RSS-BJPಯ ಷಡ್ಯಂತ್ರ ಸೋಲಿಸಲು 2ನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ: ಬಿ ಕೆ ಹರಿಪ್ರಸಾದ್

Date:

SIR ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ ಎಲ್ಲಾ ಮುಖಂಡರೊಂದಿಗೆ ಚರ್ಚೆ ನಡೆಸುತ್ತಿದ್ದೇನೆ. ಮುಖ್ಯವಾಗಿ ರಾಹುಲ್ ಗಾಂಧಿಯವರು ಈ ವಿಚಾರವಾಗಿ ಕೆಲಸ ಮಾಡುತ್ತಿದ್ದಾರೆ. ಗ್ರಾಮ ಸಭೆಗಳಲ್ಲಿ ರೆಸಿಡೆನ್ಸಿಯಲ್ ಡಾಕ್ಯುಮೆಂಟ್ ನೀಡಬೇಕೆಂದು ಮುಖ್ಯಮಂತ್ರಿಗಳು ಈಗಾಗಲೇ ಸೂಚಿಸಿದ್ದಾರೆ. RSS-BJPಯ ಷಡ್ಯಂತ್ರ ಸೋಲಿಸಲು 2ನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಭರವಸೆ ನೀಡಿದರು.

- Advertisement -

ಬೆಂಗಳೂರಿನಲ್ಲಿ ನಡೆದ ಬೃಹತ್ ಪ್ರತಿರೋಧ ಸಮಾವೇಶದಲ್ಲಿ ಮಾತನಾಡಿದ ಅವರು, “ನಾನು ರಾಜಕೀಯಕ್ಕೆ ಬಂದಿರುವುದೇ ಇಂತಹ ಭೇದಭಾವಗಳನ್ನು ತೊಡೆದುಹಾಕಲು. ವಿದ್ಯಾರ್ಥಿ ದೆಸೆಯಿಂದಲೂ ಅನ್ಯಾಯಗಳನ್ನು ಕಂಡಿದ್ದೇನೆ. ದಕ್ಷಿಣ ಭಾರತೀಯರನ್ನು ಮುಂಬೈನಿಂದ ಹೊರಗಿಟ್ಟಿದ್ದು, ನಂತರ ಗುಜರಾತಿಗಳನ್ನು, ಆಮೇಲೆ ಅಲ್ಪಸಂಖ್ಯಾತರನ್ನು ಬಾಂಗ್ಲಾದೇಶಿಗಳೆಂದು ಕರೆದು ಹೊರದೂಡಲು ಮುಂದಾಗಿದ್ದು.. ಇವೆಲ್ಲವೂ ವ್ಯವಸ್ಥಿತ ಹುನ್ನಾರಗಳು. ಚುನಾವಣಾ ಬೂತ್‌ಗಳಲ್ಲಿ ದಲಿತರು ಮತ್ತು ತಳಸಮುದಾಯದವರ ಮತಗಳನ್ನು ಅಳಿಸಿ ಹಾಕುತ್ತಿದ್ದ ದೃಶ್ಯಗಳನ್ನು ನಾನು ಕಣ್ಣಾರೆ ಕಂಡಿದ್ದೇನೆ” ಎಂದರು ಹರಿಪ್ರಸಾದ್.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಸಂವಿಧಾನ ವಿರೋಧಿ ಶಕ್ತಿಗಳು ದೇಶದ ಏಕತೆಯನ್ನು ಒಡೆಯಲು ಹೊಂಚು ಹಾಕುತ್ತಿದ್ದಾರೆ. ಇವರೇ ದೇಶಪ್ರೇಮಿಗಳು ಎಂದು ಕಥೆಗಳನ್ನು ಹೆಣೆಯುತ್ತಾರೆ. ಅಂದಿನ ಕಾಲದ ರಾಜರು-ಮಂತ್ರಿಗಳು ಶ್ರಮಿಕರನ್ನು ನಿರ್ಲಕ್ಷಿಸಿದ್ದರಿಂದಲೇ ದೇಶ ಲೂಟಿಯಾಯಿತು. ಇಂದು ಅದೇ ತಪ್ಪು ಮರುಕಳಿಸುತ್ತಿದೆ. ಬಿಜೆಪಿಗೆ ನಾನು ಸ್ಪಷ್ಟವಾಗಿ ಹೇಳುತ್ತೇನೆ, ಇಂತಹ ಜನವಿರೋಧಿ ನೀತಿಗಳಿಂದಾಗಿ ನಾಳೆ ದೇಶವನ್ನು ರಕ್ಷಿಸಲು ಜನರೇ ಸಿಗುವುದಿಲ್ಲ. ಪ್ರಧಾನಿ ಮೋದಿಯವರ ಡಿಗ್ರಿ ಸರ್ಟಿಫಿಕೇಟ್ ಇನ್ನೂ ಸಿಕ್ಕಿಲ್ಲ, ಆದರೆ ದೇಶದ ಜನರಿಂದ ಮಾತ್ರ ಪ್ರತಿಯೊಂದು ದಾಖಲೆಯನ್ನು ಇವರು ಕೇಳುತ್ತಿದ್ದಾರೆ” ಎಂದು ಲೇವಡಿ ಮಾಡಿದರು.

ಇದನ್ನೂ ಓದಿ: ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ: ಹಿರಿಯ ಸಾಹಿತಿ ಲಲಿತಾ ನಾಯ್ಕ್

“ಚುನಾವಣಾ ಆಯೋಗದಂತಹ ಸಾಂವಿಧಾನಿಕ ಸಂಸ್ಥೆಗಳಲ್ಲಿ ಬಲಪಂಥೀಯರೇ ತುಂಬಿದ್ದಾರೆ. ಜ್ಞಾನ ಕುಮಾರ್ ಅಂತಹ ಅಧಿಕಾರಿಗಳು ಜನಪ್ರತಿನಿಧಿಗಳನ್ನೇ ಭೇಟಿಯಾಗುವುದಿಲ್ಲ ಎಂದರೆ ನ್ಯಾಯಯುತ ಮತದಾನವನ್ನು ಇವರಿಂದ ನಿರೀಕ್ಷಿಸಲು ಸಾಧ್ಯವೇ? ಆರ್‌ಎಸ್‌ಎಸ್‌ ಮಂದಿ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಇರಲಿಲ್ಲ, ಇವತ್ತು ಸಂವಿಧಾನವನ್ನು ಮೊಟಕುಗೊಳಿಸಲು ಎಲ್ಲಾ ರೀತಿಯ ಷಡ್ಯಂತ್ರಗಳನ್ನು ಮಾಡುತ್ತಿದ್ದಾರೆ. ಈ ಹೋರಾಟ ಕೇವಲ ಮುಖ್ಯಮಂತ್ರಿಗಳೊಬ್ಬರಿಂದ ಸಾಧ್ಯವಿಲ್ಲ, ಇದಕ್ಕಾಗಿ ಎರಡನೇ ಸ್ವಾತಂತ್ರ್ಯ ಸಂಗ್ರಾಮವೇ ನಡೆಯಬೇಕಿದೆ” ಎಂದು ಅವರು ಕರೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....

ಅಮೃತಸರದಲ್ಲಿ ಕಳೆದುಹೋಗಿ ಗಯಾದಲ್ಲಿ ಪತ್ತೆ; ಎಐ ತಂತ್ರಜ್ಞಾನದ ನೆರವಿನಿಂದ ಕುಟುಂಬವನ್ನು ಸೇರಿದ ವ್ಯಕ್ತಿ

ಪಂಜಾಬ್‌ನಿಂದ ದಾರಿ ತಪ್ಪಿ 1,200 ಕಿಲೋಮೀಟರ್‌ಗೂ ಹೆಚ್ಚು ದೂರದ ಬಿಹಾರ ತಲುಪಿದ್ದ...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...