ಅಹಲ್ಯಾಬಾಯಿ ಮಹಿಳಾ ಸಂಘಕ್ಕೆ ಬೆಂಗಳೂರಿನಲ್ಲಿ ಜಮೀನು: ಸಿಎಂ ಸಿದ್ದರಾಮಯ್ಯ ಘೋಷಣೆ

Date:

Advertisements

ರಾಜ್ಯ ಅಹಲ್ಯಾಬಾಯಿ ಮಹಿಳಾ ಸಂಘಕ್ಕೆ ಬೆಂಗಳೂರಿನಲ್ಲಿ ಜಮೀನು ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು.

ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ರಾಣಿ ಅಹಲ್ಯಾ ಬಾಯಿ ಹೋಳ್ಕರ್ ಅವರ 300ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, “ಶೇ.100 ರಷ್ಟು ಅಂಕಗಳನ್ನು ಪಡೆಯುವುದರಲ್ಲಿ ಹೆಣ್ಣುಮಕ್ಕಳೇ ಮುಂದಿದ್ದು, ಸೈನ್ಯದಲ್ಲಿ , ಅಂತರಿಕ್ಷದಲ್ಲೂ ಹೆಣ್ಣು ಮಕ್ಕಳು ಕೆಲಸ ಮಾಡುತ್ತಿರುವುದು ಮಹಿಳಾ ಕುಲದ ಪ್ರಗತಿಯ ಪ್ರತೀಕ” ಎಂದು ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು.

“ಯಾವುದೇ ಸಂಘಟನೆ 25 ವರ್ಷ ಪೂರೈಸಿದರೆ ಅದು ದೊಡ್ಡ ಯಶಸ್ಸು. ಕರ್ನಾಟಕ ರಾಜ್ಯ ಅಹಲ್ಯಾ ಬಾಯಿ ಹೋಳ್ಕರ್ ಮಹಿಳಾ ಸಂಘ ಅತ್ಯಂತ ಯಶಸ್ವಿ ಆಗಿದೆ. ಇದಕ್ಕಾಗಿ ಶ್ರಮಿಸಿದ ಯಲ್ಲಮ್ಮ ಮತ್ತು ಜೊತೆಗಿರುವ ಪ್ರತಿಯೊಬ್ಬರೂ ಅಭಿನಂದನಾರ್ಹರು” ಎಂದರು.

Advertisements

“ಶಿಕ್ಷಣ-ಸಂಘಟನೆ-ಹೋರಾಟ ಅಂಬೇಡ್ಕರ್ ಅವರು ಶೋಷಿತ ಜಾತಿ-ಸಮುದಾಯಗಳಿಗೆ ಕೊಟ್ಟಿರುವ ಮಂತ್ರ. ಶೂದ್ರರು ಮತ್ತು ಮಹಿಳೆಯರು ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದರು. ಆದರೆ ಅಂಬೇಡ್ಕರ್ ಅವರ ಕಾರಣದಿಂದ ಶೂದ್ರ ಮತ್ತು ಮಹಿಳಾ ಕುಲಕ್ಕೆ ಶಿಕ್ಷಣ ಕಲಿಯುವ ಅವಕಾಶ ಒದಗಿ ಬಂತು. ಇದಕ್ಕೆ ನಮ್ಮ ಸಂವಿಧಾನ ನೀಡಿದ ಕಡ್ಡಾಯ ಶಿಕ್ಷಣ ಕಾನೂನು ನೆರವಾಯಿತು” ಎಂದು ಹೇಳಿದರು.

“ಕುರುಬರಿಗೆ ಅಕ್ಷರ ಹತ್ತಲ್ಲ, ಶಿಕ್ಷಣ ಏಕೆ ಎಂದು ನಮ್ಮ ಅಜ್ಜಿ ಹೇಳುತ್ತಿದ್ದರು. ಆದರೆ, ನಾನು ಶಾಲೆಗೆ ಹೋಗಿ ಕಾನೂನು ಪದವಿ ಪಡೆದು ಮುಖ್ಯಮಂತ್ರಿಯೂ ಆದೆ. ನಾನು ಶಾಲೆಗೆ ಹೋಗಿ ಶಿಕ್ಷಣ ಕಲಿಯುವ ಅವಕಾಶ ಉಪಯೋಗಿಸಿಕೊಳ್ಳದಿದ್ದರೆ ನಾನೂ ಹಸು, ಕುರಿ ಕಾಯುತ್ತಾ ಇರಬೇಕಾಗಿತ್ತು. ಆದ್ದರಿಂದ ರಾಣಿ ಅಹಲ್ಯಾ ಬಾಯಿ ಅವರ ಶಿಕ್ಷಣ ಕ್ರಾಂತಿ ಎಲ್ಲರಿಗೂ ಈ ಮಹಿಳಾ ಸಂಘಟನೆಗೂ ಪ್ರೇರಣೆ ಆಯಿತು. ಇತಿಹಾಸ ಗೊತ್ತಿಲ್ಲದವರು ಭವಿಷ್ಯ ರೂಪಿಸಲು ಸಾಧ್ಯವಿಲ್ಲ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೈಗಾರಿಕೆಯಲ್ಲಿ ತಮಿಳುನಾಡು ಮಾದರಿ ಅಳವಡಿಸಿಕೊಳ್ಳಲಿ ಕರ್ನಾಟಕ

“ರಾಣಿ 20 ವರ್ಷ ಅಧಿಕಾರದಲ್ಲಿದ್ದರೂ ತನ್ನ ಸಾಮ್ರಾಜ್ಯ ಉಳಿಸಲು ಅಗತ್ಯವಾದ ಎಲ್ಲ ಅರ್ಹತೆಗಳನ್ನು ಬೆಳೆಸಿಕೊಂಡಿದ್ದರೂ ಸಾಮ್ರಾಜ್ಯ ವಿಸ್ತರಿಸುವ ಹಪಾಹಪಿ ಇರಲಿಲ್ಲ. ಖಜಾನೆ ತುಂಬಿದ್ದರೂ ಸರಳ ಜೀವನ ನಡೆಸುತ್ತಾ, ಸುಸ್ಥಿರ ಆಡಳಿತ, ಅಭಿವೃದ್ಧಿ ಕಡೆ ಹೆಚ್ಚಿನ ಗಮನ ಹರಿಸಿದ್ದ ರಾಣಿ ಅಹಲ್ಯಾ ಬಾಯಿ ಅವರು ಬಾಲ್ಯ ವಿವಾಹ ನಿಲ್ಲಿಸುವ ಮೂಲಕ ಸಾಮಾಜಿಕ ಬದಲಾವಣೆಯಲ್ಲೂ ಪ್ರಮುಖ ಪಾತ್ರ ವಹಿಸಿದರು. ಜಾತ್ಯತೀತ ಮನೋಭಾವ ಹೊಂದಿದ್ದ ಅಹಲ್ಯಾ ಬಾಯಿ ಆಗಲೇ ಅಂತರ್ಜಾತಿ ವಿವಾಹ ಮಾಡಿಸಿದ್ದರು” ಎಂದು ವಿವರಿಸಿದರು.

ಮಹಿಳೆಯರ ಸಬಲೀಕರಣಕ್ಕೆ ನಮ್ಮ ಸರ್ಕಾರ ಗೃಹಲಕ್ಷ್ಮಿ, ಶಕ್ತಿ ಯೋಜನೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಿದ್ದಾಗಿದೆ. ಇದರಿಂದ ಸಮಾಜಕ್ಕೆ, ಮಹಿಳಾ ಕುಲಕ್ಕೆ ಶಕ್ತಿ ಬಂದಿದೆಯೇ ಹೊರತು ಯಾರೂ ಸೋಮಾರಿಗಳಾಗಿಲ್ಲ ಎಂದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X