ತೊಗರಿ, ಕಡಲೆ ಬೆಂಬಲ ಬೆಲೆಯಲ್ಲಿ ಖರೀದಿಸಲು ಕೇಂದ್ರ ಸರ್ಕಾರ ಅನುಮತಿ: ಸಚಿವ ಶಿವಾನಂದ ಪಾಟೀಲ

Date:

Advertisements

ರಾಜ್ಯ ಸರ್ಕಾರದ ಮನವಿ ಮೇರೆಗೆ ತೊಗರಿ ಮತ್ತು ಕಡಲೆಯನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.

ಪ್ರತಿ ಕ್ವಿಂಟಲ್‌ಗೆ ತೊಗರಿಗೆ 7,550 ರೂ. ಹಾಗೂ ಕಡಲೆಗೆ 5,650 ರೂ. ನಿಗದಿಪಡಿಸಲಾಗಿದೆ. ರಾಜ್ಯದಲ್ಲಿ ತೊಗರಿ ಬೆಳೆಯನ್ನು 15.02 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆಲಾಗುತ್ತಿದ್ದು, ಅಂದಾಜು 11.96 ಲಕ್ಷ ಮೆಟ್ರಿಕ್‌ಟನ್‌ ಉತ್ಪಾದನೆಯನ್ನು ನಿರೀಕ್ಷಿಸಲಾಗಿದೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

“ಕಲಬುರಗಿ, ಯಾದಗಿರಿ, ಬೀದರ್‌, ರಾಯಚೂರು, ವಿಜಯಪುರ, ಕೊಪ್ಪಳ ಬೆಳಗಾವಿ, ಬಳ್ಳಾರಿ, ವಿಜಯನಗರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಖರೀದಿ ಕೇಂದ್ರ ಆರಂಭಿಸಲಾಗುವುದು. ರಾಜ್ಯ ಸರ್ಕಾರದ ಕೋರಿಕೆಯ ಮೇರೆಗೆ ಕೇಂದ್ರ ಸರ್ಕಾರವು 3,06,150 ಮೆಟ್ರಿಕ್‌ ಟನ್‌ ಖರೀದಿಗೆ ಅನುಮತಿ ನೀಡಿದೆ” ಎಂದು ಹೇಳಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹವಾಮಾನ ವೈಪರೀತ್ಯ, ಸಾಮೂಹಿಕ ವಲಸೆ ಮತ್ತು ಅಭಿವೃದ್ಧಿ ಮಂತ್ರ

“ಪ್ರಸ್ತುತ ಕಡಲೆಯನ್ನು 10.03 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆಯಲಾಗುತ್ತಿದ್ದು, ಅಂದಾಜು 6.63 ಲಕ್ಷ ಮೆಟ್ರಿಕ್‌ಟನ್‌ ಉತ್ಪಾದನೆಯನ್ನು ನಿರೀಕ್ಷಿಸಲಾಗಿದೆ. ಧಾರವಾಡ, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ಗದಗ, ಬೆಳಗಾವಿ, ವಿಜಯಪುರ ಕಲಬುರಗಿ, ಯಾದಗಿರಿ, ಬೀದರ್‌, ಬಾಗಲಕೋಟೆ, ದಾವಣಗೆರೆ, ಚಿಕ್ಕಮಗಳೂರು ಮತ್ತು ರಾಯಚೂರು ಜಿಲ್ಲೆಗಳಲ್ಲಿ ಖರೀದಿ ಕೇಂದ್ರ ಆರಂಭಿಸಲಾಗುವುದು” ಎಂದು ತಿಳಿಸಿದ್ದಾರೆ.

“ಬೆಂಬಲ ಬೆಲೆಯಲ್ಲಿ 96,498 ಮೆಟ್ರಿಕ್‌ ಟನ್‌ ಕಡಲೆ ಖರೀದಿ ಮಾಡಲಾಗುವುದು. ಕೇಂದ್ರ ಸರ್ಕಾರ ಬೆಂಬಲ ಬೆಲೆಯಲ್ಲಿ ಖರೀದಿಗೆ ಅನುಮತಿ ನೀಡುತ್ತಿದ್ದಂತೆ ನೋಂದಣಿ ಮತ್ತು ಖರೀದಿ ಕೇಂದ್ರ ಆರಂಭಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ” ಎಂದು ಸಚಿವರು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

Download Eedina App Android / iOS

X