ಸಾವಿನ ಬಗ್ಗೆ ಪುಕಾರು: ಕಿಡಿಗೇಡಿಗಳ ವಿರುದ್ಧ ಸೈಬರ್ ಪೊಲೀಸರಿಗೆ ನಟ ದೊಡ್ಡಣ್ಣ ದೂರು

Date:

ತಮ್ಮ ಸಾವಿನ ಬಗ್ಗೆ ಎಐ ಬಳಸಿ ಚಿತ್ರ ಸೃಷ್ಟಿಸಿ ಸುಳ್ಳು ಸುದ್ದಿ ಹರಡಿದ ಕಿಡಿಗೇಡಿಗಳ ವಿರುದ್ಧ ಕನ್ನಡ ಚಿತ್ರರಂಗದ ಹಿರಿಯ ನಟ ದೊಡ್ಡಣ್ಣ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ. ಉತ್ತರ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಈ ದುಷ್ಕರ್ಮಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

- Advertisement -

‘Public Friend News’ ಎಂಬ ಫೇಸ್‌ಬುಕ್ ಎಂಬ ಫೇಸ್‌ಬುಕ್ ಖಾತೆಯಲ್ಲಿ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿ ಚಿತ್ರ ಸೃಷ್ಟಿಸಿ ದೊಡ್ಡಣ್ಣ ಮೃತಪಟ್ಟಿದ್ದಾರೆ ಎಂಬ ಶ್ರದ್ಧಾಂಜಲಿ ಪೋಸ್ಟ್ ಅನ್ನು ಹರಿಬಿಡಲಾಗಿತ್ತು. ಈ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸಭಾಧ್ಯಕ್ಷರ ತವರಲ್ಲೇ ಬಡವರು ಅತಂತ್ರ: ʼಹಕ್ಕುಪತ್ರʼವಿದ್ದರೂ ಸ್ವಂತ ಸೂರಿಲ್ಲ,...

ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಜಿ ಎಸ್ ಪಾಟೀಲ್ ಅವರು ಅಧಿಕಾರ ವಹಿಸಿಕೊಂಡಿರುವುದು ಈ ಸಂತ್ರಸ್ತರಲ್ಲಿ ಹೊಸ ಭರವಸೆ ಮೂಡಿಸಿದೆ. ಪ್ರಜಾಪ್ರಭುತ್ವದ ಅತ್ಯುನ್ನತ ಪೀಠದಲ್ಲಿರುವ ಅವರು, ತಮ್ಮ ಸ್ವಕ್ಷೇತ್ರದ ಈ ದಶಕದ ಸಮಸ್ಯೆಗೆ ತಕ್ಷಣ...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಇದನ್ನು ಓದಿದ್ದೀರಾ? ಸುಳ್ಳೇ ಬಂಡವಾಳ, ಯುದ್ಧವೇ ವ್ಯಾಪಾರ: ಸೋತು ಸುಣ್ಣವಾದರೂ ತೀರದ ಅಮೆರಿಕದ ಅಹಂಕಾರ

ಈ ಸುಳ್ಳು ಸುದ್ದಿ ಹರಡುತ್ತಿದ್ದಂತೆ ನಟ ದೊಡ್ಡಣ್ಣ ಅವರು ಸ್ವತಃ ವಿಡಿಯೋ ಮೂಲಕ ಮಾಧ್ಯಮಗಳ ಮುಂದೆ ಬಂದು ಸ್ಪಷ್ಟನೆ ನೀಡಿದ್ದರು. “ನಾನು ಆರೋಗ್ಯವಾಗಿದ್ದೇನೆ. ಮನೆಯಲ್ಲೇ ಇದ್ದೇನೆ. ವದಂತಿಗಳನ್ನು ನಂಬಬೇಡಿ” ಎಂದು ತಿಳಿಸಿದ್ದರು.

ಇದೀಗ ಬದುಕಿರುವಾಗಲೇ ಸಾವಿನ ಸುದ್ದಿ ಹಬ್ಬಿಸಿ ವಿಕೃತ ಆನಂದ ಪಡುವ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ದೊಡ್ಡಣ್ಣ ಸೈಬರ್ ಕ್ರೈಮ್ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಸುಳ್ಳು ಸುದ್ದಿಯಿಂದಾಗಿ ದೊಡ್ಡಣ್ಣ ಹಾಗೂ ಅವರ ಕುಟುಂಬದವರಿಗೆ ತೀವ್ರ ಮಾನಸಿಕ ಆಘಾತ, ನೋವುಂಟಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಸದ್ಯ ಸೈಬರ್ ಕ್ರೈಂ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಸುಳ್ಳು ಸುದ್ದಿ ಪೋಸ್ಟ್ ಮಾಡಿದ ಫೇಸ್‌ಬುಕ್ ಖಾತೆಯ ಐಪಿ ವಿಳಾಸ ಹಾಗೂ ಆರೋಪಿಗಳ ಮೂಲವನ್ನು ಪತ್ತೆಹಚ್ಚಲು ತನಿಖೆ ಚುರುಕುಗೊಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉರ್ದು, ಮರಾಠಿ ಶಿಕ್ಷಕರ ಪೂರ್ಣ ನೇಮಕಾತಿಗೆ ಕರ್ನಾಟಕ ರಾಜ್ಯ ಮುಸ್ಲಿಂ ಒಕ್ಕೂಟ ಆಗ್ರಹ

ಉರ್ದು ಸೇರಿದಂತೆ ಭಾಷಾ ಅಲ್ಪಸಂಖ್ಯಾತ ಮಾಧ್ಯಮದ ಅಭ್ಯರ್ಥಿಗಳಿಗೆ ಶಿಕ್ಷಕರ ನೇಮಕಾತಿಯಲ್ಲಿ ನೀಡಿದ್ದ...

ಬೀದರ್‌ | ಶಿಷ್ಟಾಚಾರ ಉಲ್ಲಂಘನೆ : ಡಿಎಚ್‌ಒ ಸೇರಿ ಇಬ್ಬರು ಅಧಿಕಾರಿಗಳು ಅಮಾನತು

ಬಸವಕಲ್ಯಾಣ ತಾಲೂಕಿನ ಉಪವಿಭಾಗ ಆಸ್ಪತ್ರೆಯ ನೂತನ ಕಟ್ಟಡ ಕಾಮಗಾರಿಯ ಶಂಕುಸ್ಥಾಪನೆ ಸಮಾರಂಭದಲ್ಲಿ...

ಬಸವಕಲ್ಯಾಣ | ತ್ಯಾಗ, ಬಲಿದಾನದಿಂದಲೇ ವಿಮೋಚನೆ ಪ್ರಾಪ್ತಿ: ರವೀಂದ್ರ ಗಾಯಕವಾಡ

ಸಾವಿರಾರು ಜನರ ತ್ಯಾಗ, ಬಲಿದಾನ ಹಾಗೂ ಹೋರಾಟದ ಫಲವಾಗಿ ಕಲ್ಯಾಣ ಕರ್ನಾಟಕ...

₹25 ಕೋಟಿ ವೆಚ್ಚದಲ್ಲಿ ಬೀದರ್ ಕೋಟೆ, ಪಾಪನಾಶ ಕೆರೆ ಅಭಿವೃದ್ಧಿ

ಪ್ರವಾಸೋದ್ಯಮ ಇಲಾಖೆಯ ‘ಸ್ವದೇಶ ದರ್ಶನ್ 2.0’ ಯೋಜನೆಯ ‘ಚಾಲೆಂಜ್ ಬೇಸ್ಡ್ ಡೆಸ್ಟಿನೇಷನ್...