ಕೇಂದ್ರದ್ದು ₹200 ಲಕ್ಷ ಕೋಟಿ – ರಾಜ್ಯದ್ದು ₹7.81 ಲಕ್ಷ ಕೋಟಿ ಸಾಲ; ಕನ್ನಡಿಗರ ತಲಾ ಸಾಲ ಎಷ್ಟು?

Date:

Advertisements

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು 2025-26ನೇ ಆರ್ಥಿಕ ವರ್ಷದ ಬಜೆಟ್‌ ಮಂಡಿಸಿವೆ. ಕೇಂದ್ರ ಸರ್ಕಾರವು 50.65 ಲಕ್ಷ ಕೋಟಿ ರೂ. ಮೊತ್ತದ ಬಜೆಟ್‌ ಮಂಡಿಸಿದೆ. ರಾಜ್ಯವು 4.09 ಲಕ್ಷ ಕೋಟಿ ರೂ. ಮೊತ್ತದ ಆಯವ್ಯಯ ಮಂಡಿಸಿದೆ. ಎರಡೂ ಸರ್ಕಾರಗಳು ವಿತ್ತೀಯ ಕೊರತೆಯನ್ನು ನೀಗಿದಲು ಸಾಲದ ಮೊರೆಹೋಗಿವೆ.

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಬರೋಬ್ಬರಿ 14.82 ಲಕ್ಷ ಕೋಟಿ ರೂ. ಸಾಲ ಮಾಡಲು ಮುಂದಾಗಿದೆ. ಅಂತೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು 1.16 ಲಕ್ಷ ಕೋಟಿ ರೂ. ಸಾಲ ಪಡೆಯುವುದು ಘೋಷಿಸಿದೆ.

2025-26ನೇ ಸಾಲಿನಲ್ಲಿ ಪಡೆಯುವ ಸಾಲವು ಸೇರಿ ಕೇಂದ್ರ ಸರ್ಕಾರದ ಒಟ್ಟು ಸಾಲ ಬರೋಬ್ಬರಿ 200 ಲಕ್ಷ ಕೋಟಿ ರೂ. ಆಗಲಿದೆ. ಅಂತೆಯೇ, ರಾಜ್ಯ ಸರ್ಕಾರದ ಒಟ್ಟು ಸಾಲ 7.81 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ.

Advertisements

ಕೇಂದ್ರ ಸರ್ಕಾರದ 200 ಲಕ್ಷ ಕೋಟಿ ರೂ. ಸಾಲವನ್ನು ದೇಶದ ಜನಸಂಖ್ಯೆಗೆ (140 ಕೋಟಿ) ತಾಳೆ ಹಾಕಿನೋಡಿದರೆ, ಎಲ್ಲ ಭಾರತೀಯರ ಮೇಲೆ ತಲಾ ಸರಾಸರಿ 1,42,857 ರೂ. ಸಾಲ ಇದೆ. ಅಂದರೆ, ಭಾರತೀಯ ತಲಾ ಸಾಲ ₹1,42,857 ರೂ.ಗಳು. ರಾಜ್ಯ ಸರ್ಕಾರದ 7.81 ಲಕ್ಷ ಕೋಟಿ ರೂ. ಸಾಲವನ್ನು ಕರ್ನಾಟಕದ ಜನಸಂಖ್ಯೆಗೆ (7 ಕೋಟಿ) ತಾಳೆ ಹಾಕಿದರೆ, ಕನ್ನಡಿಗರ ತಲಾ ಸಾಲ 1,11,571 ರೂ.ಗಳು. ಕೇಂದ್ರ ಮತ್ತು ರಾಜ್ಯದ ತಲಾ ಸಾಲವನ್ನು ಕೂಡಿಸಿದರೆ, ಕರ್ನಾಟಕದಲ್ಲಿರುವ ಪ್ರತಿಯೊಬ್ಬರ ತಲಾ ಸಾಲವು ಒಟ್ಟು 2,54,428 ರೂ. ಆಗಿದೆ.

ನಮ್ಮನ್ನು ಆಳುತ್ತಿರುವ ಸರ್ಕಾರಗಳು ರಾಜ್ಯದ ಪ್ರತಿಯೊಬ್ಬರ ಮೇಲೆ ಹೇರಿರುವ ಸಾಲದ ಹೊರೆ 2,54,428 ರೂ.ಗಳು. ಕರ್ನಾಟಕದಲ್ಲಿ ಹುಟ್ಟುವ ಪ್ರತಿಯೊಂದು ಮಗುವೂ ಹುಟ್ಟುತ್ತಲೇ ಕೇಂದ್ರ ಮತ್ತು ರಾಜ್ಯದಿಂದ 2,54,428 ರೂ. ಹೊತ್ತುಕೊಂಡು ಹುಟ್ಟುತ್ತಿವೆ.

ಈ ವರದಿ ಓದಿದ್ದೀರಾ?: ‘ರಾಜ್ಯಕ್ಕೆ ತೆರಿಗೆ ಪಾಲನ್ನೂ ನೀಡದೆ, ಸೆಸ್-ಸರ್ಚಾರ್ಜ್‌ಗಳನ್ನೂ ಹೆಚ್ಚಿಸಿಕೊಂಡು ನುಂಗುತ್ತಿದೆ ಮೋದಿ ಸರ್ಕಾರ’

ಅಂದಹಾಗೆ, ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವುದಕ್ಕೂ ಮುನ್ನ ಕೇಂದ್ರ ಸರ್ಕಾರದ ಸಾಲ ಒಟ್ಟು 55.87 ಲಕ್ಷ ಕೋಟಿ ರೂ. ಇತ್ತು. ಇದೀಗ, 200 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ. ಅಂದರೆ, ಮೋದಿ ಸರ್ಕಾರ ಕಳೆದ 11 ವರ್ಷಗಳಲ್ಲಿ ಬರೋಬ್ಬರಿ 145 ಲಕ್ಷ ಕೋಟಿ ರೂ. ಸಾಲ ಮಾಡಿದೆ.

ಮೋದಿ ಅವರ ಅಚ್ಛೇ ದಿನ್, ಸಬ್‌ ಕಾ ಸಾತ್ – ಸಬ್‌ ಕಾ ವಿಕಾಸ್ ಘೋಷಣೆಯಲ್ಲಿ ದೇಶದ ಸಾಲ ಬರೋಬ್ಬರಿ ಸರಾಸರಿ ಮೂರು ಪಟ್ಟು ಹೆಚ್ಚಾಗಿದೆ. ಆದರೆ, ಯಾರ ಅಭಿವೃದ್ಧಿಯೂ ಆಗಿಲ್ಲ. ಪ್ರಸ್ತುತ ಭಾರತದಲ್ಲಿ 100 ಕೋಟಿಗೂ ಅಧಿಕ ಜನರು ಇಂದಿಗೂ ಕೊಳ್ಳುವ ಸಾಮರ್ಥ್ಯವಿಲ್ಲದೆ ಒದ್ದಾಡುತ್ತಿದ್ದಾರೆ. ಬದುಕು ದೂಡಲು ಹರಸಾಹಸ ಪಡುತ್ತಿದ್ದಾರೆ. ಆದರೂ, ಅವರ ತಲೆಯ ಮೇಲೆ ಬೃಹತ್ ಸಾಲದ ಹೊರೆಯನ್ನು ಸರ್ಕಾರಗಳು ಹೇರಿವೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಕೇಂದ್ರ ಸರ್ಕಾರ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿ ಯೋಜನೆಗಳಿಗೆ ಸಾಲ ಮಾಡಿ ದೇಶವನ್ನು 2047 ಕುಕ್ಕೆ ಬೇಕಾದ ದೂರದೃಷ್ಟಿಯಿಂದ ಕಾರ್ಯಕ್ರಮ ನಿರೂಪಿಸುತ್ತಾರೆ ಆದರೆ ಸಿದ್ದರಾಮಯ್ಯನ ರೀತಿ ಅತ್ತೆ ಸಾಮಾನನ್ನು ಅಳಿಯ ದಾನ ಮಾಡಿದ ರೀತಿ ಬಿಟ್ಟಿ ಭಾಗ್ಯಗಳಿಗಾಗಿ ಹಾಳುಮಾಡುತ್ತಿದೆ. ಇದನ್ನು ಅರಿತವರು ಸಿದ್ದರಾಮಯ್ಯನಿಗೆ ಹಿಂಡಿ ಹಿಂಡಿ ಶಾಪ ಹಾಕುತ್ತಿದ್ದಾರೆ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X