ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇ.60 ಕನ್ನಡ ಕಡ್ಡಾಯ: ಬಿಬಿಎಂಪಿ ಆದೇಶ

Date:

Advertisements

ಬೆಂಗಳೂರಿನ ಅಂಗಡಿ ಮುಂಗಟ್ಟುಗಳಂಥ ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇ.60 ರಷ್ಟು ಕನ್ನಡ ಕಡ್ಡಾಯವಿಲ್ಲದಿದ್ದರೆ ಅಂಥ ಅಂಗಡಿಗಳ ಪರವಾನಗಿ ರದ್ದುಗೊಳಿಸುವುದಾಗಿ ಬಿಬಿಎಂಪಿ ಆದೇಶಿಸಿದೆ.

ಫೆ.28ರ ವೇಳೆಗೆ ಅಂಗಡಿ, ಹೋಟೆಲ್‌ಗಳು ಹಾಗೂ ಮಾಲ್‌ಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಇಲ್ಲದಿದ್ದರೆ ಪರವಾನಗಿ ರದ್ದುಗೊಳಿಸುವುದಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆದೇಶಿಸಿದೆ.

ಬಿಬಿಎಂಪಿ ಆಯುಕ್ತರಾದ ತುಷಾರ್ ಗಿರಿನಾಥ್ ಅಧ್ಯಕ್ಷತೆಯಲ್ಲಿ ಭಾಷಾ ಬಳಕೆಯ ಬಗ್ಗೆ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ವಾಧಿಕಾರದ ಸಾಂಸ್ಥೀಕರಣದತ್ತ ಭಾರತ, ಇನ್ನೊಂದು ಗುಲಾಮಗಿರಿಯತ್ತ ದೇಶ

ಎಲ್ಲ ಹೋಟೆಲ್‌ಗಳು ಹಾಗೂ ಇತರ ಅಂಗಡಿಗಳ ನಾಮಫಲಕಗಳಲ್ಲಿ ಕಡ್ಡಾಯವಾಗಿ ರಾಜ್ಯದ ಅಧಿಕೃತ ಭಾಷೆ ಬಳಸಬೇಕು. ಆದೇಶ ಪಾಲಿಸದ ಅಂಗಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಬಿಬಿಎಂಪಿ ಆದೇಶಿಸಿದೆ.

ಬೆಂಗಳೂರು ನಗರದಲ್ಲಿ 1400 ಕಿ.ಮೀ ಮುಖ್ಯ ರಸ್ತೆ ಹಾಗೂ ಉಪ ರಸ್ತೆಗಳಿವೆ. ರಾಜ್ಯ ಭಾಷೆ ಬಳಕೆಯ ನಾಮಫಲಕಗಳ ನಿಯಮಗಳನ್ನು ಅನುಸರಿಸದ ಅಂಗಡಿಗಳ ಬಗ್ಗೆ ಸಮೀಕ್ಷೆ ನಡೆಸಲಾಗುವುದು ಎಂದರು.

ಇತ್ತೀಚಿಗೆ ಕನ್ನಡಪರ ಸಂಘಟನೆಗಳು ಚಿಕ್ಕಪೇಟೆಯಲ್ಲಿ ಕನ್ನಡ ನಾಮಫಲಕಕ್ಕೆ ಸಂಬಂಧಿಸಿದಂತೆ ಅಂಗಡಿಗಳ ಮೇಲೆ ಪ್ರತಿಭಟನೆ ನಡೆಸಿದ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ. ಸ್ಥಳೀಯ ಭಾಷೆ ಕಡ್ಡಾಯವಿಲ್ಲದಿದ್ದರೆ ಪರವಾನಗಿ ರದ್ದುಗೊಳಿಸಲಾಗುವುದು ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X