ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ 20 ಲಕ್ಷ ನಕಲಿ ಕಾರ್ಡ್‌ಗಳ ರದ್ದು: ಸಚಿವ ಸಂತೋಷ್ ಲಾಡ್

Date:

Advertisements

ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ 20 ಲಕ್ಷ ನಕಲಿ ಕಾರ್ಡ್‌ಗಳನ್ನು ರದ್ದುಪಡಿಸಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.

ವಿಧಾನಸಭೆಯ ಪ್ರಶೋತ್ತರದ ಅವಧಿಯಲ್ಲಿ ಹುಬ್ಬಳ್ಳಿ-ಧಾರವಾಡ ಕೇಂದ್ರೀಯ ಕ್ಷೇತ್ರದ ಶಾಸಕ ಮಹೇಶ್ ತೆಂಗಿನಕಾಯಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, “ಮಂಡಳಿಯಲ್ಲಿ 56 ಲಕ್ಷ ಮಂದಿ ನೋಂದಣಿಯಾಗಿದ್ದರು. ಮನೆಮನೆಗೆ ತೆರಳಿ ತಪಾಸಣೆ ಮಾಡಿದಾಗ 26 ಲಕ್ಷ ನಕಲಿ ಕಾರ್ಡ್‌ಗಳನ್ನು ರದ್ದುಪಡಿಸಲಾಗಿದೆ. ಅದರ ಬಳಿಕ 30 ಲಕ್ಷ ಕಾರ್ಡ್‌ಗಳು ಉಳಿದುಕೊಂಡಿವೆ. ಕಾರ್ಮಿಕರಿಗೆ ಸೌಲಭ್ಯಗಳನ್ನು ನೀಡಲು ನಮ್ಮ ಸರ್ಕಾರದಲ್ಲಿ ಹಣಕಾಸಿನ ಕೊರತೆ ಇಲ್ಲ” ಎಂದು ಸ್ಪಷ್ಟಪಡಿಸಿದರು.

ಶಾಸಕ ಆರಗ ಜ್ಞಾನೇಂದ್ರ ಮಾತನಾಡಿ, “ಕಾರ್ಮಿಕ ಇಲಾಖೆಯಲ್ಲಿ ಸಿಬ್ಬಂದಿ ಹಾಗೂ ಅಧಿಕಾರಿಗಳ ಕೊರತೆಯಿದೆ. ಮಲೆನಾಡು ಭಾಗದಂತಹ ಪ್ರದೇಶಗಳಲ್ಲಿ ಮನೆಮನೆಗೆ ತೆರಳಿ ತಪಾಸಣೆ ನಡೆಸಲು ಕಷ್ಟದ ವಾತಾವರಣವಿದೆ” ಎಂದರು.

Advertisements

ಇದಕ್ಕೆ ಸ್ಪಷ್ಟನೆ ನೀಡಿದ ಸಚಿವರು, “ಅಂಬೇಡ್ಕರ್ ಸೇವಾ ಕೇಂದ್ರಗಳೆಂದು ತೆರೆಯಲಾಗಿದೆ. 43 ವಾಹನಗಳಲ್ಲಿ ಅಧಿಕಾರಿಗಳು, ಸಿಬ್ಬಂದಿಗಳು ಮನೆಮನೆಗೆ ತೆರಳಿ ಅರ್ಜಿ ಸಲ್ಲಿಸಿದ ಫಲಾನುಭವಿಗಳ ನೈಜತೆಯನ್ನು ಪರಿಶೀಲನೆ ಮಾಡಲಿದ್ದಾರೆ. ಅರ್ಹರ ಸೌಲಭ್ಯಗಳು ವಂಚನೆಯಾಗಬಾರದು. ಹಾಗೆಯೇ ಅನರ್ಹರಿಗೆ ಸೌಲಭ್ಯ ಸಿಗಬಾರದು ಎಂಬುದು ನಮ್ಮ ಸರ್ಕಾರದ ಉದ್ದೇಶ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X