ಡಿಕೆ ಶಿವಕುಮಾರ್ ಸವಾಲನ್ನು ಸ್ವೀಕರಿಸಿದ್ದೇನೆ: ಮಾಜಿ ಸಿಎಂ ಕುಮಾರಸ್ವಾಮಿ

Date:

  • ನಾನೇನು ಕದ್ದು ಓಡಿ ಹೋಗಿ, ಪಲಾಯನ ಮಾಡಲ್ಲ: ಎಚ್‌ಡಿ ಕುಮಾರಸ್ವಾಮಿ
  • ‘ಸಿದ್ದರಾಮಯ್ಯ ಅವರ ಆರ್ಥಿಕ ಶಿಸ್ತು ಎಂತಹದ್ದು ಎಂಬುದು ಕಂಡಿದ್ದೇನೆ’

ರಾಮನಗರ ಜಿಲ್ಲೆ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಬಹಿರಂಗ ಚರ್ಚೆಗೆ ಕರೆದಿರುವ ಸವಾಲನ್ನು ಸಂತೋಷದಿಂದ ಸ್ವೀಕರಿಸುತ್ತೇನೆ. ನಾನೇನು ಕದ್ದು ಓಡಿ ಹೋಗಿ, ಪಲಾಯನ ಮಾಡಲ್ಲ, ನನ್ನ ಬಳಿಯೂ ಸಾಕಷ್ಟು ಸರಕು ಇದೆ ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಹೇಳಿದರು.

- Advertisement -

ಬೆಂಗಳೂರಿನಲ್ಲಿ ಗುರುವಾರ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ವಿಜಯದಶಮಿಯ ಆಸುಪಾಸಿನಲ್ಲಿ ಹಬ್ಬದ ಆಚರಣೆ ಜೊತೆಗೆ ಸಿಎಂ ಹಾಗೂ ಡಿಸಿಎಂ ವೈಯಕ್ತಿಕವಾಗಿ ನನ್ನ ಮೇಲೆ ವಾಗ್ದಾಳಿ ನಡೆಸಿದ್ದಾರೆ. ಅದಕ್ಕೆ ಸಂಬಂಧಪಟ್ಟ ಎರಡು ಮೂರು ವಿಚಾರಗಳಿಗೆ ಡಿಸಿಎಂ ನನಗೆ ಸವಾಲು ಹಾಕಿದ್ದಾರೆ. ಅದಕ್ಕೆ ನಾನು ಚರ್ಚೆಗೆ ಸಿದ್ದನಿದ್ದೇನೆ. ನಾನು ಸ್ವೀಕಾರ ಮಾಡುತ್ತೇನೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಇವತ್ತಿನ ಆರ್ಥಿಕ ಪರಿಸ್ಥಿತಿಗೆ ಹಿಂದಿನ ಬಿಜೆಪಿ ಕಾರಣ ಎಂದು ಸಿಎಂ ಹೇಳಿದ್ದಾರೆ. ಇದಕ್ಕೆ ಶ್ವೇತ ಪತ್ರ ಹೊರಡಿಸುತ್ತೇನೆ ಎಂದು ಹೇಳಿದ್ದಾರೆ. ಇದಕ್ಕೆ ಸ್ವಾಗತ ಮಾಡುತ್ತೇನೆ. ಅವರು ಕೊಟ್ಟಂತಹ ತೀರ್ಮಾನಗಳ ಆಧಾರದ ಮೇಲೆ ಬಿಜೆಪಿ ಸರ್ಕಾರ ನಡೆದಿದೆ. ಸಿದ್ದರಾಮಯ್ಯ ಅವರ ಆರ್ಥಿಕ ಶಿಸ್ತು ಎಂತಹದ್ದು ಎಂಬುದು ನೋಡಿದ್ದೇನೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭೀಕರ ಬರದ ನಡುವೆ ಅನಗತ್ಯ ವಿವಾದಗಳಲ್ಲಿ ಕಾಲಹರಣ ಮಾಡುತ್ತಿರುವ ಸರ್ಕಾರ

ನಾನು ರಾಜಕೀಯದ ಖಳನಾಯಕ

“ಸಿದ್ದರಾಮಯ್ಯ ಅವರಿಗೆ ನಾನು ಸ್ನೇಹಿತನಾಗಲು ಸಾಧ್ಯವೇ? ಅವರು ಹೇಳಿದ ಹಾಗೇ ಸಿದ್ದರಾಮಯ್ಯ ಅವರಿಗೆ ನಾನು ರಾಜಕೀಯ ವಿಲನ್‌ ಹೌದು. ಸಿದ್ದರಾಮಯ್ಯ ಅವರ ತಪ್ಪುಗಳನ್ನು ಜನರ ಎದುರು ಇಡುತ್ತಿದ್ದೇನೆ. ಮಾತು ಎತ್ತಿದರೆ ಸಾಕು ವೆಸ್ಟ್‌ ಎಂಡ್‌ ಹೋಟೆಲ್‌ ಎನ್ನುತ್ತಾರೆ ಸಿದ್ದರಾಮಯ್ಯ. ನಾನು ಆ ಹೋಟೆಲ್‌ನಲ್ಲಿ ಇದ್ದುಕೊಂಡು ಏನೆಲ್ಲ ಕಾರ್ಯಕ್ರಮ ಮಾಡಿದ್ದೇನೆ ಎಂಬುದು ದಾಖಲೆ ಸಮೇತ ಹೇಳುವೆ” ಎಂದರು.

“ಕುಮಾರಸ್ವಾಮಿ ಅವರ ಅನುದಾನದಿಂದ ನಮ್ಮ ಮುಖ ಕ್ಷೇತ್ರದಲ್ಲಿ ಉಳಿದಿದೆ ಎಂದು ಕೆಲವು ಕಾಂಗ್ರೆಸ್‌ ಶಾಸಕರೇ ಹೇಳುತ್ತಿದ್ದಾರೆ. ಈಗ ಅವರು ಸೋತಿದ್ದಾರೆ. ಮೈತ್ರಿ ಸರ್ಕಾರದಲ್ಲಿ ಡಿಕೆ ಶಿವಕುಮಾರ್‌ ಅವರು ನನ್ನನ್ನು ಕೈಗೊಂಬೆಯಾಗಿ ನಡೆಸಿಕೊಂಡಿದ್ದಾರೆ. ಮನವಿ ಪತ್ರಗಳನ್ನು ನನ್ನ ಟೇಬಲ್‌ ಮೇಲೆ ಎಸೆದು ಅವಮಾನ ಮಾಡಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....

ಬಿಹಾರದ ಖಜಾನೆ ಖಾಲಿ, ಆದರೂ ಪ್ರಧಾನಿ ಹುಟ್ಟುಹಬ್ಬಕ್ಕೆ ಕೋಟಿ ಕೋಟಿ ಪೋಲು: ತೇಜಸ್ವಿ ಯಾದವ್ ಆರೋಪ

ಬಿಹಾರದಲ್ಲಿ ತೀವ್ರ ಪ್ರವಾಹ ಪರಿಸ್ಥಿತಿಯಿಂದಾಗಿ ಲಕ್ಷಾಂತರ ಜನರು ತೊಂದರೆಯಲ್ಲಿರುವಾಗ ಮತ್ತು ರಾಜ್ಯ...

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ಹವಾಮಾನ ವರದಿ: ರಾಜ್ಯದ 16 ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ

ಬಂಗಾಳಕೊಲ್ಲಿ ಮತ್ತು ಉತ್ತರ ಅಂಡಮಾನ್ ಸಮುದ್ರ ಭಾಗದಲ್ಲಿ ತೀವ್ರ ವಾಯುಭಾರ ಕುಸಿತ...