ಸದನ ಸ್ವಾರಸ್ಯ | ಕುರ್ಚಿ ಕಾಳಗ – ‘ಮುಂದೆಯೂ ನಾನೇ ಸಿಎಂ’ ಎಂದು ಪ್ರತಿಪಕ್ಷಕ್ಕೆ ಗುಡುಗಿದ ಸಿದ್ದು

Date:

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದ ಏಳನೇ ದಿನದ ವಿಧಾನಸಭೆ ಕಲಾಪದಲ್ಲೂ ಸಿಎಂ ಬದಲಾವಣೆ ವಿಷಯ ಚರ್ಚೆಗೆ ಬಂದಿತು.

- Advertisement -

ಕುಣಿಗಲ್‌ ಶಾಸಕ ರಂಗನಾಥ್‌ ಅವರು ತಮ್ಮ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೇಳಿದ್ದ ಪ್ರಶ್ನೆಗೆ ಸಿದ್ದರಾಮಯ್ಯ ಅವರು ಉತ್ತರಿಸುವಾಗ ಆರ್‌ ಅಶೋಕ್‌ ಅವರು ಮಧ್ಯೆ ಪ್ರವೇಶಿಸಿ ಕ್ಷೇತ್ರಗಳ ತಾರತಮ್ಯ ಬಗ್ಗೆ ಮಾತನಾಡಿದರು. ಕೂಡಲೇ ಸಿದ್ದರಾಮಯ್ಯ ಅವರು ‘ಉರಿಯುವ ಬೆಂಕಿಗೆ ಉಪ್ಪು ಹಾಕಬೇಡಿ’ ಎಂದು ಅಶೋಕ್‌ ಅವರನ್ನು ಕುಟುಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಆಶೋಕ್‌ ಅವರು ಅಲ್ಲಿಗೆ ಸುಮ್ಮನಾಗದೇ ‘ಹಾಗಾದ್ರೆ ನಿಮಗೆ ಉರಿತಿದೆ ಎನ್ನುವುದು ಪಕ್ಕಾ ಆಯಿತು. ನೀವೇ ಐದು ವರ್ಷ ಸಿಎಂ ಆಗಿ ಇರುತ್ತೀರಾ? ಎಂದು ಪ್ರಶ್ನಿಸಿದರು.‌ ಮುಂದುವರಿದು, “ಚಾಣಕ್ಯನ ತಂತ್ರಗಾರಿಗೆ ಕೇಳಿದ್ದೇವೆ. ನಾನೂ ಸಹ ಸಿದ್ದರಾಮಯ್ಯ ತಂತ್ರಗಾರಿಕೆ ಕುರಿತು ಪುಸ್ತಕ ಬರೆಯಲಿದ್ದೇನೆ” ಎಂದರು

ಅಶೋಕ್‌ ಅವರನ್ನು ತರಾಟೆಗೆ ತೆಗೆದುಕೊಂಡ ಸಿದ್ದರಾಮಯ್ಯ, “ನೀವು ಎಂದಾದರೂ ಜನರ ಆಶೀರ್ವಾದ ಪಡೆದು ಅಧಿಕಾರಕ್ಕೆ ಬಂದಿದ್ದೀರಾ? ಬರೀ ಆಫರೇಷನ್‌ ಕಮಲ ಮೂಲಕ ಹಿಂಬಾಗಿಲಿನಿಂದಲೇ ಅಧಿಕಾರ ಹಿಡಿದಿದ್ದೀರಿ. ರಾಜ್ಯದ ಜನತೆ ನಿಮಗೆ ಯಾವತ್ತೂ ಆಶೀರ್ವಾದ ಮಾಡಲ್ಲ” ಎಂದು ಕಿಡಿಕಾರಿದರು.

ಆರ್‌ ಅಶೋಕ್‌ ಮಧ್ಯ ಪ್ರವೇಶಿಸಿ, “ನೀವು ಜೆಡಿಎಸ್‌ನವರ ಮನೆ ಬಾಗಿಲಿಗೆ ಹೋಗಿರಲಿಲ್ವಾ?” ಎಂದು ಪ್ರಶ್ನಿಸಿದರು. ಕೋಪಗೊಂಡ ಸಿದ್ದರಾಮಯ್ಯ ಅವರು, “ಯಾರೀ ಜೆಡಿಎಸ್‌ ಮನೆ ಬಾಗಿಲಿಗೆ ಹೋಗಿದ್ದು, ರಾಜ್ಯದಲ್ಲಿ ಬಿಜೆಪಿಯಾವರು ಅಧಿಕಾರಕ್ಕೆ ಬರಬಾರದು ಎಂದು ಅವರೇ ನಮ್ಮ ಬಳಿ ಬಂದಿದ್ದು” ಎಂದು ತಿರಗೇಟು ನೀಡಿದರು.

ವಿ ಸುನಿಲ್‌ ಕುಮಾರ್‌ ಮಧ್ಯ ಪ್ರವೇಶಿಸಿ, “ಸರ್‌ ಹೋಗಲಿ ನೀವೇ ಐದು ವರ್ಷ ಸಿಎಂ ಆಗಿ ಇರುತ್ತೀರಾ? ಅಥವಾ ಜನವರಿ ನಂತರ ಕುರ್ಚಿಯಿಂದ ಕೆಳಗಿಳಿಯುತ್ತೀರಾ ಎಂದು ಕೇಳಿದರು. ಅದಕ್ಕೆ ಉತ್ತರಿಸಿದ ಸಿದ್ದರಾಮಯ್ಯ, “ರಾಜ್ಯದ ಜನ ನಮಗೆ ಆಶೀರ್ವಾದ ಮಾಡಿದ್ದಾರೆ. ಐದು ವರ್ಷ ನಾವೇ ಇರುತ್ತೇವೆ. 2028ರಲ್ಲೂ ನಾವೇ ಅಧಿಕಾರಕ್ಕೆ ಮರಳಿ ಬರುತ್ತೇವೆ” ಎಂದು ಕೌಂಟರ್‌ ಕೊಟ್ಟರು.

ಮಾತು ಬದಲಿಸದ ಸುನಿಲ್‌ ಕುಮಾರ್‌ ‘ನೀವೂ ಐದು ವರ್ಷ ಸಿಎಂ ಆಗಿ ಇರುತ್ತೀರಾ’ ಎಂದು ಪಟ್ಟು ಹೀಡಿದು ಕೇಳಿದಾಗ, “ಹೈಕಮಾಂಡ್‌ ಹೇಳುವವರೆಗೂ ನಾನೇ ಸಿಎಂ, ಮುಂದೆಯೂ ನಾನೇ ಸಿಎಂ” ಎಂದು ಹೇಳಿದರು.

“ಹೈಕಮಾಂಡ್‌ ಹೇಳುವವರೆಗೂ ನಾನೇ ಸಿಎಂ” ಎಂದು ಹೇಳಿದ್ರಲ್ಲ ಅಲ್ಲೇ ಇದೆ ಉತ್ತರ ಎಂದು ನಗುತ್ತಲೇ ಸುನಿಲ್‌ ಕುಮಾರ್ ಮಾತು ಮುಗಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯಲ್ಲಿ ಆಂತರಿಕ ಕುಸ್ತಿ; ಪ್ರತಾಪ್ ಸಿಂಹ – ನಾಗೇಂದ್ರ‌ ಬೀದಿ ಕಾಳಗ

ಮೈಸೂರು ಜಿಲ್ಲೆಯ ಟಿ. ನರಸೀಪುರ ಗಣೇಶೋತ್ಸವ ಮೆರವಣಿಗೆ ವಿಚಾರವಾಗಿ ಇನ್ಸ್‌ಪೆಕ್ಟರ್ ಧನಂಜಯ್‌...

ಮುಸ್ಲಿಂ ಮಹಿಳೆಯ ಸೌಹಾರ್ದತೆ: 18 ವರ್ಷಗಳಿಂದ ಗಣೇಶ ಸಮಿತಿ ಮುನ್ನಡೆಸುತ್ತಿರುವ ಜುಬೇದಾ

ಸಮಾಜದಲ್ಲಿ ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ಒಡಕು ಮೂಡಿಸಲು ಹಿಂದುತ್ವ ಕೋಮುವಾದಿ...

ಕರ್ನಾಟಕ ಕಾಂಗ್ರೆಸ್‌ ವಾರ್‌ ರೂಂ ಅಧ್ಯಕ್ಷರಾಗಿ ತಿಪಟೂರು ಟುಡಾ ಶಶಿಧರ್‌ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು (ಕೆಪಿಸಿಸಿ) ಮುಂಬರುವ ಪಕ್ಷದ ಸಂಘಟನಾತ್ಮಕ ಹಾಗೂ...

ಮಹಿಳಾ ಉದ್ಯೋಗಿಗಳ ರಾತ್ರಿ ಪಾಳಿ ಸುರಕ್ಷತಾ ನಿಯಮ ತಿದ್ದುಪಡಿ: ಸರ್ಕಾರದ ನಡೆಗೆ ಕೆಐಟಿಯು ತೀವ್ರ ವಿರೋಧ

ಕರ್ನಾಟಕ ಸರ್ಕಾರವು ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆಗೆ ತಿದ್ದುಪಡಿ ತರುವ...