ಮಾಜಿ ಸಿಎಂ ಮತ್ತು ಸಂಸದ ಬಸವರಾಜ ಬೊಮ್ಮಾಯಿ ಅವರು ಸರ್ವಸಂಪನ್ನರಂತೆ ಈಗ ಮಾತನಾಡುತ್ತಿದ್ದಾರೆ. ನಮ್ಮ ಸರ್ಕಾರ ಜನರ ಬಾಯಿಗೆ ಮಣ್ಣು ಹಾಕುತ್ತಿದೆ ಎನ್ನುವ ಬೊಮ್ಮಾಯಿಯವರಿಗೆ ಕನಿಷ್ಠ ಪಕ್ಷ ಆತ್ಮಸಾಕ್ಷಿ ಇದ್ದಿದರೆ ಈ ರೀತಿಯ ಮಾತು ಆಡುತ್ತಿರಲಿಲ್ಲ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಕುಟುಕಿದ್ದಾರೆ.
“ಬೊಮ್ಮಾಯಿಯವರೆ, ನೀವು ಮುಖ್ಯಮಂತ್ರಿಯಾಗಿ ಏನು ಕಡಿದು ಕಟ್ಟೆ ಹಾಕಿದ್ದೀರಿ? ಎಂದು ಕೇಳಿದರೆ ನೀವು ಉತ್ತರ ಕೊಡಲು ತಡಕಾಡುವಿರಿ. ಮುಖ್ಯಮಂತ್ರಿಯಾಗಿದ್ದಾಗ ನೀವು ಈ ರಾಜ್ಯಕ್ಕೆ ಕೊಟ್ಟ ಕೊಡುಗೆಯೇನು? ಉತ್ತರಿಸಿ” ಎಂದು ಎಕ್ಸ್ ತಾಣದಲ್ಲಿ ಅಗ್ರಹಿಸಿದ್ದಾರೆ.
“ಬೊಮ್ಮಾಯಿಯವರೆ, 2023ರಲ್ಲಿ ನೀವು ಮರಳಿ ಅಧಿಕಾರಕ್ಕೆ ಬರುವುದಿಲ್ಲ ಎಂಬ ಸತ್ಯ ಗೊತ್ತಿತ್ತು. ಹಾಗಾಗಿ ಅಧಿಕಾರ ಬಿಡುವ ಮುನ್ನ ಬಜೆಟ್ ವೆಚ್ಚಕ್ಕಿಂತ 7 ಪಟ್ಟು ವೆಚ್ಚದ ಕಾಮಗಾರಿಗಳಿಗೆ ಅನುಮೋದನೆ ನೀಡಿದಿರಿ. ಆ ಕಾಮಗಾರಿ ಕೈಗೊಂಡ ಗುತ್ತಿಗೆದಾರರಿಗೆ ಹಣ ಪಾವತಿ ಯಾರು ಮಾಡಬೇಕು? ನಿಮ್ಮ ಸ್ವಂತ ಖಜಾನೆಯಿಂದ ಕೊಡುವಂತೆ ಅಪ್ರಸ್ತುತ ಕಾಮಗಾರಿಗಳಿಗೆ ಅನುಮೋದನೆ ಕೊಟ್ಟಾಗ ಪ್ರಜ್ಞೆ ಇರಲಿಲ್ಲವೆ? ಇದು ಜನರ ಬಾಯಿಗೆ ಮಣ್ಣು ಹಾಕುವ ಕೆಲಸವಲ್ಲವೆ?
“ಬೊಮ್ಮಾಯಿಯವರೆ, ನೀವು ಮುಖ್ಯಮಂತ್ರಿಯಾಗಿದ್ದಾಗ ಎಂದಾದರೂ ಕೇಂದ್ರ ಸರ್ಕಾರದ ತೆರಿಗೆ ಅನ್ಯಾಯದ ಬಗ್ಗೆ ಎದೆಯೆತ್ತಿ ಮಾತಾಡಿದ್ದೀರಾ? ಹೋಗಲಿ ಮೋದಿ ಸರ್ಕಾರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಒಮ್ಮೆಯಾದರೂ ಬಾಯಿ ಬಿಟ್ಟಿದ್ದೀರಾ? ಮೋದಿಯವರ ಮುಂದೆ ನಡು ಬಗ್ಗಿಸಿ ನಿಂತಿದ್ದೆ ನಿಮ್ಮ ಸಾಧನೆಯಲ್ಲವೆ? ಇದು ಜನರ ಬಾಯಿಗೆ ಮಣ್ಣು ಹಾಕುವ ಕೆಲಸವಲ್ಲವೆ?” ಎಂದು ಲೇವಡಿ ಮಾಡಿದ್ದಾರೆ.
“ಬೊಮ್ಮಾಯಿಯವರೆ, ಗ್ಯಾರಂಟಿ ಯೋಜನೆಗಳಿಗೆ ನಮ್ಮ ಸರ್ಕಾರ 58 ಸಾವಿರ ಕೋಟಿ ಮೀಸಲಿರಿಸಿದೆ. ಈ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಎಷ್ಟೋ ಮನೆಗಳ ದೀಪ ಉರಿಯುತ್ತಿದೆ ಎಂಬ ಅರಿವು ನಿಮಗರಲಿ. ನಿಮ್ಮ ನೇತೃತ್ವದ ಸರ್ಕಾರವಿದ್ದಾಗ ಯಾವುದಾದರೂ ಒಂದೇ ಒಂದು ಜನಪರ ಕಾರ್ಯಕ್ರಮ ಮಾಡಿದ ಉದಾಹರಣೆ ಇದೆಯೆ? ರಾಜ್ಯದ ಖಜಾನೆ ಲೂಟಿ ಹೊಡದಿದ್ದೆ ನಿಮ್ಮ ಸರ್ಕಾರದ ಹೆಗ್ಗಳಿಕೆಯಲ್ಲವೆ?
ಬೊಮ್ಮಾಯಿ ಅವರ ಸರಕಾರದಲ್ಲಿ 40% ಕಮಿಸ್ಸನ್ ಸಾಧನೆಯೇ ದೊಡ್ಡದು ಕೇಂದ್ರ ಸರಕಾರವು ರಾಜ್ಯಕ್ಕೆ ಕೊಡಬೇಕಾದ ಅನುದಾನವನ್ನು ಕೂಡದೇ ಇದ್ದಾಗಲೂ ಅವರ ಮುಂದೆ ನಾಯಿ ಕುನ್ನಿ ತರ ಬಾಲ ಅಲ್ಲಾಡಿ ಸುತ್ತ ಕಾಲ ಕಳೆದ್ದದ್ದೇ ಇವರ ಸಾಧನೆ