ಜಾತಿ ಜನಗಣತಿ | ಡಿಸೆಂಬರ್‌ನಲ್ಲಿ ವರದಿ ಸಲ್ಲಿಸುವ ನಿರೀಕ್ಷೆ ಇದೆ : ಸಿಎಂ ಸಿದ್ದರಾಮಯ್ಯ

Date:

  • ಜಾತಿ ಜನಗಣತಿ: ಒಕ್ಕಲಿಗರ ಸಂಘ ಮನವಿ ಸಲ್ಲಿಸಿದೆ
  • ‘ವರದಿ ಕೊಟ್ಟ ಮೇಲೆ ತೀರ್ಮಾನ ಕೈಗೊಳ್ಳಲಾಗುವುದು’

ಜಾತಿ ಜನಗಣತಿ ಪಡೆಯದಿರುವಂತೆ ಒಕ್ಕಲಿಗರ ಸಂಘ ಮನವಿ ಸಲ್ಲಿಸಿದ್ದು, ವರದಿ ಕೊಡುವ ಮುನ್ನವೇ ಏಕೆ ವಿರೋಧಿಸುತ್ತಿದ್ದೀರಿ ಎಂದು ಕೇಳಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

- Advertisement -

ಬೆಂಗಳೂರಿನಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಜಾತಿ ಜನಗಣತಿ ವರದಿ ಇನ್ನೂ ನಮ್ಮ ಕೈ ಸೇರಿಲ್ಲ. ಕೊಟ್ಟ ಮೇಲೆ ತೀರ್ಮಾನ ಕೈಗೊಳ್ಳಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಡಿಸಿಎಂ ಡಿಕೆ ಶಿವಕುಮಾರ್ ಅವರು ಸೇರಿದಂತೆ ಒಕ್ಕಲಿಗ ಸಮುದಾಯದ ಮುಖಂಡರು ಜಾತಿ ಜನಗಣತಿ ವರದಿ ತಿರಸ್ಕರಿಸಬೇಕೆಂದು ಮನವಿ ಸಲ್ಲಿಸಿರುವ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.

ಮೂಲಪ್ರತಿ ಕಾಣೆಯಾಗಿದೆ ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿ, “ಈ ಬಗ್ಗೆ ನನಗೆ ತಿಳಿದಿಲ್ಲ. ನನ್ನನ್ನು ಭೇಟಿಯಾಗಿ ವರದಿ ಸಲ್ಲಿಸಲಾಗುವುದು ಎಂದಿದ್ದಾರೆ.  ಅಲ್ಲಿಯವರೆಗೆ ಅವಧಿ ವಿಸ್ತರಣೆ ಮಾಡಿ ಎಂದು ಮನವಿ ಮಾಡಿದ್ದಾರೆ” ಎಂದರು.

“ವರದಿ ಯಾವಾಗ ಕೊಡುತ್ತಾರೋ ಅಲ್ಲಿಯವರೆಗೆ ಅವಧಿ ವಿಸ್ತರಣೆಯಾಗುತ್ತದೆ. 162 ಕೋಟಿ ಖರ್ಚು ಮಾಡಿ ವರದಿ ತಯಾರಿಸಲಾಗಿದೆ. ವರದಿ ಬಂದ ನಂತರ ಅವರ ಸಂಶಯಗಳ ನಿವಾರಣೆಯಾಗಲಿದೆಯೋ ಇಲ್ಲವೋ ನೋಡೋಣ. ವರದಿಯಲ್ಲಿ ಏನಿದೆ ಎಂದು ತಿಳಿದಿಲ್ಲ. ಡಿಸೆಂಬರ್‌ನಲ್ಲಿ ವರದಿ ಸಲ್ಲಿಸುವ ನಿರೀಕ್ಷೆ ಇದೆ” ಎಂದರು.

ಡಿಸಿಎಂ ನನ್ನೊಂದಿಗೆ ಈ ಬಗ್ಗೆ ಏನನ್ನೂ ಮಾತನಾಡಿಲ್ಲ ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು. ನಿಗಮ ಮಂಡಳಿಗಳ ನೇಮಕಾತಿಗೆ ಸಂಬಂಧಿಸಿದಂತೆ ಪೂರ್ವಭಾವಿ ಚರ್ಚೆಯಾಗಿದ್ದು ಯಾರನ್ನು ಮಾಡಬೇಕೆಂಬ ಬಗ್ಗೆ ಅಂತಿಮಗೊಳಿ ಸಿಲ್ಲ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....

ಬಿಹಾರದ ಖಜಾನೆ ಖಾಲಿ, ಆದರೂ ಪ್ರಧಾನಿ ಹುಟ್ಟುಹಬ್ಬಕ್ಕೆ ಕೋಟಿ ಕೋಟಿ ಪೋಲು: ತೇಜಸ್ವಿ ಯಾದವ್ ಆರೋಪ

ಬಿಹಾರದಲ್ಲಿ ತೀವ್ರ ಪ್ರವಾಹ ಪರಿಸ್ಥಿತಿಯಿಂದಾಗಿ ಲಕ್ಷಾಂತರ ಜನರು ತೊಂದರೆಯಲ್ಲಿರುವಾಗ ಮತ್ತು ರಾಜ್ಯ...

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ಹವಾಮಾನ ವರದಿ: ರಾಜ್ಯದ 16 ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ

ಬಂಗಾಳಕೊಲ್ಲಿ ಮತ್ತು ಉತ್ತರ ಅಂಡಮಾನ್ ಸಮುದ್ರ ಭಾಗದಲ್ಲಿ ತೀವ್ರ ವಾಯುಭಾರ ಕುಸಿತ...