ಬಾಬಾ ವಂಗಾ ಭವಿಷ್ಯ | ವೈಜ್ಞಾನಿಕ ಆಧಾರವಿಲ್ಲದ ಸುಳ್ಳುಗಳನ್ನು ಪ್ರಸಾರ ಮಾಡುವ ಮಾಧ್ಯಮಗಳು

Date:

Advertisements

ಜಪಾನ್ ದೇಶದ ಮಂಗಾ ಕಲಾವಿದೆ ಅಥವಾ ಹೊಸ ಬಾಬಾ ವಂಗಾ ಎಂದೇ ಕರೆಯಲ್ಪಡುವ ರಿಯೋ ಟಟ್ಸುಕಿ ಅವರು ಜುಲೈ 5,2025ರಂದು ಜಪಾನ್‌ನಲ್ಲಿ ಭೀಕರ ಸುನಾಮಿ ಸಂಭವಿಸುತ್ತದೆ ಎಂದು ಹೇಳಿರುವುದನ್ನು ಭಾರತದ ಮಾಧ್ಯಮಗಳು ಒಳಗೊಂಡಂತೆ ವಿಶ್ವದ ಹಲವಾರು ಮಾಧ್ಯಮಗಳು ವೈಭವೀಕರಿಸಿ ಸುದ್ದಿ ಮಾಡಿದ್ದವು. ವೈಜ್ಞಾನಿಕ ಆಧಾರವಿಲ್ಲದ ಇಂತಹ ಸುದ್ದಿಗಳು ಜನರಲ್ಲಿ ಭೀತಿಯನ್ನೂ, ಗೊಂದಲವನ್ನು ಹೆಚ್ಚಿಸುತ್ತದೆ ಎಂದು ಮಂಗಳೂರು ವಿವಿಯ ಸಾಗರ ಭೂ ವಿಜ್ಞಾನ ವಿಭಾಗದ ಮಾಜಿ ಪ್ರಾಧ್ಯಾಪಕರಾದ ಡಾ. ಬಿ ಆರ್‌ ಮಂಜುನಾಥ್‌ ಅಭಿಪ್ರಾಯಪಟ್ಟಿದ್ದಾರೆ.

ಜಪಾನ್ ವಿಶ್ವದ ಅತ್ಯಂತ ಭೂಕಂಪ ಸಕ್ರಿಯ ಪ್ರದೇಶಗಳಲ್ಲಿ ಒಂದಾಗಿದೆ ಎಂಬುದು ಸತ್ಯ. ಈವರೆಗೆ ಜಪಾನ್‌ನಲ್ಲಿ ಹಲವಾರು ಭೀಕರ ಭೂಕಂಪಗಳು ಮತ್ತು ಸುನಾಮಿಗಳು ಸಂಭವಿಸಿರುವುದೂ ನಿಜ. ಆದರೂ ಕೂಡ, ಭೂಕಂಪ ಅಥವಾ ಸುನಾಮಿಯನ್ನು ನಿಖರವಾಗಿ ಯಾವ ದಿನ, ಯಾವ ಸಮಯದಲ್ಲಿ ಸಂಭವಿಸುತ್ತವೆ ಎಂಬುದನ್ನು ಹೇಳಬಹುದಾದ ಯಾವುದೇ ವಿಜ್ಞಾನ ಅಥವಾ ತಂತ್ರಜ್ಞಾನವನ್ನು ಈವರೆಗೆ ಅಭಿವೃದ್ಧಿಪಡಿಸಲಾಗಿಲ್ಲ ಎಂದು ಮಂಜುನಾಥ್‌ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅಪಾಯಕಾರಿ ಸೈಬರ್ ಅಪರಾಧ ಕುರಿತು ಜನ ಜಾಗೃತರಾಗಬೇಕಿದೆ

Advertisements

ಭೂಕಂಪವು ಭೂಮಿಯ ಲಿಥೋಸ್ಫಿಯರ್‌ನಲ್ಲಿ ಒತ್ತಡ ಸಂಗ್ರಹವಾಗಿ, ಬಂಡೆಗಳು ಒತ್ತಡವನ್ನು ತಡೆಯಲಾಗದೆ ಒಡೆಯುವುದರಿಂದ ಉಂಟಾಗುತ್ತದೆ. ಈ ಆಕಸ್ಮಿಕ ಒಡಕು ಭೂಕಂಪ ತರಂಗಗಳ ರೂಪದಲ್ಲಿ ಶಕ್ತಿಯನ್ನು ಬಿಡುಗಡೆ ಮಾಡುತ್ತದೆ. ಈ ತರಂಗಗಳು ಭೂಮಿಯ ಮೇಲ್ಮೈಯಲ್ಲಿ ಕಂಪನವನ್ನು ಉಂಟುಮಾಡುತ್ತವೆ, ಇದು ಭೂಕಂಪವಾಗಿ ಅನುಭವವಾಗುತ್ತದೆ. ಪ್ರಮುಖ ಭೂಕಂಪ ಅಥವಾ ಸುನಾಮಿಯಿಂದ ಬಿಡುಗಡೆಯಾಗುವ ಶಕ್ತಿಯು ಪರಮಾಣು ಸ್ಫೋಟಕ್ಕೆ ಸಮಾನವಾಗಿರಬಹುದು, ಆದರೆ ಈ ಒತ್ತಡ ಯಾವಾಗ ಒಡೆಯುತ್ತದೆ ಎಂಬುದನ್ನು ನಿಖರವಾಗಿ ಅಂದಾಜಿಸಲು ಸಾಧ್ಯವಿಲ್ಲ ಎಂದು ಮಂಜುನಾಥ್ ತಿಳಿಸಿದ್ದಾರೆ.

ಜುಲೈ 5, 2025ರಂದು ಜಪಾನ್‌ನಲ್ಲಿ ‘ದೊಡ್ಡ ಸುನಾಮಿ’ ಸಂಭವಿಸುತ್ತದೆ ಎಂಬ ಮಾತು ವೈಜ್ಞಾನಿಕವಾಗಿ ಅಸಾಧ್ಯ. ಏಕೆಂದರೆ ಶಿಲೆಗಳಲ್ಲಾಗುವ ಒತ್ತಡ ಯಾವಾಗ ತೀವ್ರವಾಗಿ ಹರಿದು ಭೂಕಂಪ ಉಂಟಾಗುತ್ತದೆ ಎಂಬುದನ್ನು ನಿಖರವಾಗಿ ಯಾರೂ ಊಹಿಸಲು ಸಾಧ್ಯವಿಲ್ಲ. ಆದ್ದರಿಂದ, ಈ ರೀತಿಯ ಹೇಳಿಕೆಗಳು ಕೇವಲ ಊಹಾಪೋಹವಾಗಿಯೇ ಉಳಿಯುತ್ತವೆ. ಆದ್ದರಿಂದ ಮಾಧ್ಯಮಗಳು ಸೃಷ್ಟಿಸುವ ಇಂತಹ ಸುಳ್ಳುಗಳನ್ನು ಸಾರ್ವಜನಿಕರು ನಂಬಬಾರದು.ಈ ರೀತಿಯ ಊಹಾಪೋಹಗಳು ಸಾರ್ವಜನಿಕರಲ್ಲಿ ಗೊಂದಲವನ್ನು ಉಂಟುಮಾಡುವುದರಿಂದ, ವೈಜ್ಞಾನಿಕ ಮಾಹಿತಿಯ ಆಧಾರದ ಮೇಲೆ ಜನರಲ್ಲಿ ಜಾಗೃತಿಯನ್ನು ಮೂಡಿಸುವುದು ಅಗತ್ಯವಾಗಿದೆ ಎಂದು ಡಾ. ಬಿ ಆರ್‌ ಮಂಜುನಾಥ್‌ ಮನವಿ ಮಾಡಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X