232 ಗ್ರೇಡ್-2 ತಹಶೀಲ್ದಾರ್‌ಗಳಿಗೆ ಗ್ರೇಡ್-1 ಹುದ್ದೆಗೆ ಬಡ್ತಿ: ಡಿಸಿಎಂ ಡಾ. ಜಿ ಪರಮೇಶ್ವರ್

Date:

ರಾಜ್ಯ ಕಂದಾಯ ಇಲಾಖೆಯಲ್ಲಿ ಕಳೆದ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಗ್ರೇಡ್-2 ತಹಶೀಲ್ದಾರ್‌ಗಳ ಬಡ್ತಿ ಪ್ರಕ್ರಿಯೆಗೆ ಕೊನೆಗೂ ಮುಕ್ತಿ ಸಿಕ್ಕಿದೆ. ಒಟ್ಟು 232 ಗ್ರೇಡ್-2 ತಹಶೀಲ್ದಾರ್‌ಗಳಿಗೆ ಗ್ರೇಡ್-1 ತಹಶೀಲ್ದಾರ್ ಹುದ್ದೆಗೆ ಬಡ್ತಿ ನೀಡಿ ಸರ್ಕಾರ ಆದೇಶ ಹೊರಡಿಸಿದ್ದು, ಕಂದಾಯ ಅಧಿಕಾರಿಗಳ ಬಹುಕಾಲದ ಕಾಯುವಿಕೆಗೆ ಅಂತ್ಯ ಹಾಡಲಾಗಿದೆ.

- Advertisement -

ಈ ಮಹತ್ವದ ಬೆಳವಣಿಗೆಯ ಕುರಿತು ಡಿಸಿಎಂ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಪ್ರತಿಕ್ರಿಯಿಸಿದ್ದು, “ಇದೊಂದು ಕೇವಲ ಆಡಳಿತಾತ್ಮಕ ಮೈಲುಗಲ್ಲಷ್ಟೇ ಅಲ್ಲ; ಬದಲಿಗೆ ನ್ಯಾಯಬದ್ಧ, ಪಾರದರ್ಶಕ ಹಾಗೂ ಸಮಯೋಚಿತ ನಿರ್ಧಾರಗಳ ಮೂಲಕ ಆಡಳಿತ ಯಂತ್ರವನ್ನು ಬಲಪಡಿಸುವ ಸರ್ಕಾರದ ದೃಢವಾದ ಬದ್ಧತೆಯನ್ನು ಇದು ಪ್ರತಿಬಿಂಬಿಸುತ್ತದೆ” ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸಾಕ್ಷ್ಯ ಚಿತ್ರಗಳಿರದ ದೇಶವು ಚರಿತ್ರೆ ಇರದ ರಾಷ್ಟ್ರದಂತೆ ಎಂದಿದ್ದ...

ಚಿಲಿ ದೇಶದ ಜನರ ಸಾಮಾಜಿಕ ಬದುಕು ಹಾಗೂ ರಾಜಕೀಯ ಬೆಳವಣಿಗೆಗಳು ಹೆಣೆದುಕೊಂಡ ಘನವಾದ ಚರಿತ್ರೆಯ ಸಂಪುಟವಾಗಿ ಕಟ್ಟಿದ ಧೀಮಂತ ಸಿನೆಮಾ ಕಲಾವಿದ ಪ್ಯಾಟ್ರಿಷಿಯೊ ಗುಜ್ಮಾನ್, ಇತ್ತೀಚಿಗೆ ಇಲ್ಲವಾದರು. ಅವರ ಸೃಜನಶೀಲತೆ, ತುಡಿತ ಮತ್ತು...

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಹಲವು ವರ್ಷಗಳಿಂದ ಬಾಕಿ ಉಳಿದಿದ್ದ ಈ ಬಡ್ತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಮೂಲಕ, ಅಧಿಕಾರಿಗಳಲ್ಲಿ ಹೊಸ ಹುರುಪು ತುಂಬಲಾಗಿದೆ. “ಸರ್ಕಾರವು ಸದಾ ಅರ್ಹತೆ, ಬದ್ಧತೆ ಮತ್ತು ಪ್ರಾಮಾಣಿಕತೆಯನ್ನು ಗುರುತಿಸಿ ಪ್ರೋತ್ಸಾಹಿಸುತ್ತದೆ ಎಂಬ ವಿಶ್ವಾಸವನ್ನು ನೌಕರ ವರ್ಗದಲ್ಲಿ ಮೂಡಿಸುವಲ್ಲಿ ನಾವು ಯಶಸ್ವಿಯಾಗಿದ್ದೇವೆ” ಎಂದು ಸಚಿವರು ಹರ್ಷ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಈ ಪ್ರಕ್ರಿಯೆಯನ್ನು ಸುಗಮವಾಗಿ ಸಾಕಾರಗೊಳಿಸಲು ಶ್ರಮಿಸಿದ ಕಂದಾಯ ಇಲಾಖೆಯ ಎಲ್ಲಾ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

ಇದನ್ನು ಓದಿದ್ದೀರಾ? ಪಂಜಾಬ್‌ ಸಿಎಂಗೆ ‘ಗುರುದ್ರೋಹಿ’ ಪಟ್ಟ: ಚುನಾವಣಾ ಹೊತ್ತಲ್ಲೇ ಆಪ್‌ಗೆ ನುಂಗಲಾರದ ತುತ್ತು

ಬಡ್ತಿ ಪಡೆದಿರುವ ಎಲ್ಲಾ 232 ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿರುವ ಡಾ. ಪರಮೇಶ್ವರ ಅವರು, “ಬಡ್ತಿಯೊಂದಿಗೆ ಅಧಿಕಾರಿಗಳ ಜವಾಬ್ದಾರಿಯೂ ಹೆಚ್ಚಾಗಿದೆ. ನಾಡಿನ ಜನತೆಗೆ ಇನ್ನಷ್ಟು ದಕ್ಷತೆ, ಕಾಳಜಿ ಹಾಗೂ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸುವ ಮೂಲಕ ಅಧಿಕಾರಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲಿದ್ದಾರೆ ಎಂಬ ಸಂಪೂರ್ಣ ವಿಶ್ವಾಸ ನನಗಿದೆ. ಕಂದಾಯ ಇಲಾಖೆಯು ಪ್ರತಿಯೊಬ್ಬ ನಾಗರಿಕರಿಗೂ ಪಾರದರ್ಶಕ, ಉತ್ತರದಾಯಿ ಹಾಗೂ ಕಾಳಜಿಯುಕ್ತ ಸೇವೆಯನ್ನು ಒದಗಿಸಬೇಕೆಂಬ ಸಂಕಲ್ಪದ ಭಾಗವೇ ಈ ನಿರ್ಧಾರವಾಗಿದೆ” ಎಂದು ತಿಳಿಸಿದ್ದಾರೆ.

ಸ್ವಯಂಸ್ಫೂರ್ತಿಯಿಂದ ಕಾರ್ಯನಿರ್ವಹಿಸುವ ಅಧಿಕಾರಿ ವರ್ಗವೇ ಯಾವುದೇ ಸರ್ಕಾರಕ್ಕೆ ಅತಿ ದೊಡ್ಡ ಆಸ್ತಿಯಾಗಿದ್ದು, ವೃತ್ತಿ ನೈಪುಣ್ಯತೆಗೆ ಒತ್ತು ನೀಡುವ ಆಡಳಿತ ಸಂಸ್ಕೃತಿ ನಿರ್ಮಾಣಕ್ಕೆ ಸರ್ಕಾರ ಬದ್ಧವಾಗಿದೆ. ಮುಂಬರುವ ದಿನಗಳಲ್ಲಿ ಕಂದಾಯ ಇಲಾಖೆಯನ್ನು ಮತ್ತಷ್ಟು ವೇಗ ಮತ್ತು ಜವಾಬ್ದಾರಿಯುತವಾಗಿ ಸೇವೆ ಒದಗಿಸುವ ‘ಜನಕೇಂದ್ರಿತ’ ಸಂಸ್ಥೆಯಾಗಿ ರೂಪಿಸಲಾಗುವುದು. ಅಧಿಕಾರಿಗಳಲ್ಲಿ ವಿಶ್ವಾಸ ಹಾಗೂ ಜನಸಾಮಾನ್ಯರಲ್ಲಿ ಭರವಸೆ ಮೂಡಿಸುವ ಅತ್ಯುತ್ತಮ ಕಂದಾಯ ಆಡಳಿತವನ್ನು ಒಟ್ಟಾಗಿ ನಿರ್ಮಿಸುವ ಮೂಲಕ ‘ನವ ಕರ್ನಾಟಕ’ ಕಟ್ಟೋಣ ಎಂದು ಸಚಿವರು ಕರೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಲ್ಲಿ 14,500 ಮಕ್ಕಳು ನಾಪತ್ತೆ: ಎಫ್‌ಐಆರ್ ವಿಳಂಬಕ್ಕೆ ಪೊಲೀಸರ ವಿರುದ್ಧ ಹೈಕೋರ್ಟ್‌ ಗರಂ

ನಳಂದಾ ಜಿಲ್ಲೆಯ ಆಸ್ಪತ್ರೆಯೊಂದರಿಂದ ನವಜಾತ ಶಿಶು ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್...

ಇಸ್ಲಾಂಗೆ ಯುವಕ ಮತಾಂತರ; ‘ಬ್ರೇನ್‌ವಾಶ್’ ಆರೋಪ: ಇಷ್ಟದ ಧರ್ಮ ಅನುಸರಿಸುವ ಸ್ವಾತಂತ್ರ್ಯವಿದೆ ಎಂದ ಹೈಕೋರ್ಟ್

ವಯಸ್ಕನಾದ ವ್ಯಕ್ತಿಗೆ ತನ್ನಿಷ್ಟದ ಧರ್ಮವನ್ನು ಅನುಸರಿಸುವ ಹಾಗೂ ಜೀವನಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವ...

ಧಾರವಾಡ | ಲೋಕಾಯುಕ್ತ ದಾಳಿ; 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಸಿಕ್ಕಿಬಿದ್ದ ತಹಶೀಲ್ದಾರ್ ಸಚ್ಚಿದಾನಂದ

ಭೂ ದಾಖಲೆಗಳ ತಿದ್ದುಪಡಿ ಮತ್ತು 'ಖರಾಬು' ಜಮೀನಿನ ಮಾರ್ಪಾಟು ಮಾಡಿಕೊಡಲು ಬರೋಬ್ಬರಿ...

ಅಂತಾರಾಷ್ಟ್ರೀಯ ಜಲಸೀಮೆಯಲ್ಲಿ ಭಾರತ- ಪಾಕ್ ಯುದ್ಧನೌಕೆಗಳು ಢಿಕ್ಕಿ ಹೊಡೆದ ಕತೆಯೇನು?

ಅರಬ್ಬಿ ಸಮುದ್ರದ ಉತ್ತರ ಭಾಗದ ಅಂತಾರಾಷ್ಟ್ರೀಯ ಜಲಸೀಮೆಯಲ್ಲಿ ಭಾರತ ಮತ್ತು ಪಾಕಿಸ್ತಾನದ...