ಭಾಗ್ಯಗಳನ್ನು ಕೊಟ್ಟಿರುವ ಮುಖ್ಯಮಂತ್ರಿಗಳು ಬಡವರಿಗೆ ಭೂಮಿಯ ಹಕ್ಕನ್ನು ನೀಡಲಿ: ಮಧು ಬಂಗಾರಪ್ಪ

Date:

ಹಲವಾರು ಭಾಗ್ಯಗಳನ್ನು ಕೊಟ್ಟಿರುವ ಮುಖ್ಯಮಂತ್ರಿಗಳು ಬಡವರಿಗೆ ಭೂಮಿಯ ಹಕ್ಕನ್ನೂ ನೀಡಬೇಕೆಂದು ಭರವಸೆಯನ್ನು ನೀಡಲಿ ಎಂದು ಪ್ರಾಥಮಿಕ ಹಾಗೂ ಮಾಧ್ಯಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

- Advertisement -

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಆರ್ಯ ಈಡಿಗ ಸಮಾವೇಶದಲ್ಲಿ ಮಾತನಾಡಿದ ಅವರು, “ನಮ್ಮ ಸಮುದಾಯದವರಿಗೆ ಭೂ ಹಕ್ಕನ್ನು ನೀಡಬೇಕೆಂದು ಏಳೆಂಟು ಹೋರಾಟ ಮಾಡಿದ್ದೇವೆ. ದೇವರಾಜ ಅರಸು ನಂತರದಲ್ಲಿ ಮುಖ್ಯಮಂತ್ರಿಯಾಗಿದ್ದ ಬಂಗಾರಪ್ಪನವರು ಬಡವರಿಗೆ ಭೂಮಿ ಕೊಟ್ಟರು. ಹಲವಾರು ಭಾಗ್ಯಗಳನ್ನು ಕೊಟ್ಟಿರುವ ಮುಖ್ಯಮಂತ್ರಿಗಳು ನಮ್ಮ ಸಮುದಾಯದ ಬಡವರಿಗೆ ಬಗುರ್ ಹುಕುಂ ನೀಡಬೇಕು” ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

“ಶರಾವತಿ ಯೋಜನೆಯಿಂದ ಸಂತ್ರಸ್ತರಾಗಿ ಭೂಮಿಯನ್ನು ಕೊಟ್ಟವರು ಇಂದು ಕತ್ತಲಲ್ಲಿದ್ದಾರೆ. ರಾಜ್ಯಕ್ಕೆ ಬೆಳಕು ಕೊಟ್ಟು ಕತ್ತಲಲ್ಲಿ ಇರುವವರು ಇದ್ದಾರೆ. ಈ ಸಮುದಾಯಕ್ಕೆ ಹಕ್ಕುಪತ್ರವನ್ನು ನೀಡುವ ಕೆಲಸ ಮಾಡಬೇಕೆಂದು ಕೋರುತ್ತೇನೆ” ಎಂದು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದರು.

“ನಾವೆಲ್ಲ ಹೆಂಡವನ್ನು ಮಾರಿಕೊಂಡು ಬಂದ ಕುಟುಂಬದವರು. ಕುಲಕಸುಬವನ್ನು ನಂಬಿಕೊಂಡಿರುವುದರಿಂದ ಈಗ ಸಮುದಾಯದ ಅನೇಕರು ಬೀದಿಪಾಲಾಗಿದ್ದಾರೆ. ನಮ್ಮ ಸಮುದಾಯವನ್ನು ಮೇಲೆತ್ತುವ ಭರವಸೆಯನ್ನು ಸರ್ಕಾರ ನೀಡಬೇಕು. ಕಲ್ಯಾಣ ಕರ್ನಾಟಕದಲ್ಲಿ  ಕುಲಕಸುಬನ್ನೇ ನಂಬಿಕೊಂಡಿದ್ದವರು ಬಡವರಾಗಿ ಕೂಲಿಕಾರರಾಗಿಯೇ ಇದ್ದಾರೆ. ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಮೇಲುತ್ತುವ ಕೆಲಸ ಆಗಬೇಕಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ತೆಲಂಗಾಣ | ಅಂದು ಗನ್ ಹಿಡಿದಿದ್ದ ನಕ್ಸಲೈಟ್, ಇಂದು ಕ್ಯಾಬಿನೆಟ್ ಮಿನಿಸ್ಟರ್; ಸೀತಕ್ಕನ ರೋಚಕ ಪಯಣ

ಬಂಗಾರಪ್ಪನವರನ್ನು ನಿಮ್ಮಲ್ಲಿ ಕಾಣುತ್ತಿದ್ದೇನೆ

“ಒಬ್ಬರು ಬಂಗಾರಪ್ಪನವರನ್ನು ಕಳೆದುಕೊಂಡಿದ್ದಾರೆ. ಆದರೆ ಲಕ್ಷಾಂತರ ಬಂಗಾರಪ್ಪನವರು ನಮ್ಮಲ್ಲಿ ಇದ್ದಾರೆ. ನಿಮ್ಮಲ್ಲಿ ನಾನು ಬಂಗಾರಪ್ಪನವರನ್ನು ಕಾಣುತ್ತಿದ್ದೇನೆ. ನಿಮ್ಮಿಂದ ಬಡವರ ಪರ ಕಳಕಳಿ, ಚಿಂತನೆ ನೋಡುತ್ತಿದ್ದೇನೆ. ಬಂಗಾರಪ್ಪನವರ ಸ್ಥಾನದಲ್ಲಿ ನಿಮ್ಮನ್ನು ನೋಡುತ್ತಿದ್ದೇನೆ. ಈ ಒಗ್ಗಟ್ಟು ಮುಂದುವರಿಯಬೇಕು. ನಾರಾಯಣ ಗುರುಗಳು ಹೇಳಿಕೊಟ್ಟಿರುವಂತೆ ಸಂಘಟನೆಯಲ್ಲಿ ಶಕ್ತಿವಂತರಾಗಿರಿ”ಎಂದು ಕರೆ ನೀಡಿದರು.

ನಾರಾಯಣ ಗುರುಗಳ ತತ್ವ ಸಿದ್ಧಾಂತವನ್ನು ಒಪ್ಪಿ ಬಂದಿರುವ 26 ಸಮಾಜದ ಬಂಧು ಮಿತ್ರರು ಬಂದಿದ್ದೀರಿ. ಸಂಘಟನೆಯಿಂದ ಶಕ್ತಿವಂತರಾಗಬಹುದು ಎಂಬುದನ್ನು ತೋರಿಸಿದ್ದೀರಿ. ಬ್ರಹ್ಮಶ್ರೀ ನಾರಾಯಣಗುರುಗಳ ಜಯಂತಿಯನ್ನು ಮಾಡಿದವರು ಸಿದ್ದರಾಮಯ್ಯ. ಹಾಗೆಯೇ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠವನ್ನು ಮಾಡಿಕೊಡಬೇಕು. ಪಠ್ಯಪುಸ್ತಕದಲ್ಲಿ ನಾರಾಯಣ ಗುರುಗಳನ್ನು ಸೇರಿಸುವಂತೆ ಕೇಳಿದ್ದೆ, ಅದನ್ನು ಸಿಎಂ ನೆರವೇರಿಸಿದ್ದಾರೆ” ಎಂದು ಮಧು ಬಂಗಾರಪ್ಪ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದ 9 ಜಿಲ್ಲೆಗಳಲ್ಲಿ ಮುಂದಿನ‌ 2 ದಿನ ಭಾರೀ ಮಳೆ: ಹವಾಮಾನ ಇಲಾಖೆ

ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿದೆ. ಹಲವಾರು ತಾಲೂಕುಗಳು ಬರದ ಪರಿಸ್ಥಿತಿ ಎದುರಿಸುತ್ತಿವೆ....

ಬಿಜೆಪಿಯಲ್ಲಿ ಆಂತರಿಕ ಕುಸ್ತಿ; ಪ್ರತಾಪ್ ಸಿಂಹ – ನಾಗೇಂದ್ರ‌ ಬೀದಿ ಕಾಳಗ

ಮೈಸೂರು ಜಿಲ್ಲೆಯ ಟಿ. ನರಸೀಪುರ ಗಣೇಶೋತ್ಸವ ಮೆರವಣಿಗೆ ವಿಚಾರವಾಗಿ ಇನ್ಸ್‌ಪೆಕ್ಟರ್ ಧನಂಜಯ್‌...

ಸ್ತಬ್ಧ ಚಿತ್ರ ಮಾತಾಡಿದಂತೆ, ಶಬ್ದ ಕಣ್ಣಿಗೆ ಕಾಣಿಸುವಂತೆ- ಸಿನೆಮಾದ ತೆರೆಮರೆಯ ತಾತ್ವಿಕತೆ

ಆಫ್-ಸ್ಕ್ರೀನ್ ಶಬ್ದ ಸಿನೆಮಾದ ಕೇವಲ ತಾಂತ್ರಿಕ ಕುಶಲತೆಯಾಗಿರದೆ, ಅದರ ತಾತ್ವಿಕ ದೃಷ್ಟಿಕೋನವನ್ನೇ...

ಮುಸ್ಲಿಂ ಮಹಿಳೆಯ ಸೌಹಾರ್ದತೆ: 18 ವರ್ಷಗಳಿಂದ ಗಣೇಶ ಸಮಿತಿ ಮುನ್ನಡೆಸುತ್ತಿರುವ ಜುಬೇದಾ

ಸಮಾಜದಲ್ಲಿ ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ಒಡಕು ಮೂಡಿಸಲು ಹಿಂದುತ್ವ ಕೋಮುವಾದಿ...