರವಾಸೋದ್ಯಮ ಇಲಾಖೆಗೆ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ. ಮೈಸೂರು ಪಾಲಿಕೆ ಆಯುಕ್ತರಾಗಿದ್ದ ಲಕ್ಷ್ಮೀಕಾಂತ್ ರೆಡ್ಡಿ ಅವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾಯಿಸಲಾಗಿದೆ.

ವಿವಿಧ ಹುದ್ದೆಗಳಿಗೆ ವರ್ಗಾವಣೆಗೊಂಡ ಅಧಿಕಾರಿಗಳ ಪಟ್ಟಿ;

Advertisements
  1. ಕೆ.ವಿ ರಾಜೇಂದ್ರ: ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ
  2. ಲಕ್ಷ್ಮೀಕಾಂತ್ ರೆಡ್ಡಿ: ಜಿಲ್ಲಾಧಿಕಾರಿ, ಮೈಸೂರು
  3. ಡಾ. ರಾಮ್‌ ಪ್ರಸಾದ್ ಮನೋಹರ್‌ ವಿ: ಹೆಚ್ಚುವರಿ ಕಾರ್ಯದರ್ಶಿ, ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಹಾಗೂ ಅಧ್ಯಕ್ಷರು, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ
  4. ನಿತೇಶ್ ಪಾಟೀಲ್: ನಿರ್ದೇಶಕರು, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು ಇಲಾಖೆ
  5. ಡಾ. ಅರುಂಧತಿ ಚಂದ್ರಶೇಖರ್: ಆಯುಕ್ತರು, ಪಂಚಾಯತ್ ರಾಜ್ ಇಲಾಖೆ
  6. ಜ್ಯೋತಿ ಕೆ: ಆಯುಕ್ತರು, ಜವಳಿ ಅಭಿವೃದ್ಧಿ ಹಾಗೂ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ
  7. ಶ್ರೀಧರ ಸಿಎನ್: ನಿರ್ದೇಶಕರು, ಸಾಮಾಜಿಕ ಲೆಕ್ಕ ಪರಿಶೋಧನೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
  8. ಚಂದ್ರಶೇಖರ ನಾಯಕ ಎಲ್: ಹೆಚ್ಚುವರಿ ಆಯುಕ್ತರು, ವಾಣಿಜ್ಯ ತೆರಿಗೆ ಇಲಾಖೆ
  9. ವಿಜಯಮಹಾಂತೇಶ ಬಿ ದಾನಮ್ಮನವರ್: ಜಿಲ್ಲಾಧಿಕಾರಿ, ಹಾವೇರಿ
  10. ಗೋವಿಂದ ರೆಡ್ಡಿ: ಜಿಲ್ಲಾಧಿಕಾರಿ, ಗದಗ
  11. ರಘುನಂದನ್ ಮೂರ್ತಿ: ಆಯುಕ್ತರು, ಖಜಾನೆಗಳು ಮತ್ತು ಲೆಕ್ಕಪತ್ರ ಇಲಾಖೆ
  12. ಡಾ. ಗಂಗಾಧರಸ್ವಾಮಿ ಜಿ ಎಂ: ಜಿಲ್ಲಾಧಿಕಾರಿ, ದಾವಣಗೆರೆ
  13. ನಿತೀಶ್ ಕೆ: ಜಿಲ್ಲಾಧಿಕಾರಿ, ರಾಯಚೂರು
  14. ಮೊಹಮ್ಮದ್ ರೋಶನ್: ಜಿಲ್ಲಾಧಿಕಾರಿ, ಬೆಳಗಾವಿ
  15. ಶಿಲ್ಪಾ ಶರ್ಮಾ: ಜಿಲ್ಲಾಧಿಕಾರಿ, ಬೀದರ್
  16. ಡಾ ದಿಲೀಶ್ ಸಸಿ: ಕೇಂದ್ರ ಸಿಇಒ, ಇ-ಆಡಳಿತ
  17. ಲೋಖಂಡೆ ಸ್ನೇಹಲ್ ಸುಧಾಕರ್: ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ವಿದ್ಯುತ್ ಕಾರ್ಖಾನೆ ಲಿಮಿಟೆಡ್
  18. ಶ್ರೀರೂಪ: ಆಯುಕ್ತರು, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ
  19. ಗಿಟ್ಟೆ ಮಾಧವ್ ವಿಠ್ಠಲ್ ರಾವ್: ಪ್ರಧಾನ ವ್ಯವಸ್ಥಾಪಕರು, ಪುನರ್ವಸತಿ ಕೇಂದ್ರ ಬಾಗಲಕೋಟೆ
  20. ಹೇಮಂತ್ ಎನ್: ಸಿಇಒ, ಜಿಲ್ಲಾ ಪಂಚಾಯತ್, ಶಿವಮೊಗ್ಗ
  21. ಮೊಹಮ್ಮದ್ ಅಲಿ ಅಕ್ರಮ್ ಶಾ: ಮುಖ್ಯ ಕಾರ್ಯನಿರ್ವಾಹಕ, ಜಿಲ್ಲಾ ಪಂಚಾಯತ್, ವಿಜಯನಗರ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X