ಎಲ್ಲವನ್ನೂ ಹೊರಗೆ ತಂದರೆ ಒಳ್ಳೆಯದಲ್ಲ, ವಿಸರ್ಜನೆ ಆದೇಶ ವಾಪಸ್‌ ಪಡೆಯಿರಿ: ಸಿಎಂ ಇಬ್ರಾಹಿಂ ಎಚ್ಚರಿಕೆ

Date:

  • ಜೆಡಿಎಸ್‌ನ ಹಂಗಾಮಿ ಅಧ್ಯಕ್ಷರನ್ನು ಯಾವ ಆಧಾರದಲ್ಲಿ ಮಾಡಿದ್ದೀರಿ?
  • ‘3/2 ನೇ ಸದಸ್ಯರ ಅನುಮತಿ ಪಡೆದು ನನಗೆ ನೋಟಿಸ್ ಕೊಡಬೇಕಿತ್ತು’

ಎಚ್‌ ಡಿ ಕುಮಾರಸ್ವಾಮಿ ಅವರನ್ನು ಜೆಡಿಎಸ್‌ನ ಹಂಗಾಮಿ ಅಧ್ಯಕ್ಷರು ಅಂತ ಯಾವ ಆಧಾರದಲ್ಲಿ ಮಾಡಿದ್ದೀರಿ? ಎಂದು ಜೆಡಿಎಸ್‌ ನಿಕಟಪೂರ್ವ ಅಧ್ಯಕ್ಷ ಸಿಎಂ ಇಬ್ರಾಹಿಂ ಆಕ್ರೋಶ ವ್ಯಕ್ತಪಡಿಸಿದರು.

- Advertisement -

ಜೆಡಿಎಸ್ ರಾಜ್ಯಾಧ್ಯಕ್ಷರು, ಪದಾಧಿಕಾರಿಗಳ ವಿಸರ್ಜನೆ ವಿಚಾರವಾಗಿ ಕುಮಾರಸ್ವಾಮಿ ವಿರುದ್ಧ ಬೆಂಗಳೂರಿನಲ್ಲಿ ವಾಗ್ದಾಳಿ ನಡೆಸಿದ ಅವರು, “ದೇವರು ಮತ್ತು ಜನ ನನ್ನ ಕೈಹಿಡಿಯುತ್ತಾರೆ. ಎಲ್ಲವನ್ನೂ ಹೊರಗೆ ತಂದರೆ ಒಳ್ಳೆಯದಲ್ಲ, ವಿಸರ್ಜನೆ ತಪ್ಪು. ಆದೇಶ ವಾಪಸ್ ಪಡೆದು ಪಕ್ಷದ ಸಭೆ ಕರೆಯಿರಿ” ಎಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

“ನಾನು ಹೋಗದೇ ಇದ್ದರೆ ಚನ್ನಪಟ್ಟಣದಲ್ಲಿ ಎಚ್ ​ಡಿ ಕುಮಾರಸ್ವಾಮಿ ಗೆಲ್ಲುತ್ತಿದ್ದರಾ? ಯಾವ ಒಕ್ಕಲಿಗ ನಾಯಕರನ್ನು ಬೆಳೆಸಿದ್ದೀರಿ ನೀವು? ಇಷ್ಟು ದೊಡ್ಡ ವಯಸ್ಸಿನಲ್ಲಿ ನಿಮ್ಮಿಂದ ಇದನ್ನು ನಿರೀಕ್ಷೆ ಮಾಡಿರಲಿಲ್ಲ. ನಾನು ಹಾಸನ, ಮಂಡ್ಯ, ಹೊಳೆನರಸೀಪುರಕ್ಕೆ ಹೋಗಿ ಸಭೆ ಮಾಡುತ್ತೇನೆ” ಎಂದು ಜೆಡಿಎಸ್ ವರಿಷ್ಠ ದೇವೇಗೌಡರ ಬಗ್ಗೆ ಹರಿಹಾಯ್ದರು.

“ಅವರಿಗೆ ನನ್ನನ್ನು ತೆಗೆಯುವ ಅಧಿಕಾರ ಇಲ್ಲ. ಕಾರ್ಯಕಾರಿ ಸಮಿತಿಯ 3/2 ನೇ ಸದಸ್ಯರ ಅನುಮತಿ ಪಡೆದು ಮೊದಲು ನನಗೆ ನೋಟಿಸ್ ಕೊಡಬೇಕು. ನನ್ನನ್ನು ಕೆಣಕಿದ್ದೀರಿ, ಇದರ ಪರಿಣಾಮ ಮುಂದೆ ಏನಿರುತ್ತದೆ ಅಂತ ಕಾದು ನೋಡಿ” ಎಂದು ಎಚ್ಚರಿಸಿದರು.

ಗೌಡರಿಗೆ ಸ್ವಲ್ಪವಾದರೂ ಪ್ರಜ್ಞೆ ಬೇಡವಾ?

“ಇವತ್ತಿನ ಸಭೆಗೆ ನನಗೆ ಆಹ್ವಾನ ಇರಲಿಲ್ಲ. ಸಭೆ ಬಗ್ಗೆ ನನಗೆ ಗೊತ್ತೂ ಇಲ್ಲ. ಕಂಡೋರ ಮಕ್ಕಳು ಸಿಕ್ಕಿದ್ದೇವೆ ಅಂತ ಹೀಗೆಲ್ಲಾ ಮಾಡುವುದು ಸರಿಯಲ್ಲ ಗೌಡ್ರೇ. ನನಗೆ ಅಧಿಕಾರದ ಆಸೆ ಇಲ್ಲ. ಜೆಡಿಎಸ್ ಕುಟುಂಬದ ಸ್ವತ್ತು ಅಂತ ತೋರಿಸಿಬಿಟ್ಟಿರಿ. ಗೌಡರಿಗೆ ಸ್ವಲ್ಪವಾದರೂ ಪ್ರಜ್ಞೆ ಬೇಡವಾ?” ಎಂದು ಕಿಡಿಕಾರಿದರು.

“ನಾನು ಒಬ್ಬ ಹಿರಿಯ, ಪರಿಷತ್ ಸದಸ್ಯ ಸ್ಥಾನ ಬಿಟ್ಟು ಬಂದಿದ್ದೇನೆ. ನನ್ನ ಜೊತೆ ಮಾತಾಡಬೇಕು ಅಂತ ಅನ್ನಿಸಲಿಲ್ವಾ? ರಾತ್ರಿ ಹಗಲು ಓಡಾಡಿ ಅವರ ಮಗನನ್ನು ಗೆಲ್ಲಿಸಿದ್ದೇನೆ. ನನಗೆ ಅವರು ಒಳ್ಳೆಯ ಬಹುಮಾನ ಕೊಟ್ಟಿದ್ದಾರೆ” ಬೇಸರ ವ್ಯಕ್ತಪಡಿಸಿದರು

“ನಾನು ಸಿಎಂ ಸಿದ್ದರಾಮಯ್ಯ ಅವರನ್ನು ಬೈಯುತ್ತಿಲ್ಲ ಅಂತ ದೇವೇಗೌಡರಿಗೆ ಬೇಸರ ಇದೆ. ಸುಮ್ಮ ಸುಮ್ಮನೆ ನಾನ್ಯಾಕೆ ಸಿದ್ದರಾಮಯ್ಯರನ್ನು ಬೈಯಲಿ? ಸಿದ್ದರಾಮಯ್ಯ ಜೊತೆ ಯಾವುದೇ ವೈಷಮ್ಯ ಇಲ್ಲ. ಅವರು ಅವರ ಪಾಡಿಗೆ ಅಧಿಕಾರ ಮಾಡುತ್ತಿದ್ದಾರೆ. ನನಗೆ ಕಾಂಗ್ರೆಸ್ ಬಿಟ್ಟಿದ್ದು ತಪ್ಪು ಅನ್ನಿಸಿಲ್ಲ. ನನ್ನ ಹೋರಾಟ ಶುರುವಾಗಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹತ್ತು ಹೊಸ ಯೋಜನೆಗಳ ಘೋಷಣೆ

ಕಲ್ಯಾಣ ಕರ್ನಾಟಕ ವಿಮೋಚನಾ ದಿನದ ಅಂಗವಾಗಿ ಸಿಎಂ‌ ಡಿ ಕೆ ಶಿವಕುಮಾರ್...

ಕಸ್ತೂರಿ ರಂಗನ್ ವರದಿ: ಸಿಎಂಗೆ ಮನವಿ ಸಲ್ಲಿಸಲು ಪಕ್ಷ, ಸಂಘಟನೆಗಳಿಗೆ ಅವಕಾಶವಿದೆ; ಟಿ.ಡಿ ರಾಜೇಗೌಡ 

ಕಸ್ತೂರಿರಂಗನ್ ವರದಿ ಕುರಿತು ತಮ್ಮ ಅಭಿಪ್ರಾಯ, ಆಕ್ಷೇಪಣೆ ಹಾಗೂ ಬೇಡಿಕೆಗಳನ್ನು ಮುಖ್ಯಮಂತ್ರಿ...

ಬೆಂಗಳೂರು | ಪತ್ನಿ ಮೇಲೆ ಆಸಿಡ್ ಸುರಿದು, ಮಚ್ಚಿನಿಂದ ಹಲ್ಲೆಗೈದ ವಿಕೃತ ಪತಿ

ನಡುರಸ್ತೆಯಲ್ಲೇ ಪತಿಯೊಬ್ಬ ತನ್ನ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಹೃದಯವಿದ್ರಾವಕ...

ಧಾರವಾಡ | ಲೋಕಾಯುಕ್ತ ದಾಳಿ; 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಸಿಕ್ಕಿಬಿದ್ದ ತಹಶೀಲ್ದಾರ್ ಸಚ್ಚಿದಾನಂದ

ಭೂ ದಾಖಲೆಗಳ ತಿದ್ದುಪಡಿ ಮತ್ತು 'ಖರಾಬು' ಜಮೀನಿನ ಮಾರ್ಪಾಟು ಮಾಡಿಕೊಡಲು ಬರೋಬ್ಬರಿ...