ಬೆಂಗಳೂರು | ಕನ್ನಡಿಗರ ಬಗ್ಗೆ ಅವಹೇಳನಕಾರಿ ಬರಹ; ಪಶ್ಚಿಮ ಬಂಗಾಳ ಮೂಲದ ಯುವಕನ ಬಂಧನ

Date:

ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್‌ನಲ್ಲಿ ಬೆಂಗಳೂರು ಹಾಗೂ ಕನ್ನಡಿಗರ ಬಗ್ಗೆ ಅವಹೇಳನಕಾರಿ ಬರಹ ಪ್ರಕಟಿಸಿದ್ದ ಯುವಕನನ್ನು ನಗರದ ಕೊಡಿಗೇಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ.

- Advertisement -

ಪಶ್ಚಿಮ ಬಂಗಾಳ ಮೂಲದ ನಿಲೋಯ್ ಮಂಡಲ್ ಬಂಧಿತ ಆರೋಪಿಯಾಗಿದ್ದು, ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಈತ “ನೇಟಿವ್ ಬೆಂಗಳೂರಿಯನ್ಸ್” ಎಂಬ ಪೇಜ್ ಒಂದರಲ್ಲಿ “ಕರ್ನಾಟಕದ ಕುರಿತು ಕೆಟ್ಟದಾಗಿ ಅವಹೇಳನ ಮಾಡಿದ್ದಲ್ಲದೇ, ಉತ್ತರ ಭಾರತದವರು ಬೆಂಗಳೂರಿನಿಂದ ಹೊರಟು ಹೋದರೆ ಬೆಂಗಳೂರಿಗರು ಕಾಡು ಜನರಿಗೆ ಸಮವಾಗುತ್ತಾರೆ” ಎಂದು ಅತಿರೇಕವಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಕನ್ನಡ ಅತ್ಯಂತ ಕೆಟ್ಟ ಭಾಷೆ ಎಂದು ಅವಹೇಳನ ಮಾಡಿದ್ದ. ಈ ಬಗ್ಗೆ ಅನೇಕ ಕನ್ನಡಪರ ಸಂಘಟನೆಗಳು, ಕಾರ್ಯಕರ್ತರು ಆರೋಪಿ ವಿರುದ್ಧ ಕ್ರಮ ಕೈಗೊಳ್ಳುವಂತೆ, ಆತ ಕೆಲಸ ಮಾಡುತ್ತಿದ್ದ ಕಂಪನಿ ಹಾಗೂ ಬೆಂಗಳೂರು ಪೊಲೀಸರಿಗೆ ದೂರು ನೀಡಿದ್ದರು. ಆರೋಪಿಯ ಕೀಳು ಅಭಿಪ್ರಾಯದ ವಿರುದ್ಧ ವಿಷಾದ ವ್ಯಕ್ತಪಡಿಸಿದ್ದ ಕಂಪನಿ ಆತನ ವಿರುದ್ಧ ಸೂಕ್ತ ಕ್ರಮದ ಭರವಸೆ ನೀಡಿತ್ತು. ಮತ್ತೊಂದೆಡೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದ ಕೊಡಿಗೆಹಳ್ಳಿ ಪೊಲೀಸರು ಆರೋಪಿಯನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಗಾಂಜಾ ಮಾರಾಟ ಆರೋಪ; ಮಾಜಿ ಸಚಿವ ಮುನಿರತ್ನ ವಿರುದ್ಧ ದೂರು

ಆತನ ಕಂಪನಿ ಪ್ರತಿಕ್ರಿಯೆ ನೀಡಿದ್ದು, “ನಮಸ್ಕಾರ, ನಮ್ಮ ಉದ್ಯೋಗಿಗಳಲ್ಲಿ ಒಬ್ಬರಾದ ನಿಲೋಯ್ ಮಂಡಲ್ ಬಗ್ಗೆ ನೀವು ನೀಡಿರುವ ದೂರಿನ ಕುರಿತು ನಾವು ತಿಳಿಸಲು ಬಯಸುತ್ತೇವೆ. ನಾವು ಈ ವಿಷಯಗಳನ್ನು ಗಂಭೀರವಾಗಿ ಪರಿಗಣಿಸುತ್ತೇವೆ. ಜತೆಗೆ ನೋವುಂಟು ಮಾಡಿರುವ ಟೀಕೆಗಳಿಗೆ ಅಥವಾ ಭಾವನೆಗಳಿಗೆ ನಾವು ತೀವ್ರವಾಗಿ ವಿಷಾದಿಸುತ್ತೇವೆ. ನಿಲೋಯ್ ಮಂಡಲ್ ಹೇಳಿಕೆ ಬಗ್ಗೆ ಆಂತರಿಕ ತನಿಖೆಯನ್ನು ಪ್ರಾರಂಭಿಸಿದ್ದೇವೆ. ಹೆಚ್ಚಿನ ತನಿಖೆಗಾಗಿ ನಾವು ಈ ವಿಷಯವನ್ನು ಸೂಕ್ತ ಸೈಬರ್ ಕ್ರೈಮ್ ಅಧಿಕಾರಿಗಳಿಗೆ ವರದಿ ಮಾಡುತ್ತಿದ್ದೇವೆ. ನಮ್ಮ ಆಂತರಿಕ ತನಿಖೆಯ ಫಲಿತಾಂಶ ಏನೇ ಇರಲಿ, ಈ ಘಟನೆಯಿಂದ ಯಾವುದೇ ಭಾವನೆಗಳಿಗೆ ಧಕ್ಕೆಯುಂಟಾಗಿದ್ದರೆ ನಾವು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇವೆ. ಸೈಬರ್ ಕ್ರೈಮ್ ವಿಭಾಗದ ಸಲಹೆಯಂತೆ ನಾವು ಎಲ್ಲ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಈ ಪ್ರಕರಣದಲ್ಲಿ ಯಾವುದೇ ಬೆಳವಣಿಗೆಗಳು ಮತ್ತು ತನಿಖೆಯ ಫಲಿತಾಂಶಗಳ ಕುರಿತು ನಾವು ನಿಮಗೆ ತಿಳಿಸುತ್ತೇವೆ” ಎಂದು ಹೇಳಿದ್ದಾರೆ.

“ಬಂಧಿತ ವ್ಯಕ್ತಿ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು. ಈ ಮೂಲಕವಾದರೂ ಪರಭಾಷಿಕರು ನಮ್ಮ ನಾಡು, ನುಡಿ, ಜನತೆಯ ವಿಚಾರಕ್ಕೆ ಬರುವುದನ್ನು ನಿಲ್ಲಿಸಬಹುದು ಎಂದು ಕನ್ನಡ ಪರ ಸಂಘಟನೆಗಳು, ಕಾರ್ಯಕರ್ತರ ಆಗ್ರಹವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...