ಆರು ತಿಂಗಳಿಗೊಮ್ಮೆ ಹಾಲಿನ ದರ ಹೆಚ್ಚಿಸಲು ಸರ್ಕಾರಕ್ಕೆ ಪ್ರಸ್ತಾವ

Date:

  • ‘ಪ್ರತಿ ಆರು ತಿಂಗಳಿಗೊಮ್ಮೆ ಗರಿಷ್ಠ ಶೇ. 5ರವರೆಗೆ ಹಾಲಿನ ದರ‌ ಹೆಚ್ಚಳವಾಗಲಿ’
  • ಕೆಎಂಎಫ್ ಹಂತದಲ್ಲೇ ಹಾಲಿನ ದರ ಪರಿಷ್ಕರಣೆಗೆ ಅನುಮತಿ ನೀಡಲು ಮನವಿ

ಪ್ರತಿ ಆರು ತಿಂಗಳಿಗೊಮ್ಮೆ ಆರ್ಥಿಕ‌ ಸ್ಥಿತಿಗತಿಗಳನ್ನು ಆಧರಿಸಿ ಹಾಲಿನ ದರ ಹೆಚ್ಚಳಕ್ಕೆ ಅನುಮತಿ‌ ನೀಡಬೇಕು ಎಂದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪಶುಸಂಗೋಪನಾ ಇಲಾಖೆ ಪ್ರಸ್ತಾವನೆ ಸಲ್ಲಿಸಿದೆ.

”ಪ್ರತಿ ಆರು ತಿಂಗಳಿಗೊಮ್ಮೆ ಗರಿಷ್ಠ ಶೇ. 5ರವರೆಗೆ ಹಾಲಿನ ದರ‌ ಹೆಚ್ಚಳಕ್ಕೆ ಅವಕಾಶ ನೀಡಬೇಕು. ಕರ್ನಾಟಕ ಹಾಲು ಮಹಾಮಂಡಳದ (ಕೆಎಂಎಫ್) ಹಂತದಲ್ಲೇ ಹಾಲಿನ ದರ ಪರಿಷ್ಕರಣೆಗೆ ಅನುಮತಿ‌ ನೀಡಬೇಕು” ಎಂದು ಪ್ರಸ್ತಾವದಲ್ಲಿ ತಿಳಿಸಲಾಗಿದೆ.

ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್ ಅವರು ಸುದ್ದಿಗಾರರ ಜೊತೆ ಶುಕ್ರವಾರ ಮಾತನಾಡಿ, “ಹಾಲಿನ ದರ ಏರಿಕೆ ಮಾಡುವಂತೆ ರೈತರು ಮತ್ತು ಹಾಲು ಒಕ್ಕೂಟಗಳಿಂದ ಒತ್ತಡವಿದೆ. ಆದರೆ, ಸದ್ಯಕ್ಕೆ ದರ ಹೆಚ್ಚಳ ಇಲ್ಲ” ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕೆಎಂಎಫ್ ನಂದಿನ ಹಾಲಿನ ದರವನ್ನು ಸೆಪ್ಟೆಂಬರ್ 1 ರಂದು ಪ್ರತಿ ಲೀಟರ್ ಗೆ ₹3ರಷ್ಟು ಹೆಚ್ಚಳ ಮಾಡಲಾಗಿದೆ. ಆದರೆ, ಅಮೂಲ್ 2022ರ ಮಾರ್ಚ್ ನಿಂದ 2023ರ ಫೆಬ್ರುವರಿಯವರೆಗೆ ಹತ್ತು ತಿಂಗಳ ಅವಧಿಯಲ್ಲಿ ಲೀಟರ್ ಗೆ 12 ಹೆಚ್ಚಳ‌ ಮಾಡಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ನಿತೀಶ್ ಕುಮಾರ್ ಅಭದ್ರ ಭಾಷೆ ನಿಂದನೀಯ

“ಉತ್ಪಾದನಾ ವೆಚ್ಚ ಹೆಚ್ಚಳದಿಂದ ಆಗುತ್ತಿರುವ ಹೊರೆ ಕುರಿತು ಹಾಲು ಉತ್ಪಾದಕರ ಒಕ್ಕೂಟಗಳು ಸಭೆಯಲ್ಲಿ ಅಹವಾಲು ಸಲ್ಲಿಸಿವೆ. ನಂದಿನಿ ಹಾಲಿನ‌ ದರ ಪ್ರತಿ ಲೀಟರ್‌ಗೆ ₹47 ಇದೆ. ಇತರ ರಾಜ್ಯಗಳಲ್ಲಿ ಹಾಲಿನ ದರ ಇನ್ನೂ ಹೆಚ್ಚಾಗಿದೆ” ಎಂದು ತಿಳಿಸಿದರು.

“ಕ್ಷೀರ ಭಾಗ್ಯ ಯೋಜನೆಗೆ ಕೆಎಂಎಫ್ ಪೂರೈಸುತ್ತಿರುವ ಹಾಲಿನಪುಡಿಯ ದರವನ್ನು ಪ್ರತಿ ಕೆ.ಜಿ.ಗೆ ₹400+ ಸರಕು ಮತ್ತು ಸೇವಾ ತೆರಿಗೆ ಎಂಬುದಾಗಿ ನಿಗದಿಪಡಿಸಬೇಕು. ಈಗ ಪ್ರತಿ ಕೆ.ಜಿ. ಹಾಲಿನ ಪುಡಿಗೆ ₹300+ ತೆರಿಗೆ ನೀಡಲಾಗುತ್ತಿದೆ. ಇದರಿಂದ ಕೆಎಂಎಫ್ ಗೆ ನಷ್ಟವಾಗುತ್ತಿದೆ” ಎಂದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಅಬ್ಬರದ ಜನಜಾಗೃತಿ ನಡುವೆಯೂ ಕರ್ತವ್ಯ ಮರೆತ ನಗರದ ಮಂದಿ: ಅದೇ ಹಳೆ ಕಥೆ

ಕರ್ನಾಟಕದ 14 ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮೊದಲ ಹಂತದ ಮತದಾನ ನಡೆದಿದೆ....

ಮುಸ್ಲಿಮರ ಮೀಸಲಾತಿ ಬಗ್ಗೆ ಸತ್ಯ ಮರೆಮಾಚಿ ಬಿಜೆಪಿಯಿಂದ ಸುಳ್ಳು ಜಾಹೀರಾತು: ಸಿಎಂ ಸಿದ್ದರಾಮಯ್ಯ

"ಹಿಂದುಳಿದ ವರ್ಗಗಳ ಮೀಸಲಾತಿ(ಒಬಿಸಿ) ಪಟ್ಟಿಗೆ ಮುಸ್ಲಿಮರ ಸೇರ್ಪಡೆಯು ಮಂಡಲ್ ವರದಿಯನ್ನು ಆಧರಿಸಿ...

Fact Check | ಹಿಮಾಚಲದಲ್ಲಿ ಪ್ರಿಯಾಂಕಾ ಗಾಂಧಿ ಅಕ್ರಮವಾಗಿ ಬಂಗಲೆ ಖರೀದಿಸಿಲ್ಲ!

ಲೋಕಸಭಾ ಚುನಾವಣೆಯ ಸಮಯದಲ್ಲಿ ಹಿಮಾಚಲ ಪ್ರದೇಶದ ಛರಾಬ್ರಾದಲ್ಲಿರುವ ಪ್ರಿಯಾಂಕಾ ಗಾಂಧಿ ಅವರ...

ಬರ ಪರಿಹಾರ | ಮನಮೋಹನ್ ಸಿಂಗ್ ಸರ್ಕಾರ ಎಷ್ಟು ಪರಿಹಾರ ನೀಡಿದೆ ಎಂದು ಲೆಕ್ಕ ಕೊಡಿ: ಆರ್. ಅಶೋಕ್

"ಬರಗಾಲದಿಂದ ಬಳಲಿದ ರಾಜ್ಯದ ಜನತೆಗೆ 3,454 ಕೋಟಿ ರೂ. ಪರಿಹಾರವನ್ನು ಪ್ರಧಾನಿ...