ಕರಸೇವಕರ ಬಂಧನ | 24 ಗಂಟೆಯಲ್ಲಿ ಬಂಧಿತರನ್ನು ಬಿಡುಗಡೆ ಮಾಡದಿದ್ದರೆ ಹೋರಾಟ ತೀವ್ರ: ಬಿಜೆಪಿ ಎಚ್ಚರಿಕೆ

Date:

ಹುಬ್ಬಳ್ಳಿಯ ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ರಾಜ್ಯ ಬಿಜೆಪಿ ಘಟಕ ಬುಧವಾರ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಿತು.

- Advertisement -

ಹುಬ್ಬಳ್ಳಿಯ ಶಹರ ಠಾಣೆ ಎದುರು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ ನಡೆದಿದೆ. ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಉಪಸ್ಥಿತಿಯಲ್ಲಿ ಪ್ರತಿಭಟನೆ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಆರ್ ಅಶೋಕ್, “ರಾಮ ಭಕ್ತರನ್ನು ಬಂಧಿಸುವ ಹುನ್ನಾರ ಕಾಂಗ್ರೆಸ್ ಮಾಡುತ್ತಿದೆ. ರಾಜ್ಯದಲ್ಲಿ ಸುಮಾರು 56,000 ಪೆಂಡಿಂಗ್ ಕೇಸ್​ಗಳು ಇವೆ. ಆದರೆ, ಅವೆಲ್ಲವನ್ನು ಬಿಟ್ಟು ಹುಬ್ಬಳ್ಳಿ ಕಡೆ ಬಂದಿರೋದು ಯಾಕೆ? ಕರಸೇವಕರನ್ನು ಹುಡುಕಿ ಬಂಧನ ಮಾಡಿದ್ದು ನ್ಯಾಯವಾ? ರಾಮನ ಮೇಲೆ‌ ಕಾಂಗ್ರೆಸ್​ಗೆ ಕೋಪ ಏಕೆ” ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೇಲೆ‌ ‌ಚೀಟಿಂಗ್ ಕೇಸ್ ಇಲ್ವಾ ಎಂದು ಪ್ರಶ್ನಿಸಿದ ಅಶೋಕ್, ಹಿಂದೂ ಕಾರ್ಯಕರ್ತರನ್ನು ಹುಡುಕಿ ಹುಡುಕಿ‌ ಕೇಸ್ ಹಾಕುತ್ತಿದ್ದಾರೆ. ಕೂಡಲೇ ಜೈಲಿನಿಂದ ಶ್ರೀಕಾಂತ ಪೂಜಾರಿ ಬಿಡುಗಡೆ ಮಾಡಬೇಕು. ನನ್ನ ಮೇಲೂ ಕೇಸ್ ಇದೆ ಬಂಧಿಸಿ ನೋಡೋಣ ಎಂದು ಸರ್ಕಾರಕ್ಕೆ ಸವಾಲೆಸೆದರು.

ಪ್ರತಿಭಟನಾಕಾರರು, ಸಿಎಂ ಸಿದ್ದರಾಮಯ್ಯ ಮತ್ತು ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ್ ವಿರುದ್ಧ ಧಿಕ್ಕಾರ ಕೂಗಿದರು. “ನಾವು ರಾಮ ಭಕ್ತರಾಗಿ ಬಂದಿದ್ದೇವೆ, ಆಂಜನೇಯ ಆಗೋಕೆ ಬಿಡಬೇಡಿ” ಇದೇ ವೇಳೆ ಅಶೋಕ್ ಅವರು ಪೊಲೀಸರಿಗೆ, ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟರು.

ಬೆಂಗಳೂರಲ್ಲೂ ಪ್ರತಿಭಟನೆ

“ರಾಜ್ಯದ ಕಾಂಗ್ರೆಸ್ ಸರಕಾರವು ಕರಸೇವಕರನ್ನು ಬಂಧಿಸುತ್ತಿರುವುದು ಖಂಡನೀಯ” ಎಂದು ಶಾಸಕ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್‍ಕುಮಾರ್ ಅವರು ತಿಳಿಸಿದರು.

ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿ, “1992ರಲ್ಲಿ ಕರಸೇವಕರನ್ನು ಹತ್ಯೆ ಮಾಡಲು ಮುಂದಾಗಿತ್ತು. ಈಗ ಜವಾಬ್ದಾರಿಯುತ ಮುಖ್ಯಮಂತ್ರಿ ಸ್ಥಾನದಲ್ಲಿರುವ ಸಿದ್ದರಾಮಯ್ಯನವರ ಹಿಂದೂ ವಿರೋಧಿ ನೀತಿ ಸ್ಪಷ್ಟವಾಗುತ್ತದೆ” ಎಂದು ಟೀಕಿಸಿದರು.

“ಅಲ್ಪಸಂಖ್ಯಾತರ ಬಗ್ಗೆ ಅತಿಯಾದ ಒಲವು ನಿಮ್ಮದು. ಹಿಂದೆ ಟಿಪ್ಪು ಜಯಂತಿ ಮಾಡಿದ್ದೀರಿ. ಕನ್ನಡ ಭಾಷಾ ಹೋರಾಟಗಾರರನ್ನು ಬಂಧಿಸುತ್ತೀರಿ. ರೈತ ವಿರೋಧಿ ನಿಲುವು ನಿಮ್ಮದು” ಎಂದರು.

ಮಾಜಿ ಸಚಿವ ಸಿ ಎನ್ ಅಶ್ವತ್ಥನಾರಾಯಣ್ ಮಾತನಾಡಿ, “ರಾಮಮಂದಿರ ನಮ್ಮ ಸ್ವಾಭಿಮಾನದ ಸಂಕೇತ. ಹಲವಾರು ಸವಾಲುಗಳ ಬಳಿಕ ಇದರ ಪುನರ್ ನಿರ್ಮಾಣವಾಗಿದೆ. ಕರ್ನಾಟಕ ಮಾತ್ರವಲ್ಲದೆ ಇಡೀ ದೇಶ ಸಂಭ್ರಮ ಪಡುವ ಈ ಸುಸಂದರ್ಭದಲ್ಲಿ ಕಾಂಗ್ರೆಸ್ ಸರಕಾರದ ಕ್ರಮ ಅತ್ಯಂತ ಆಕ್ಷೇಪಾರ್ಹ ಮತ್ತು ಖಂಡನೀಯ. ಸರಕಾರ ತನ್ನ ಭಂಡತನ ಕೈಬಿಡಬೇಕು. ಬಂಧಿತರನ್ನು ಬಿಡುಗಡೆ ಮಾಡದಿದ್ದರೆ ಹೋರಾಟ ತೀವ್ರವಾಗಲಿದೆ” ಎಂದು ಎಚ್ಚರಿಕೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....

ಬಿಹಾರದ ಖಜಾನೆ ಖಾಲಿ, ಆದರೂ ಪ್ರಧಾನಿ ಹುಟ್ಟುಹಬ್ಬಕ್ಕೆ ಕೋಟಿ ಕೋಟಿ ಪೋಲು: ತೇಜಸ್ವಿ ಯಾದವ್ ಆರೋಪ

ಬಿಹಾರದಲ್ಲಿ ತೀವ್ರ ಪ್ರವಾಹ ಪರಿಸ್ಥಿತಿಯಿಂದಾಗಿ ಲಕ್ಷಾಂತರ ಜನರು ತೊಂದರೆಯಲ್ಲಿರುವಾಗ ಮತ್ತು ರಾಜ್ಯ...

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ಹವಾಮಾನ ವರದಿ: ರಾಜ್ಯದ 16 ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ

ಬಂಗಾಳಕೊಲ್ಲಿ ಮತ್ತು ಉತ್ತರ ಅಂಡಮಾನ್ ಸಮುದ್ರ ಭಾಗದಲ್ಲಿ ತೀವ್ರ ವಾಯುಭಾರ ಕುಸಿತ...