ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಟೆಂಡರ್ ಅಕ್ರಮ ಆರೋಪ: ಸರ್ಕಾರಕ್ಕೆ ಲೀಗಲ್ ನೋಟಿಸ್

Date:

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ NEET ಮತ್ತು KCET ತರಬೇತಿ ನೀಡುವ ಟೆಂಡರ್ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಪ್ರೈಮ್ ಲಾ ಅಸೋಸಿಯೇಷನ್ ರಾಜ್ಯ ಸರ್ಕಾರಕ್ಕೆ ಲೀಗಲ್ ನೋಟಿಸ್ ಜಾರಿಗೊಳಿಸಿದೆ.

- Advertisement -

ಟೆಂಡರ್‌ನಲ್ಲಿ ಭಾಗವಹಿಸುವ ಸಂಸ್ಥೆಗಳು ಕನಿಷ್ಠ 3 ವರ್ಷಗಳಿಂದ ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಆಂಡ್ರಾಯ್ಡ್ ಅಪ್ಲಿಕೇಶನ್ ಹೊಂದಿರಬೇಕು ಹಾಗೂ ಅಪ್ಲಿಕೇಶನ್ ಡೌನ್‌ಲೋಡ್‌ಗಳ ಆಧಾರದ ಮೇಲೆ ಅಂಕಗಳನ್ನು ನೀಡಲಾಗುತ್ತಿದೆ. ಈ ಮಾನದಂಡಗಳು ಆಫ್‌ಲೈನ್ ಕೋಚಿಂಗ್ ಗುಣಮಟ್ಟಕ್ಕೆ ಯಾವುದೇ ಸಂಬಂಧವಿಲ್ಲ ಎಂದು ನೋಟಿಸ್‌ನಲ್ಲಿ ಸ್ಪಷ್ಟಪಡಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಟಾಟಾ ಸನ್ಸ್ ಬೋರ್ಡ್ ರೂಮ್ ಕಲಹದ ಆಳ ಅಗಲವೇನು...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಹಳೆಯ ಗುತ್ತಿಗೆದಾರರಿಗೆ ಅನುಕೂಲ ಎಂದು ನೋಟೀಸ್ ನಲ್ಲಿ ಅರೋಪಿಸಲಾಗಿದೆ.

ಟೆಂಡರ್ ಷರತ್ತುಗಳನ್ನು ಕೇವಲ ಹಿಂದಿನ ಗುತ್ತಿಗೆದಾರರಿಗೆ ಅನುಕೂಲವಾಗುವಂತೆ ರೂಪಿಸಲಾಗಿದೆ ಎಂಬ ಗಂಭೀರ ಆರೋಪ ಮಾಡಲಾಗಿದೆ. ಹೊಸ ಅರ್ಹ ಸಂಸ್ಥೆಗಳು ಭಾಗವಹಿಸದಂತೆ ತಡೆಯಲು ಇದು ಉದ್ದೇಶಿತ ಕ್ರಮ ಎಂದು ಹೇಳಲಾಗಿದೆ.

ಟೆಂಡರ್ ಪ್ರಕ್ರಿಯೆಯಲ್ಲಿ ಕೆಟಿಪಿಪಿ (KTPP) ಕಾಯ್ದೆಯ ಸೆಕ್ಷನ್ 10 ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ನಿಯಮಾನುಸಾರ ಟೆಂಡರ್ ಆಹ್ವಾನಿಸುವ ಮತ್ತು ಅಂಗೀಕರಿಸುವ ಪ್ರಾಧಿಕಾರಗಳು ಪ್ರತ್ಯೇಕವಾಗಿರಬೇಕು. ಆದರೆ ಇಲ್ಲಿ ಅದನ್ನು ಪಾಲಿಸಿಲ್ಲ ಎಂದು ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ.

ಸಚಿವರಿಗೆ ಮಾಹಿತಿ ನೀಡಿದರೂ ಕ್ರಮವಿಲ್ಲ

ಈ ಕುರಿತು ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಅವರ ಗಮನಕ್ಕೆ ವಿಷಯ ತಂದಿದ್ದರೂ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂಬ ಆರೋಪವೂ ಕೇಳಿಬಂದಿದೆ.

ನೋಟಿಸ್‌ನಲ್ಲಿ ಸರ್ಕಾರಕ್ಕೆ ಕೆಲವು ಪ್ರಮುಖ ಬೇಡಿಕೆಗಳನ್ನು ಸಲ್ಲಿಸಲಾಗಿದೆ. ಪ್ರಸ್ತುತ ಟೆಂಡರ್ ಪ್ರಕ್ರಿಯೆಯನ್ನು ತಕ್ಷಣ ಸ್ಥಗಿತಗೊಳಿಸಬೇಕು. ಅಕ್ರಮದಲ್ಲಿ ಭಾಗಿಯಾದ ಬಿಡ್ಡರ್‌ಗಳನ್ನು ಕಪ್ಪುಪಟ್ಟಿಗೆ ಸೇರಿಸಬೇಕು. ಸಂಪೂರ್ಣ ಟೆಂಡರ್ ಪ್ರಕ್ರಿಯೆಗೆ ಸ್ವತಂತ್ರ ತನಿಖೆ ನಡೆಸಬೇಕು. ಟೆಂಡರ್ ಪರಿಶೀಲನಾ ಸಮಿತಿ ರಚನೆಯಲ್ಲಿ ನಡೆದಿರುವ ಲೋಪಗಳನ್ನು ಪರಿಶೀಲಿಸಬೇಕು. ಇದಲ್ಲದೆ, ಸಿಬ್ಬಂದಿ ನೇಮಕಾತಿ ದಾಖಲೆಗಳು ಹಾಗೂ ವಿದ್ಯಾರ್ಥಿಗಳ ಸಾಧನಾ ಪಟ್ಟಿಗಳನ್ನು ಕೃತಕವಾಗಿ ಸೃಷ್ಟಿಸಿರುವ ಸಾಧ್ಯತೆ ಇರುವುದರಿಂದ ಸಮಗ್ರ ತನಿಖೆ ನಡೆಸಬೇಕು  ಎಂದು ಒತ್ತಾಯಿಸಲಾಗಿದೆ.

ಒಟ್ಟಿನಲ್ಲಿ, ಅಲ್ಪಸಂಖ್ಯಾತರ ಇಲಾಖೆಯ ಟೆಂಡರ್ ಪ್ರಕ್ರಿಯೆ ಸುತ್ತ ಮತ್ತೊಂದು ವಿವಾದ ತಲೆದೋರಿದ್ದು, ಸರ್ಕಾರದ ಮುಂದಿನ ಕ್ರಮ ಏನಾಗಲಿದೆ ಎಂಬುದರ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.

WhatsApp Image 2026 04 25 at 11.17.02
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಿಂಗಳೊಳಗೆ ಜಾರಿಯಾಗಲಿದೆ ಭಾರತ–ನ್ಯೂಜಿಲೆಂಡ್ FTA: ಏನಿದು ‘ಫ್ರೀ ಟ್ರೇಡ್ ಅಗ್ರಿಮೆಂಟ್‌’?

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ‘ಮುಕ್ತ ವ್ಯಾಪಾರ ಒಪ್ಪಂದ’ (Free Trade...

ಬಸವನ ಬಾಗೇವಾಡಿ | ಕನಿಷ್ಠ ವೇತನ ಜಾರಿಗೆ ಒತ್ತಾಯಿಸಿ ಪತ್ರ ಚಳವಳಿ

ಶಾಸನಬದ್ಧವಾಗಿ ನಿಗದಿಪಡಿಸಿರುವ ಪರಿಷ್ಕೃತ ಕನಿಷ್ಠ ವೇತನವನ್ನು ಕೂಡಲೇ ಜಾರಿಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ...

ನಿಠಾರಿ ಸರಣಿ ಹತ್ಯೆ ಪ್ರಕರಣ: ಖುಲಾಸೆಯಾಗಿದ್ದ ಸುರೇಂದ್ರ ಕೋಲಿ ಅನುಮಾನಾಸ್ಪದ ಸಾವು

ದೇಶವನ್ನೇ ಬೆಚ್ಚಿಬೀಳಿಸಿದ್ದ ಭೀಕರ ನೋಯ್ಡಾದ ನಿಠಾರಿ ಸರಣಿ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ...

ವಿಜಯಪುರ | ಯೋಗದಿಂದ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿ: ಸುನೀಲಗೌಡ ಪಾಟೀಲ

ಯೋಗಾಭ್ಯಾಸದಿಂದ ಉತ್ತಮ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜೊತೆಗೆ ಒತ್ತಡವನ್ನು...