ಯುಪಿಎಸ್‌ಸಿ ನಿಯಮಾವಳಿ, ಪ್ರಕ್ರಿಯೆಗಳನ್ನು ಕೆಪಿಎಸ್‌ಸಿಯಲ್ಲಿ ಅಳವಡಿಸಿ: ಸಿಎಂ ಡಿಕೆಶಿಗೆ ಕಾಂಗ್ರೆಸ್ ಮುಖಂಡರ ಮನವಿ

Date:

“ಪಿ ಸಿ ಹೋಟಾ ಸಮಿತಿಯ ವರದಿ ಮತ್ತು ಕೇಂದ್ರ ಲೋಕ ಸೇವಾ ಆಯೋಗದ ನಿಯಮಾವಳಿಗಳು, ಪ್ರಕ್ರಿಯೆಗಳನ್ನು ಕೂಡಲೇ ರಾಜ್ಯ ಲೋಕಸೇವಾ ಆಯೋಗ (ಕೆಪಿಎಸ್ ಸಿ)ದಲ್ಲಿ ಅಳವಡಿಸಿಕೊಳ್ಳಬೇಕು. ಆ ಮೂಲಕ ಆಯೋಗಕ್ಕೆ ಸೂಕ್ತ ಕಾಯಕಲ್ಪ ನೀಡಬೇಕು” ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಕಾಂಗ್ರೆಸ್ ಮುಖಂಡರು ಮನವಿ ಸಲ್ಲಿಸಿದರು.

- Advertisement -

ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ ಕಾಂಗ್ರೆಸ್ ಮುಖಂಡರ ನಿಯೋಗವು ಬುಧವಾರ ಮನವಿ ಸಲ್ಲಿಸಿತು. “ಇತ್ತೀಚಿನ ದಿನಗಳಲ್ಲಿ ಕೆಪಿಎಸ್ ಸಿಯಲ್ಲಿ ನಡೆದಿರುವ ಅಕ್ರಮಗಳಿಂದಾಗಿ ಉದ್ಯೋಗಾಕಾಂಕ್ಷಿಗಳು, ಸಾರ್ವಜನಿಕರು, ಲೋಕಸೇವಾ ಆಯೋಗದ ಮೇಲೆ ನಂಬಿಕೆಯನ್ನು ಕಳೆದುಕೊಂಡು ಆಕ್ರೋಶಭರಿತರಾಗಿರುತ್ತಾರೆ. ಸರ್ಕಾರದ ಆಡಳಿತದ ಮೇಲೂ ಕೆಟ್ಟ ಪರಿಣಾಮ ಬೀರಿರುತ್ತದೆ. ಹೀಗಾಗಿ ಸರ್ಕಾರವು ಈ ಕೂಡಲೇ ಸೂಕ್ತ ಕ್ರಮಗಳನ್ನು ಜರುಗಿಸಬೇಕು” ಎಂದು ಮನವಿಯಲ್ಲಿ ಕೋರಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ಇದನ್ನೂ ಓದಿ: ಯುಪಿಎಸ್‌ಸಿ ಮಾದರಿಯಲ್ಲಿ ಕೆಪಿಎಸ್‌ಸಿ ಪರೀಕ್ಷೆ ನಡೆಸಲು ಸಿಎಂ ಸಿದ್ದರಾಮಯ್ಯ ಸೂಚನೆ

“ತಪ್ಪಿತಸ್ಥ ಅಧ್ಯಕ್ಷರು ಮತ್ತು ಸದಸ್ಯರುಗಳನ್ನು ಅನರ್ಹಗೊಳಿಸಲು ಸಂವಿಧಾನದ ಅನುಚ್ಛೇದ 317ರ ಅಡಿಯಲ್ಲಿ ತನಿಖೆಗೆ ಕೂಡಲೇ ರಾಜ್ಯಪಾಲರು ರಾಷ್ಟ್ರಾಧ್ಯಕ್ಷರ ಮೂಲಕ ಸರ್ವೋಚ್ಚ ನ್ಯಾಯಾಲಯಕ್ಕೆ ವಹಿಸಲು ರಾಜ್ಯ ಸರ್ಕಾರ ಕ್ರಮ ಜರುಗಿಸಬೇಕು ಹಾಗೂ ತನಿಖೆಯ ಅವಧಿಯಲ್ಲಿ ಅಧ್ಯಕ್ಷರು ಮತ್ತು ಕಳಂಕಿತ ಸದಸ್ಯರುಗಳನ್ನು ಅಮಾನತ್ತು ಮಾಡಲು ಸರ್ಕಾರ ಕ್ರಮ ವಹಿಸಬೇಕು. ಆಯೋಗದ ತಪ್ಪಿತಸ್ಥ ಪರೀಕ್ಷಾ ನಿಯಂತ್ರಕರನ್ನು ಉದ್ಯೋಗದಿಂದ ಅನರ್ಹಗೊಳಿಸಲು ಮತ್ತು ಶಿಕ್ಷೆಗೆ ಗುರಿಪಡಿಸಲು ಸರ್ಕಾರ ಕ್ರಮವಹಿಸಬೇಕು” ಎಂದು ಮನವಿ ಮಾಡಲಾಗಿದೆ.

ಭ್ರಷ್ಟ ನೇಮಕಾತಿ ಪ್ರಕ್ರಿಯೆ ರದ್ದುಗೊಳಿಸಿ

“ಆಯೋಗದ ಭ್ರಷ್ಟ ಅಧ್ಯಕ್ಷರು ಮತ್ತು ಸದಸ್ಯರು. ಪರೀಕ್ಷಾ ನಿಯಂತ್ರಕರಿಂದ ಇತ್ತೀಚೆಗೆ ನೇಮಕ ಆಗಿರುವ ಎಲ್ಲಾ ನೇಮಕಾತಿ ಪ್ರಕ್ರಿಯೆಗಳನ್ನು ರದ್ದುಗೊಳಿಸಬೇಕು. ಆಯೋಗದಲ್ಲಿ ಎಸಗಿರುವ ಭ್ರಷ್ಟಾಚಾರದ ತನಿಖೆಯನ್ನು ಇಡೀ ಆಯೋಗಕ್ಕೆ ವಿಸ್ತ್ರತಗೊಳಿಸಿ ತನಿಖೆ ಕೈಗೊಳ್ಳಬೇಕು. ಅಧ್ಯಕ್ಷರು, ಸದಸ್ಯರು ಮತ್ತು ಪರೀಕ್ಷಾ ನಿಯಂತ್ರಕರು ಇಂತಹ ಭ್ರಷ್ಟಾಚಾರಗಳಿಂದ ಗಳಿಸಿರುವ ಆಸ್ತಿ-ಪಾಸ್ತಿ, ಹಣ-ಒಡವೆಗಳನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಲು ಮತ್ತು ಅವರನ್ನು ಶಿಕ್ಷೆಗೆ ಒಳಪಡಿಸಬೇಕು” ಎಂದು ಪತ್ರದಲ್ಲಿ ಕೋರಲಾಗಿದೆ.

ಇದನ್ನೂ ಓದಿ: ಕೆಪಿಎಸ್‌ಸಿ | ಸರ್ಕಾರದಿಂದ ‘ಗ್ರೂಪ್ ಸಿ’ ಹುದ್ದೆಗೆ ಸಂದರ್ಶನ ರದ್ದು ಸೇರಿ ಪ್ರಮುಖ ಸುಧಾರಣೆ ಜಾರಿ: ಸಿದ್ದರಾಮಯ್ಯ

“ಆಯೋಗಕ್ಕೆ ನಿಷ್ಟಾವಂತ, ಪ್ರಾಮಾಣಿಕ, ದಕ್ಷ ವ್ಯಕ್ತಿಗಳನ್ನು ಒಳಗೊಂಡ ಸಣ್ಣ ಸಮಿತಿಯನ್ನು ನೇಮಿಸಿ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರಿಸಲು ಸರ್ಕಾರ ಕ್ರಮ ವಹಿಸಬೇಕು. ಅಲ್ಲಿಯವರೆಗೂ ಸರ್ಕಾರ ಯಾವುದೇ ನೇಮಕಾತಿ ಪ್ರಸ್ತಾವನೆಯನ್ನು ಆಯೋಗಕ್ಕೆ ಕಳುಹಿಸಬಾರದು. ಆಯೋಗದ ಅಧ್ಯಕ್ಷ ಮತ್ತು ಸದಸ್ಯ ಸ್ಥಾನಕ್ಕೆ ನೇಮಕಗೊಳ್ಳುವ ವ್ಯಕ್ತಿಗಳು ನೇಮಕಗೊಂಡಂದಿನಿಂದ ನಿವೃತ್ತಿಗೊಳ್ಳುವವರೆಗಿನ ಅವಧಿಯಲ್ಲಿ ಪ್ರತಿ ವರ್ಷವೂ ತಮ್ಮ ಹಾಗೂ ತಮ್ಮ ಕುಟುಂಬ ಸದಸ್ಯರ ಸ್ಥಿರ ಮತ್ತು ಚರಾಸ್ತಿಗಳ ವಿವರಣೆಯನ್ನು ಲೋಕಾಯುಕ್ತ ಸಂಸ್ಥೆಗೆ ಸಲ್ಲಿಸುವಂತೆ ಕಾನೂನು ರೂಪಿಸಬೇಕು” ಎಂದು ಪತ್ರದಲ್ಲಿ ತಿಳಿಸಲಾಗಿದೆ.

“ಆಯೋಗದ ಅಧ್ಯಕ್ಷರು ಮತ್ತು ಸದಸ್ಯರ ಆಯ್ಕೆಯ ಪ್ರಕ್ರಿಯೆ ಪಾರದರ್ಶಕವಾಗಿರಲು ಮತ್ತು ಪ್ರಾಮಾಣಿಕರನ್ನು ಆಯ್ಕೆ ಮಾಡಲು ಶೋಧನಾ ಸಮಿತಿ ನೇಮಕ ಮಾಡಬೇಕು. ಆ ಸಮಿತಿಯ ಶಿಫಾರಸ್ಸುಗಳ ಮೇಲೆ ಸರ್ಕಾರ ಮತ್ತು ರಾಜ್ಯಪಾಲರು ನೇಮಕ ಮಾಡಬೇಕು. ಆಯೋಗ ನಡೆಸುವ ಸಂದರ್ಶನದ ಪ್ರಕ್ರಿಯೆ ಸಿಸಿಟಿವಿ ಕಣ್ಣಾವಲು ಅಡಿಯಲ್ಲಿ ನಡೆಸಬೇಕು. ಸಂದರ್ಶನದ ಮಾಹಿತಿಯನ್ನು ಕನಿಷ್ಠ 3 ವರ್ಷ ಸಂಗ್ರಹಿಸಿಡಲು ಸರ್ಕಾರ ಕಾನೂನು ರೂಪಿಸಬೇಕು. ಈ ರೀತಿಯ ಕ್ರಮಗಳ ಮೂಲಕ ಉದ್ಯೋಗ ಆಕಾಂಕ್ಷಿಗಳು, ಸಾರ್ವಜನಿಕರು ಆಯೋಗದ ಮೇಲೆ ನಂಬಿಕೆ ಉಂಟು ಮಾಡುವ ಪ್ರಕ್ರಿಯೆ ಆರಂಭಿಸಬೇಕು” ಎಂದು ವಿವರಿಸಲಾಗಿದೆ.

ನಿಯೋಗದಲ್ಲಿ ಮಾಜಿ ಸಂಸದರಾದ ಉಗ್ರಪ್ಪ, ಬಿ ಎಲ್ ಶಂಕರ್, ಎಲ್ ಹನುಮಂತಯ್ಯ, ಚಂದ್ರಪ್ಪ, ಮುದ್ದಹನುಮೇಗೌಡ, ಮಾಜಿ ಸಚಿವರಾದ ಪಿ ಜಿ ಆರ್ ಸಿಂಧ್ಯ, ಹೆಚ್ ಎಂ ರೇವಣ್ಣ, ರಾಣಿ ಸತೀಶ್, ಮಾಜಿ ಸಭಾಪತಿ ವಿ ಆರ್ ಸುದರ್ಶನ್, ಮಾಜಿ ಶಾಸಕರಾದ ಪಿ ಆರ್ ರಮೇಶ್, ಕೊಂಡಜ್ಜಿ ಮೋಹನ್, ಹಿರಿಯ ಸಾಹಿತಿ ಸಿ ಎಸ್ ದ್ವಾರಕನಾಥ್ ಮತ್ತಿತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ ಶಕ್ತಿಗೆ ಕತ್ತರಿ

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ...

ಮೋದಿಯ ಮೋಸದ UPI ಶುಲ್ಕ ನೀತಿ; ತೀವ್ರ ವಿರೋಧದ ನಡುವೆಯೂ ಜಾರಿಗೆ ಮುಂದಾದ ಕೇಂದ್ರ

₹2,000ಕ್ಕಿಂತ ಹೆಚ್ಚಿನ UPI ವಹಿವಾಟುಗಳಿಗೆ ಪ್ರಸ್ತಾಪಿಸಿರುವ ಶೇ 0.4ರಷ್ಟು ಮರ್ಚೆಂಟ್ ಡಿಸ್ಕೌಂಟ್...

ಕಲಬುರಗಿ | ಪಿಎಸ್‌ಐ ಕಾರಿಗೆ ಬೆಂಕಿ ಹಚ್ಚಿ ಪರಾರಿಯಾದ ಪೊಲೀಸ್ ಪೇದೆ

ಖಾಕಿ ಧರಿಸಿ ರಕ್ಷಣೆ ಮಾಡಬೇಕಾದವರೇ ಅಪರಾಧ ಕೃತ್ಯಕ್ಕೆ ಇಳಿದಿರುವ ಘಟನೆ...

ಪ್ರಜಾಪ್ರಭುತ್ವದ ಅಣಕ: ಪಕ್ಷಾಂತರಕ್ಕಾಗಿ ಶಾಸಕರ ರಾಜೀನಾಮೆ ಮತ್ತು ಮರು ಸ್ಪರ್ಧೆಗೆ ಮದ್ರಾಸ್ ಹೈಕೋರ್ಟ್ ಕಿಡಿ

ಚುನಾವಣೆಯಲ್ಲಿ ಗೆದ್ದ ಕೆಲವೇ ದಿನಗಳಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಪಕ್ಷಾಂತರಗೊಂಡು...