ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ; ಮೀಸಲಾತಿ ವಿರೋಧಿಸಿದ ‘ಫೋನ್‌ಪೇ’ ವಿರುದ್ಧ ಬಾಯ್‌ಕಾಟ್ ಅಭಿಯಾನ

Date:

Advertisements

ಕರ್ನಾಟಕದಲ್ಲಿ ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವಂತೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ. ಸಂಚಿವ ಸಂಪುಟದಲ್ಲಿ ಅಂಗೀಕರಿಸಿದ್ದ ಮಸೂದೆಯನ್ನು ಸದ್ಯ, ಸದನದಲ್ಲಿ ಮಂಡಿಸಲು ಸರ್ಕಾರ ಹಿಂದೇಟು ಹಾಕುತ್ತಿದೆ. ಈ ನಡುವೆ, ಉದ್ಯೋಗ ಮೀಸಲಾತಿಗೆ ಖಾಸಗಿ ಸಂಸ್ಥೆಗಳು ವಿರೋಧ ವ್ಯಕ್ತಪಡಿಸಿವೆ.

ಉದ್ಯೋಗ ಮೀಸಲಾತಿಯನ್ನು ಖಂಡಿಸುವ ಭರದಲ್ಲಿ ಫೋನ್‌ಪೇ ಸಿಇಒ ಸಮೀರ್ ನಿಗಮ್, “ನಾವು ಯಾವುದೇ ರಾಜ್ಯದಲ್ಲಿ 15 ವರ್ಷಕ್ಕಿಂತ ಹೆಚ್ಚು ವಾಸಿಸಿಲ್ಲ. ನಾನು ಕಂಪನಿಗಳನ್ನು ನಿರ್ಮಿಸಿದ್ದು, ಭಾರತದಾದ್ಯಂತ 25000+ ಉದ್ಯೋಗಗಳನ್ನು ಸೃಷ್ಟಿಸಿದ್ದೇನೆ! ನನ್ನ ಮಕ್ಕಳು ತಮ್ಮ ತವರು ನಗರದಲ್ಲಿ ಉದ್ಯೋಗಕ್ಕೆ ಅರ್ಹರಲ್ಲವೇ?” ಎಂದು ಹೇಳುವ ಮೂಲಕ ವಿವಾದ ಸೃಷ್ಠಿಸಿದ್ದಾರೆ.

ಅವರ ಹೇಳಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕನ್ನಡಿಗರು, ಸಾಮಾಜಿಕ ಜಾಲತಾಣದಲ್ಲಿ ‘ಬಾಯ್‌ಕಾಟ್ ಫೋನ್‌ಪೇ’ ಅಭಿಯಾನ ನಡೆಸುತ್ತಿದ್ದಾರೆ. ಅಲ್ಲದೆ, ಕಾಯ್ದೆ ಜಾರಿಗೆ ತರುವುದಾಗಿ ಹೇಳಿ, ಮಸೂದೆಯನ್ನು ತಡೆಹಿಡಿದಿರುವ ಸರ್ಕಾರ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisements

ರಣಧೀರ ಪಡೆಯ ಮುಖಂಡ ಹರೀಶ್ ಭೈರಪ್ಪ ಅವರು, “ಕನ್ನಡಿಗರ ಅನ್ನ ತಿಂದು ದ್ರೋಹ ಬಗೆಯುವ ಈ ಫೋನ್ ಪೇ ಮಾಲೀಕನಿಗೆ ಸರಿಯಾಗಿ ಬುದ್ಧಿ ಕಲಿಸೋಣ. ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ಕೊಡುವುದನ್ನು ವಿರೋಧಿಸುತ್ತಾನಂತೆ , ಇವನ App ಅನ್ನು ನನ್ನ ಜೀವಮಾನದಲ್ಲಿ ಉಪಯೋಗಿಸುವುದಿಲ್ಲ. ಕರ್ನಾಟಕದಿಂದ ಇವನನ್ನು ಓಡಿಸುವ ಕೆಲಸ ಮೊದಲು ಮಾಡೋಣ” ಎಂದು ಟ್ವೀಟ್‌ ಮಾಡಿದ್ದಾರೆ.

 

ಉದಯ್ ಕುಮಾರ್ ಆರ್ ಎಂಬವರು, “ಮೊದಲು ಫೋನ್ ಪೇ ಅಪ್ಲಿಕೇಷನ್ ಅಲ್ಲಿ ಅಕೌಂಟ್ ಡಿ ಆಕ್ಟಿವೇಟ್ ಮಾಡಿ ಆಮೇಲೆ ಪ್ಲೇ ಸ್ಟೋರ್ ಅಲ್ಲಿ 1* ರೇಟಿಂಗ್ ಕೊಟ್ಟು ಅನ್ ಇನ್ಸ್ಟಾಲ್ ಮಾಡಿ” ಎಂದು ಫೇನ್‌ಪೇ ವಿರುದ್ಧ ಕಿಡಿಕಾರಿದ್ದಾರೆ.

 

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X