ರಾಜ್ಯದಲ್ಲಿ 5,000 ಎಕರೆ ಅರಣ್ಯ ಭೂಮಿ ಒತ್ತುವರಿಯಾಗಿದೆ: ಈಶ್ವರ ಖಂಡ್ರೆ

Date:

ರಾಜ್ಯದಲ್ಲಿ ಸುಮಾರು 2,000 ಕೋಟಿ ರೂಪಾಯಿ ಮೌಲ್ಯದ ಸುಮಾರು 5,000 ಎಕರೆ ಅರಣ್ಯ ಭೂಮಿ ಒತ್ತುವರಿಯಾಗಿದೆ. ಅದರಲ್ಲಿ ಹೆಚ್ಚಿನ ಭೂಮಿ ಕೊಡಗು ಜಿಲ್ಲೆಯದ್ದಾಗಿದೆ ಎಂದು ಅರಣ್ಯ, ಪರಿಸರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.

- Advertisement -

“ಅರಣ್ಯ ಇಲಾಖೆಯ ಲೆಕ್ಕ ಪರಿಶೋಧನಾ ವರದಿಯ ಪ್ರಕಾರ, ಒತ್ತುವರಿಯು ಭೋಗ್ಯಕ್ಕೆ ಪಡೆದ ಜಮೀನುಗಳಲ್ಲಾಗಿವೆ. ಆಸ್ತಿ ಮಾಲೀಕರು ಅವುಗಳನ್ನು ಹಿಂದಿರುಗಿಸಲು ಬಯಸದೆ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಅತಿಕ್ರಮಣಕಾರರಲ್ಲಿ ಒಬ್ಬರು ‘ಟಾಟಾ ಕಾಫಿ‘ ಮಾಲೀಕರಾಗಿದ್ದಾರೆ. ವಿರಾಜಪೇಟೆಯಲ್ಲಿ ಬ್ರಿಟಿಷರು 99 ವರ್ಷಗಳ ಗುತ್ತಿಗೆಗೆ ಅರಣ್ಯ ಭೂಮಿಯನ್ನು ಖಾಸಗಿ ಕಂಪನಿಗಳಿಗೆ ಹಸ್ತಾಂತರಿಸಿದ್ದರು. ಆದರೆ, ಟಾಟಾ ಕಂಪನಿಯು ಈಗ ಭೂಮಿಯನ್ನು ಸರ್ಕಾರಕ್ಕೆ ಹಸ್ತಾಂತರಿಸಲು ನಿರಾಕರಿಸಿ ಒಡೆತನದ ಹಕ್ಕು ಪಡೆದಿದೆ. ಥಾಮ್ಸನ್ ರಬ್ಬರ್ ಕಂಪನಿಯು ತನ್ನ ಜಮೀನನ್ನು ಬ್ಯಾಂಕ್ ಸಾಲಕ್ಕೆ ಒತ್ತೆ ಇಟ್ಟಿದ್ದು, ಬ್ಯಾಂಕ್ ಅದನ್ನು ಹರಾಜು ಹಾಕಿದೆ,” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಕೊಡಗು ಮತ್ತು ಚಾಮರಾಜನಗರ ಜಿಲ್ಲೆಯಲ್ಲಿ ಇಲಾಖೆಯು ಮಾರ್ಕರ್ ರಬ್ಬರ್ ಲಿಮಿಟೆಡ್‌ನಿಂದ 454 ಕೋಟಿ ರೂ. ಮೌಲ್ಯದ 1,074 ಎಕರೆ, ಥಾಮ್ಸನ್ ರಬ್ಬರ್‌ನಿಂದ 91.29 ಕೋಟಿ ರೂ. ಮೌಲ್ಯದ 625 ಎಕರೆ, ನಿಲಂಬೂರ್ ರಬ್ಬರ್‌ನಿಂದ 130.22 ಕೋಟಿ ರೂ. ಮೌಲ್ಯದ 713 ಎಕರೆ, ಪೋರ್ಟ್‌ಲ್ಯಾಂಡ್ ರಬ್ಬರ್ ಎಸ್ಟೇಟ್‌ನಿಂದ 6 ಕೋಟಿ ರೂ. ಮೌಲ್ಯದ 286 ಎಕರೆ ಭೂಮಿಯನ್ನು ವಶಪಡಿಸಿಕೊಳ್ಳಬೇಕಾಗಿದೆ. ಗ್ಲೆನ್ ಲಾರೆನ್ ಪ್ಲಾಂಟೇಶನ್‌ ಮತ್ತು ಟಾಟಾ ಕಾಫಿ ಕಂಪನಿಯಿಂದ 524 ಕೋಟಿ ರೂ. ಮೌಲ್ಯದ 943 ಎಕರೆ ಹಾಗೂ ಹೊನ್ನಮಟ್ಟಿ ನೀಲಗಿರಿ ಪ್ಲಾಂಟೇಶನ್‌ನಿಂದ 25.36 ಕೋಟಿ ರೂ. ಮೌಲ್ಯದ ಭೂಮಿಯನ್ನು ವಶಕ್ಕೆ ಪಡೆಯಲಾಗಿದೆ” ಎಂದು ಅವರು ವಿವರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಕೆಆರ್‌ಎಸ್‌ ಜಲಾಶಯದ 20 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧ: ಹೈಕೋರ್ಟ್‌

“ಲೆಕ್ಕಪರಿಶೋಧನಾ ವರದಿ ಪ್ರಕಾರ ವಿರಾಜಪೇಟೆಯೊಂದರಲ್ಲೇ ಒತ್ತುವರಿದಾರರಿಂದ 1,601 ಕೋಟಿ ರೂ.ಗಳನ್ನು ದಂಡವಾಗಿ ಇಲಾಖೆ ಪಡೆಯಬೇಕಿದೆ. ಭೂಮಿ ಮತ್ತು ದಂಡ ವಸೂಲಿಗಾಗಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಪರಿಸರ ಇಲಾಖೆ ಕಾರ್ಯದರ್ಶಿ ಬಿ.ಪಿ.ರವಿ ಅವರನ್ನೊಳಗೊಂಡ ವಿಶೇಷ ತಂಡವನ್ನು ರಚಿಸಲಾಗಿದೆ. ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಆರು ತಿಂಗಳಿಂದ ಒಂದು ವರ್ಷದೊಳಗೆ ಇತ್ಯರ್ಥಪಡಿಸಲು ಹಿರಿಯ ವಕೀಲರನ್ನು ನೇಮಿಸಿಕೊಳ್ಳಲಾಗುತ್ತಿದೆ,” ಎಂದು ಖಂಡ್ರೆ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...