ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ.50 ರಿಯಾಯಿತಿ: ಜು.10ರವರೆಗೆ ಅವಕಾಶ

Date:

ರಾಜ್ಯ ಸರ್ಕಾರವು ಬಾಕಿ ಇರುವ ಸಂಚಾರ ನಿಯಮ ಉಲ್ಲಂಘನೆ ದಂಡದ ಮೊತ್ತದ ಮೇಲೆ ಶೇ.50ರಷ್ಟು ವಿನಾಯಿತಿ ಘೋಷಿಸಿದೆ. ವಾಹನ ಸವಾರರು ಜೂನ್ 21ರಿಂದ ಜುಲೈ 10ರವರೆಗೆ ಈ ವಿನಾಯಿತಿಯ ಲಾಭವನ್ನು ಪಡೆದು ದಂಡ ಪಾವತಿಸಲು ಅವಕಾಶ ನೀಡಲಾಗಿದೆ.

- Advertisement -

2023ರಲ್ಲಿ ಒಟ್ಟು ಮೂರು ಬಾರಿ, 2025ರಲ್ಲಿ ಎರಡು ಬಾರಿ ಸಂಚಾರ ದಂಡ ಪಾವತಿಗೆ ರಿಯಾಯಿತಿ ನೀಡಲಾಗಿತ್ತು. ಇದೀಗ ಆರನೇ ಬಾರಿಗೆ ರಿಯಾಯಿತಿ ನೀಡಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಇದನ್ನೂ ಓದಿ: ಸಂಚಾರ ನಿಯಮ ಉಲ್ಲಂಘನೆ: ಮತ್ತೆ ಶೇ.50ರಷ್ಟು ರಿಯಾಯಿತಿ, ಸೆಪ್ಟೆಂಬರ್ 9ರವರೆಗೆ ಅವಕಾಶ

2026ರ ಮೇ ತಿಂಗಳಿಗೂ ಮೊದಲು ಪೊಲೀಸ್ ಇಲಾಖೆಯ ಸಂಚಾರ ಇ-ಚಲನ್‌ಗಳಲ್ಲಿ ದಾಖಲಾಗಿ ಬಾಕಿ ಇರುವ ಪ್ರಕರಣಗಳ ದಂಡದ ಮೊತ್ತ ಮತ್ತು ಸಾರಿಗೆ ಇಲಾಖೆಯಲ್ಲಿ 1991ರಿಂದ 2022ರ ಅವಧಿಯಲ್ಲಿ ದಾಖಲಾಗಿರುವ ದಂಡವನ್ನು ರಿಯಾಯಿತಿ ದರದಲ್ಲಿ ಪಾವತಿಸಬಹುದಾಗಿದೆ ಎಂದು ರಾಜ್ಯ ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿದೆ.

ದಂಡ ಸಂಗ್ರಹಣೆಯನ್ನು ಯಶಸ್ವಿಗೊಳಿಸಲು ಬೆಂಗಳೂರು ಸಂಚಾರ ಪೊಲೀಸರು ನಗರದ 12 ಸ್ಥಳಗಳಲ್ಲಿ ವಿಶೇಷ ಕೌಂಟರ್‌ಗಳನ್ನು ಆರಂಭಿಸಿದ್ದಾರೆ. ಈ ಕೌಂಟರ್‌ಗಳಲ್ಲಿ ವಾಹನ ಸವಾರರು ದಂಡ ಪಾವತಿಸಬಹುದಾಗಿದೆ.

ರಾಜ್ಯದಲ್ಲೀಗ ಸುಮಾರು 5.05 ಕೋಟಿ ಸಂಚಾರ ನಿಯಮ ಉಲಂಘನೆ ಪ್ರಕರಣಗಳು ಬಾಕಿಯಿವೆ. ಅಂದರೆ ಒಟ್ಟಾಗಿ 2,727 ಕೋಟಿ ರೂ. ದಂಡ ಪಾವತಿಯಾಗಬೇಕಿದೆ. ಬೆಂಗಳೂರಿನಲ್ಲೇ 3.37 ಕೋಟಿ ಸಂಚಾರ ನಿಯಮ ಉಲಂಘನೆ ಪ್ರಕರಣಗಳು ಬಾಕಿಯಿದೆ. ಅಂದರೆ 1,843 ಕೋಟಿ ರೂ. ದಂಡ ಬಾಕಿಯಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕ ಜೊತೆ ಮಾತುಕತೆಗೆ ಇರಾನ್‌‌ನ 7 ಷರತ್ತು: ನಿರಾಕರಿಸಿದರೆ ‘ನಿರ್ಣಾಯಕ ಯುದ್ಧ’ದ ಎಚ್ಚರಿಕೆ

ಪ್ರಸ್ತುತ ನಡೆಯುತ್ತಿರುವ ಯುದ್ಧವನ್ನು ಅಂತ್ಯಗೊಳಿಸಲು ಅಮೆರಿಕ-ಇರಾನ್ ನಡುವೆ ಸಂಧಾನ ಮಾತುಕತೆ ಆರಂಭಿಸಲು...

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿಗೆ ಪಕ್ಷಾತೀತ ವಿರೋಧ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...