ಜಾತಿ ಗಣತಿ | ಕೆಂದ್ರ ಸರ್ಕಾರ ನೀಡುವ ₹500 ಕೋಟಿ ಯಾವುದಕ್ಕೂ ಸಾಲುವುದಿಲ್ಲ: ಸಚಿವ ಮಧು ಬಂಗಾರಪ್ಪ

Date:

Advertisements

ಜಾತಿ ಗಣತಿ ನಡೆಸಲು ಕೆಂದ್ರ ಸರ್ಕಾರ 500 ಕೋಟಿ ರೂ. ನೀಡುವುದಾಗಿ ಹೇಳಿದೆ. ರಫೆಲ್ ಯುದ್ದ ವಿಮಾನಗಳಿಗೆ 35 ಸಾವಿರ ಕೋಟಿ ರೂ. ಕೊಟ್ಟಿದ್ದಾರೆ. ನಮ್ಮ ದೇಶವನ್ನು ಕಾಯಲು ವಿಮಾನಗಳ ಅಗತ್ಯವಿದೆ. ಇಷ್ಟಾದರೂ ಸೈನ್ಯಕ್ಕೆ ಕಳೆದ ಎರಡು ವರ್ಷಗಳಿಂದ ಹುದ್ದೆಗಳನ್ನು ಭರ್ತಿ ಮಾಡಕೊಳ್ಳದ ಕಾರಣಕ್ಕೆ ಕಾಶ್ಮೀರದಲ್ಲಿ ಏನಾಗಿದೆ ಎಂದು ನಮಗೆ ತಿಳಿದಿದೆ. ಈ 500 ಕೋಟಿ ಹಣ ಯಾವುದಕ್ಕೂ ಸಾಲುವುದಿಲ್ಲ. ಈ ಹಣವನ್ನು ಹೆಚ್ಚು ಮಾಡಬೇಕು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಗ್ರಹಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, “ರಾಹುಲ್ ಗಾಂಧಿ ಅವರು ಜಾತಿ ಗಣತಿಯಾಗಬೇಕು ಎಂದು ಸದಾ ಆಗ್ರಹ ಮಾಡುತ್ತಿದ್ದರು. ಅವರ ಮಾತಿಗೆ ಕೇಂದ್ರ ಮಣಿದಿದೆ. ಕೇಂದ್ರದ ಈ ನಿರ್ಧಾರ ಕಾಂಗ್ರೆಸ್ ಪಕ್ಷದ ಗೆಲುವು. ಸಮಾಜದಲ್ಲಿ ಸಮಾನತೆ ತರಬೇಕು ಎಂದರೆ ಜಾತಿಗಣತಿ ಅತಿ ಅವಶ್ಯಕ. ನಮ್ಮ ಕಾಂಗ್ರೆಸ್ ಸರ್ಕಾರ ಬಡವ, ಶ್ರೀಮಂತ ಎಲ್ಲರಿಗೂ ಯೋಜನೆಗಳನ್ನು ನೀಡಿದೆ. ಇದನ್ನು ಆಧರಿಸಿ ಯಾರು ಉಪಯೋಗ ಪಡೆದಿದ್ದಾರೆ ಎಂಬುದನ್ನು ನೋಡಬೇಕಲ್ಲವೇ. ಜಾತಿಗಣತಿ ನಡೆದರೆ ನಾವು ಕಟ್ಟುವ ತೆರಿಗೆ ಹಣ ಸಮಾನವಾಗಿ ಹಂಚಿಕೆಯಾಗುತ್ತದೆ” ಎಂದರು.

“ನಾವು ಒಂದಷ್ಟು ವಿಚಾರದಲ್ಲಿ ಮಾತ್ರ ಸಮಾನತೆ ಬೇಕು ಎಂದು ಹೇಳುವುದಿಲ್ಲ. ತೆರಿಗೆ ಹಂಚಿಕೆಯಲ್ಲಿಯೂ ಇದೇ ಸಮಾನತೆ ಬರಬೇಕು. ಗುಜರಾತಿಗೆ ಹಣ ನೀಡಿ ಎಂದು ಮೋದಿಯವರು ಅಲ್ಲಿನ ಮುಖ್ಯಮಂತ್ರಿಗಳಾಗಿದ್ದಾಗ ಆಗ್ರಹಿಸಿದ್ದರು. ಇದೇ ಮಾತನ್ನು ಅವರಿಗೆ ಈಗ ನೆನಪಿಸಬಹುದಲ್ಲವೇ? ನಮ್ಮ ಪ್ರಣಾಳಿಕೆಯಲ್ಲಿ ಹೇಳಿದಂತೆ ರಾಜ್ಯದಲ್ಲಿ ಈ ಹಿಂದೆ ನಡೆಸಿದ್ದ ಜಾತಿಗಣತಿಯನ್ನು ಈಗ ಬಹಿರಂಗಗೊಳಿಸಿದ್ದೇವೆ. ಈ ಜಾತಿ ಗಣತಿ ಬಗ್ಗೆ ನೂರಾರು ಪ್ರಶ್ನೆಗಳು ಇರಬಹುದು. ಇದಕ್ಕೆ ಉತ್ತರ ಕೊಡುವ ಕರ್ತವ್ಯ ನಮ್ಮದು. ಸಂಸತ್ ಸೇರಿದಂತೆ ಪ್ರತಿ ಹಂತದಲ್ಲಿಯೂ ಜಾತಿಗಣತಿ ಬಗ್ಗೆ ಜನರ ಹಾಗೂ ಕೇಂದ್ರ ಸರ್ಕಾರ ಗಮನ ಸೆಳೆದ ರಾಹುಲ್ ಗಾಂಧಿ ಅವರಿಗೆ ಹಿಂದುಳಿದ ವರ್ಗಗಳ ಪರವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಅಭಿನಂದನೆಗಳು” ಎಂದು ಹೇಳಿದರು.

Advertisements

“ಜಾತಿಗಣತಿ ಜೊತೆಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯನ್ನು ನಡೆಸಬೇಕು. ನಮ್ಮ ರಾಜ್ಯದ ಬೆವರಿನ ಪಾಲನ್ನು ನೀಡಬೇಕು. ದೇಶದ ಎಲ್ಲಾ ಭಾಗಗಳಿಗೂ ಸಮಾನ ಅನುದಾನ ನೀಡಬೇಕು. ಉತ್ತರಪ್ರದೇಶಕ್ಕೆ ನೀಡಬೇಡಿ ಎಂದು ಹೇಳುತ್ತಿಲ್ಲ. ಅವರೂ ಭಾರತೀಯರೇ. ಆದರೆ ಎಲ್ಲರಿಗೂ ಸಮಾನ ಹಣ ಸಂಚಿಕೆ ಮಾಡಬೇಕು” ಎಂದು ಒತ್ತಾಯಿಸಿದರು.

“ಭಾರತ್ ಜೋಡೋ ಸಮಯದಿಂದಲೂ ದೇಶದಲ್ಲಿ ಜಾತಿಗಣತಿ ನಡೆಯಬೇಕು ಎಂದು ರಾಹುಲ್ ಗಾಂಧಿ ಅವರು ಪ್ರತಿಪಾದನೆ ಮಾಡುತ್ತಾ ಬಂದಿದ್ದರು. ಈಗ ಅವರ ಮಾತಿಗೆ ಕೇಂದ್ರ ತಲೆಬಾಗಿದೆ. ನಮ್ಮ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿಯೂ ಸಹ ಈ ಅಂಶವನ್ನು ಸೇರಿಸಿದ್ದೆವು. ನಮ್ಮ ಪಕ್ಷ ಹಾಗೂ ಸರ್ಕಾರದ ವತಿಯಿಂದ ಮಲ್ಲಿಕಾರ್ಜುನ ಖರ್ಗೆ ಅವರು ಹಾಗೂ ರಾಹುಲ್ ಗಾಂಧಿ ಅವರಿಗೆ ಧನ್ಯವಾದಗಳನ್ನು ತಿಳಿಸುತ್ತೇವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X