ಫ ಗು ಹಳಕಟ್ಟಿ ಅವರು ವಚನ ಸಂರಕ್ಷಣೆ ಕೆಲಸ‌ ಮಾಡಿದ್ದರಿಂದ ಬಸವಣ್ಣ ಬೆಳಕಿಗೆ: ಎಂ ಬಿ ಪಾಟೀಲ್

Date:

Advertisements

ಫ ಗು ಹಳಕಟ್ಟಿಯವರು ವಚನ ಸಂರಕ್ಷಣೆಯ ಕೆಲಸ‌ ಮಾಡದಿದ್ದರೆ ಬಸವಣ್ಣ ಕೂಡ ಬೆಳಕಿಗೆ‌ ಬರುತ್ತಿರಲಿಲ್ಲ. ಅವರಿಂದಾಗಿ 250 ವಚನಕಾರರು ಬೆಳಕಿಗೆ‌ ಬಂದಿದ್ದಾರೆ. ಅದಕ್ಕಿಂತ ಮೊದಲು ಕೇವಲ 40 ವಚನಕಾರರು ಮಾತ್ರ ನಾಡಿನ ಜನರಿಗೆ ಗೊತ್ತಾಗಿದ್ದರಷ್ಟೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಹೇಳಿದರು.

ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಮತ್ತು ಬೆಂಗಳೂರು ನಗರ ಶರಣ ಸಾಹಿತ್ಯ ಪರಿಷತ್ ಇಲ್ಲಿನ ಗಾಂಧಿ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ವಚನ ಪಿತಾಮಹ ಡಾ.ಫ ಗು ಹಳಕಟ್ಟಿ ಜನ್ಮ‌ದಿನಾಚರಣೆ ಸಮಾರಂಭದಲ್ಲಿ ಅವರು ಮಾತನಾಡಿದರು.

“ಬಿಎಂಶ್ರೀ‌ ಅವರು ಹೇಳಿದ ಹಾಗೆ ಹಳಕಟ್ಟಿ ಅವರು ವಚನ‌ ಗುಮ್ಮಟವಾಗಿದ್ದರು. ಮಂಗಳೂರಿನ ಬಾಸೆಲ್ ಮಿಷನ್ ಸಂಸ್ಥೆಯು ಕ್ರಿಶ್ಚಿಯನ್ ಧರ್ಮಕ್ಕೆ ಧಕ್ಕೆ ಆಗುತ್ತದೆ ಎಂದು ಹೇಳಿ ಹಳಕಟ್ಟಿವರು ಕೊಟ್ಟ ವಚನಗಳನ್ನು ಮುದ್ರಿಸಲಿಲ್ಲ. ಆಗ ಹಳಕಟ್ಟಿಯವರು ಸ್ವಂತ ಮನೆ ಮಾರಾಟ ಮಾಡಿ, ವಚನಗಳನ್ನು ಅಚ್ಚು ಹಾಕಿಸಿದರು. ಎಂ ಎಂ ಕಲಬುರಗಿ ಅವರ ಪ್ರಯತ್ನದ ಫಲವಾಗಿ ಫ.ಗು.ಹಳಕಟ್ಟಿ ಸಂಶೋಧನಾ ಸಂಸ್ಥೆ ಹುಟ್ಟಿತು” ಎಂದು ನೆನೆದರು.

Advertisements

“ವಿಜಯಪುರದಲ್ಲಿ ಬಿಎಲ್ ಡಿ ಶಿಕ್ಷಣ ಸಂಸ್ಥೆ, ಸಿದ್ಧೇಶ್ವರ ಬ್ಯಾಂಕ್, ಭೂತನಾಳ ಕೆರೆ ನಿರ್ಮಾಣ ಮಾಡಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಬಸವಾದಿ ಶರಣರನ್ನು ನೆನೆಯುವಾಗ ಹಳಕಟ್ಟಿಯವರನ್ನೂ ನೆನೆಯಬೇಕು” ಎಂದು ಬಣ್ಣಿಸಿದರು.

ಗದಗದ ತೋಂಟದಾರ್ಯ ಸಂಸ್ಥಾನ ಮಠದ ಡಾ.ತೋಂಟದ ಸಿದ್ಧರಾಮ ಸ್ವಾಮೀಜಿ ಮಾತನಾಡಿ, “ಕನ್ನಡ ಸಾಹಿತ್ಯಕ್ಕೆ ಗೌರವ ತಂದುಕೊಟ್ಟ ಸಾಹಿತ್ಯ ಅಂದರೆ ಅದು ವಚನ ಸಾಹಿತ್ಯ” ಎಂದು ಹೇಳಿದರು.

ಆಶಯ ಭಾಷಣ ಮಾಡಿದ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಸಿ.ಸೋಮಶೇಖರ್, “12ನೇ ಶತಮಾನದ ವಚನ ಸಾಹಿತ್ಯವನ್ನು ಪುನರ್ ಸೃಷ್ಟಿಸಿದ‌ ಕೀರ್ತಿ ಹಳಕಟ್ಟಿ ಅವರಿಗೆ ಸಲ್ಲಬೇಕು” ಎಂದರು.

ನಾಡೋಜ ಚಂದ್ರಶೇಖರ ಕಂಬಾರ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬೆಂಗಳೂರು ನಗರ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ವಿ.ನಾಗರಾಜಮೂರ್ತಿ, ಕದಳಿ ಮಹಿಳಾ ವೇದಿಕೆಯ ಪ್ರಮೀಳಾ ಗರಡಿ ಇದ್ದರು.‌

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X