ಭದ್ರಾ ಮೇಲ್ದಂಡೆ ಕಾಮಗಾರಿ ಸ್ಥಗಿತವಾಗಿಲ್ಲ, ಗುತ್ತಿಗೆದಾರಿಗೆ ₹800 ಕೋಟಿ ಪಾವತಿ: ಸಿದ್ದರಾಮಯ್ಯ

Date:

ಭದ್ರಾ ಮೇಲ್ದಂಡೆ ಕಾಮಗಾರಿಗಳು ಸ್ಥಗಿತವಾಗಿಲ್ಲ. ಆದರೆ ಶೀಘ್ರಗತಿಯಲ್ಲಿ ಕಾಮಗಾರಿಗಳು ನಡೆಯುತ್ತಿಲ್ಲ. ಗುತ್ತಿಗೆದಾರಿಗೆ ಈ ವರ್ಷ 800 ಕೋಟಿ ರೂ.ಗಳನ್ನು ಪಾವತಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

- Advertisement -

ಅವರು ಗುರುವಾರ ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, “ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ.ಗಳನ್ನು ನೀಡುವುದಾಗಿ 2023-24 ರ ಕೇಂದ್ರ ಬಜೆಟ್ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಘೋಷಿಸಿದ್ದರು. ಅದೇ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿಯವರು ತಮ್ಮ ಬಜೆಟ್ ನಲ್ಲಿಯೂ ಇದನ್ನು ಪುನರುಚ್ಚರಿಸಿದ್ದರು. ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಮಾಡುವುದಾಗಿ ಹೇಳಿದ್ದರು. ಇಷ್ಟು ವರ್ಷಗಳಾದರೂ ಒಂದು ಪೈಸೆಯೂ ರಾಜ್ಯಕ್ಕೆ ಬಂದಿಲ್ಲ. ಸರ್ಕಾರ ಅನೇಕ ಬಾರಿ ಕೇಂದ್ರ ಸರ್ಕಾರಕ್ಕೆ ಮನವಿಯನ್ನು ನೀಡಿದ್ದು, ಪ್ರಧಾನಿಗಳು, ನಿರ್ಮಲಾ ಸೀತಾರಾಮನ್, ಅಮಿತ್ ಶಾ ಅವರನ್ನೂ ಭೇಟಿ ಮಾಡಲಾಗಿದೆ. ಅವರೇ ಬಜೆಟ್ ನಲ್ಲಿ ಘೋಷಣೆ ಮಾಡಿರುವುದನ್ನು ಕೊಡಿ ಎಂದರೂ ಬಿಡುಗಡೆ ಮಾಡಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

“ನನ್ನನ್ನೂ ಒಳಗೊಂಡಂತೆ ಉಪಮುಖ್ಯಮಂತ್ರಿಗಳು ಭೇಟಿಯಾಗಿ ಬಂದಿದ್ದೇವೆ. ನಬಾರ್ಡ್‌ನಲ್ಲಿ ರಾಜ್ಯಕ್ಕೆ ಬರಬೇಕಾದ ಸಾಲದ ಮೊತ್ತ ಕಡಿತವಾಗಿರುವ ಹಿನ್ನೆಲೆಯಲ್ಲಿ ಇತ್ತೀಚೆಗೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿದಾಗಲೂ ಈ ವಿಷಯವನ್ನು ಪ್ರಸ್ತಾಪಿಸಲಾಯಿತು . ಆದರೆ ಇಂದಿನವರೆಗೂ ಒಂದು ರೂಪಾಯಿ ಬಿಡುಗಡೆಯಾಗಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತರ ಜಮೀನು ಮುಳುಗಡೆಯಾಗದಂತೆ ತಡೆಯಲು ಪ್ರಯತ್ನ

ಹೊಸದುರ್ಗ ತಾಲ್ಲೂಕಿನ ಹಿನ್ನೀರಿನಲ್ಲಿ ರೈತರ ಜಮೀನು ಮುಳುಗಡೆಯಾಗಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಮುಳುಗಡೆಯಾಗದ ರೀತಿಯಲ್ಲಿ ತಡೆಯುವ ಪ್ರಯತ್ನವನ್ನು ಸರ್ಕಾರ ಮಾಡಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

“ವಾಣಿ ವಿಲಾಸ ಸಾಗರ ಅಣೆಕಟ್ಟೆಗೆ 115 ವರ್ಷಗಳ ಇತಿಹಾಸವಿದೆ. ಇಷ್ಟು ವರ್ಷಗಳಲ್ಲಿ ಈ ಅಣೆಕಟ್ಟು ಕೋಡಿ ಬಿದ್ದಿರುವುದು ಮೂರು ಬಾರಿ ಮಾತ್ರ. ಅಂದರೆ 1933, 2022 ಹಾಗೂ ಜನವರಿ 14, 2025 ರಲ್ಲಿ ಕೋಡಿ ಬಿದ್ದಿದೆ. ಕರ್ನಾಟಕದ ಮೊದಲನೇ ಜಲಾಶಯ ಇದಾಗಿದ್ದು, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ತಾಯಿ ಸಂಪಾಜಮ್ಮಣಿಯವರ ಹೆಸರಿನಲ್ಲಿ ಕಟ್ಟಿಸಿದ್ದು, ವಾಣಿ ವಿಲಾಸ ಸಾಗರ ಎಂದು ಕರೆಯಲಾಗಿದೆ. 1898 ನೇ ಇಸವಿಯಲ್ಲಿ ಪ್ರಾರಂಭವಾಗಿ 1907 ರಲ್ಲಿ ಅಣೆಕಟ್ಟು ನಿರ್ಮಾಣ ಮುಕ್ತಾಯವಾಯಿತು. 30.ಟಿ.ಎಂ.ಸಿ ನೀರು ಶೇಖರಣೆ ಮಾಡುವ ಸಾಮರ್ಥ್ಯವಿರುವ ಅಣೆಕಟ್ಟು 33 ಸಾವಿರ ಎಕರೆಗೆ ನೀರುಣಿಸುತ್ತದೆ” ಎಂದು ಸಿಎಂ ವಿವರಿಸಿದರು.

“ಈ ಜಿಲ್ಲೆಯ ಅನೇಕ ತಾಲ್ಲೂಕುಗಳು ಬರಪೀಡಿತ ಎಂದು ಆಗ ಹಳೇ ಮೈಸೂರಿನಲ್ಲಿ ರಾಜರ ಪ್ರತಿನಿಧಿಯಾಗಿದ್ದ ಸಂಪಾಜಮ್ಮಣ್ಣಿಯವರು ಈ ಕೆರೆಯನ್ನು ನಿರ್ಮಾಣ ಮಾಡಿದರು .ಈ ಭಾಗದಲ್ಲಿ ಮಳೆ ಕಡಿಮೆಯಿರುವುದರಿಂದ ಅಣೆಕಟ್ಟು ನಿರ್ಮಿಸಿದರೆ ಈ ಭಾಗದ ಜನರಿಗೆ ನೀರು ದೊರೆಯಲಿದೆ ಎಂಬ ಉದ್ದೇಶದಿಂದ ಅವರ ಒಡವೆಗಳನ್ನು ಅಡವಿಟ್ಟು ಸುಮಾರು 45 ಲಕ್ಷ ರೂ.ಗಳನ್ನು ವೆಚ್ಚ ಮಾಡಿದ್ದರು” ಎಂದು ನೆನಪಿಸಿಕೊಂಡರು.

ಸಮೃದ್ಧ ಮಳೆಗಾಗಿ ಪ್ರಾರ್ಥನೆ

“ಇಂದು ಗಂಗಾಪೂಜೆಯನ್ನು ಮಾಡಿ ಬಾಗಿನ ಅರ್ಪಿಸಿದ್ದೇವೆ. ಪ್ರತಿ ವರ್ಷವೂ ರೈತರ ಜಮೀನುಗಳಿಗೆ ನೀರು ಸಿಗುವಂತಾಗಲಿ ಒಳ್ಳೆ ಮಳೆ, ಬೆಳೆಯಾಗಿ ಪ್ರತಿ ವರ್ಷವೂ ಕೋಡಿ ಬೀಳುವಂತೆ ಕೆರೆಗೆ ನೀರು ಬರಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದೇನೆ. ಭದ್ರಾ ಮೇಲ್ದಂಡೆ ಯೋಜನೆ ಅನುಷ್ಠಾನವಾದರೆ ಪ್ರತಿ ವರ್ಷವೂ ಅಣೆಕಟ್ಟಿಗೆ ನೀರು ಹರಿಯಲಿದೆ” ಎಂದರು.

ಕಾಂಗ್ರೆಸ್ ಪಕ್ಷದಲ್ಲಿ ಒಗ್ಗಟ್ಟಿದೆ, ಸರ್ಕಾರ ಸುಭದ್ರವಾಗಿದೆ

“ಬಿಜೆಪಿಯಲ್ಲಿ ಎರಡು ಮೂರು, ನಾಲ್ಕು ಗುಂಪುಗಳಿವೆ, ನಮ್ಮ ಪಕ್ಷದಲ್ಲಿ ಯಾವುದೇ ಗುಂಪುಗಳಿಲ್ಲ. ನಾನು ಮತ್ತು ಡಿ.ಕೆ ಶಿವಕುಮಾರ್ ಇಲ್ಲಿಯೇ ಇದ್ದೇವೆ. ನಮ್ಮಲ್ಲಿ ಗುಂಪುಗಳಿಲ್ಲ. ಬಿಜೆಪಿಯಲ್ಲಿ ಕಚ್ಚಾಟ ನಡೆದಿದೆ. ಆದರೆ ಕಾಂಗ್ರೆಸ್ ಪಕ್ಷದಲ್ಲಿ ಒಗ್ಗಟ್ಟಿದೆ. ಸರ್ಕಾರ ಸುಭದ್ರವಾಗಿದ್ದು, ನಾವು ಐದು ವರ್ಷ ಅಧಿಕಾರ ನಡೆಸಿ 2028 ನಡೆವ ಚುನಾವಣೆಯಲ್ಲಿ ಗೆದ್ದು ಮತ್ತೆ ಅಧಿಕಾರಕ್ಕೆ ಬರಲಿದ್ದೇವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಡಿತರ ಚೀಟಿ ಇ-ಕೆವೈಸಿ ಗಡುವು ವಿಸ್ತರಣೆ: ಸರ್ಕಾರ ಆದೇಶ

ಕರ್ನಾಟಕದಲ್ಲಿ ಎಪಿಎಲ್ ಮತ್ತು ಬಿಪಿಎಲ್ ಪಡಿತರ ಚೀಟಿದಾರರು ರೇಷನ್ ಕಾರ್ಡ್ ಇ-ಕೆವೈಸಿ...

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹತ್ತು ಹೊಸ ಯೋಜನೆಗಳ ಘೋಷಣೆ

ಕಲ್ಯಾಣ ಕರ್ನಾಟಕ ವಿಮೋಚನಾ ದಿನದ ಅಂಗವಾಗಿ ಸಿಎಂ‌ ಡಿ ಕೆ ಶಿವಕುಮಾರ್...

ಕಸ್ತೂರಿ ರಂಗನ್ ವರದಿ: ಸಿಎಂಗೆ ಮನವಿ ಸಲ್ಲಿಸಲು ಪಕ್ಷ, ಸಂಘಟನೆಗಳಿಗೆ ಅವಕಾಶವಿದೆ; ಟಿ.ಡಿ ರಾಜೇಗೌಡ 

ಕಸ್ತೂರಿರಂಗನ್ ವರದಿ ಕುರಿತು ತಮ್ಮ ಅಭಿಪ್ರಾಯ, ಆಕ್ಷೇಪಣೆ ಹಾಗೂ ಬೇಡಿಕೆಗಳನ್ನು ಮುಖ್ಯಮಂತ್ರಿ...

ಬೆಂಗಳೂರು | ಪತ್ನಿ ಮೇಲೆ ಆಸಿಡ್ ಸುರಿದು, ಮಚ್ಚಿನಿಂದ ಹಲ್ಲೆಗೈದ ವಿಕೃತ ಪತಿ

ನಡುರಸ್ತೆಯಲ್ಲೇ ಪತಿಯೊಬ್ಬ ತನ್ನ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಹೃದಯವಿದ್ರಾವಕ...