ಬಿಜೆಪಿ ಸಂಸದರು ಕೇಂದ್ರದಿಂದ ಬರಪರಿಹಾರ ಕೊಡಿಸಲಿ: ಸಿಎಂ ಸಿದ್ದರಾಮಯ್ಯ

Date:

  • ರಾಜ್ಯ ಸರ್ಕಾರವನ್ನು ಟೀಕಿಸುವ ಬದಲು ಕೇಂದ್ರದೊಂದಿಗೆ ಮಾತನಾಡಲಿ
  • ದಿನಗೂಲಿ ಕಾರ್ಮಿಕರ ವೇತನ 600 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿಲ್ಲ

ರೈತರ ಬಗ್ಗೆ ಕಾಳಜಿ ಇದ್ದರೆ, ಬಿಜೆಪಿ ಸಂಸದರು ರಾಜ್ಯ ಸರ್ಕಾರವನ್ನು ಟೀಕಿಸುವ ಬದಲು ಕೇಂದ್ರದೊಂದಿಗೆ ಮಾತನಾಡಿ, ರಾಜ್ಯಕ್ಕೆ ಪರಿಹಾರಗಳನ್ನು ಬಿಡುಗಡೆಗೊಳಿಸಿದರೆ ಉತ್ತಮ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

- Advertisement -

ಕೊಪ್ಪಳದಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಕೇಂದ್ರ ಸರ್ಕಾರಕ್ಕೆ ಬರಪರಿಹಾರ 17,900 ಕೋಟಿ ರೂ.ಗಳನ್ನು ಕೋರಿ ಮನವಿ ಸಲ್ಲಿಸಿದೆ. ರಾಜ್ಯದ ಸಚಿವರ ಭೇಟಿಗೂ ಸಮಯ ನೀಡದೆ, ಪರಿಹಾರ ಮೊತ್ತವನ್ನು ಬಿಡುಗಡೆ ಮಾಡದೆ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಮಲತಾಯಿ ಧೋರಣೆ ತೋರುತ್ತಿದೆ. ಕೇಂದ್ರಸರ್ಕಾರ ನರೇಗಾ ಯೋಜನೆಯಡಿ ದಿನಗೂಲಿ ಕಾರ್ಮಿಕರ ವೇತನ 600 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ನಿಗಮ ಮಂಡಳಿ ಅಧ್ಯಕ್ಷರ ಆಯ್ಕೆಗೆ ಚರ್ಚೆ

ರಣದೀಪ್ ಸುರ್ಜೆವಾಲ ಹಾಗೂ ವೇಣುಗೋಪಾಲ್ ಅವರು ರಾಜ್ಯಕ್ಕೆ ಬಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, “ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷದ ನಾಯಕರು ರಾಜ್ಯಕ್ಕೆ ಆಗಮಿಸಿದ್ದಾರೆ. ಹಾಗೂ ಶಾಸಕರನ್ನು ಕೆಲವು ನಿಗಮ ಮಂಡಳಿಗಳಿಗೆ ಅಧ್ಯಕ್ಷರಾಗಿ ನೇಮಕ ಮಾಡುವ ಪ್ರಕ್ರಿಯೆಯೂ ಇದ್ದು, ಈ ಬಗ್ಗೆಯೂ ಕೇಂದ್ರ ನಾಯಕರೊಂದಿಗೆ ಚರ್ಚೆ ನಡೆಸಲಾಗುವುದು” ಎಂದು ಹೇಳಿದರು.

ಕುಡಿಯುವ ನೀರಿಗೆ 900 ಕೋಟಿ ರೂ.

“ರಾಜ್ಯ ಸರ್ಕಾರ ಕುಡಿಯುವ ನೀರಿನ ಬವಣೆ ನೀಗಿಸಲು 900 ಕೋಟಿ ಬಿಡುಗಡೆ ಮಾಡಿದೆ. ಜಿಲ್ಲೆಯ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಅನುದಾನ ನೀಡಿದ್ದು, ಹೆಚ್ಚಿನ ಮೊತ್ತಕ್ಕೆ ಬೇಡಿಕೆ ಸಲ್ಲಿಸಿದ್ದಲ್ಲಿ, ಸರ್ಕಾರ ತಕ್ಷಣ ಅನುದಾನ ಒದಗಿಸಲಿದೆ” ಎಂದರು.

ಕೃಷಿ ಪಂಪಸೆಟ್ ಮುಂದುವರೆಸಲಾಗುವುದು

“ಕೃಷಿ ಪಂಪಸೆಟ್ ಗಳಿಗೆ ಪೂರಕ ಸೌಲಭ್ಯಗಳು ರೈತರಿಗೆ ನಿಲ್ಲಿಸಲಾಗಿದೆ ಎಂಬುದಕ್ಕೆ ಉತ್ತರಿಸಿ, ಈ ವಿಚಾರ ಕೃಷಿ ಇಲಾಖೆಗೆ ಸಂಬಂಧಪಟ್ಟಿದ್ದು, ಈ ಬಗ್ಗೆ ಪರಿಶೀಲಿಸಲಾಗುವುದು. ಈ ಮುಂಚೆ ನೀಡುತ್ತಿದ್ದಂತೆ ಕೃಷಿ ಪಂಪಸೆಟ್ ಗಳಿಗೆ ಪೂರಕ ಸೌಲಭ್ಯಗಳನ್ನು ರೈತರಿಗೆ ಮುಂದುವರೆಸಲಾಗುವುದು” ಎಂದು ತಿಳಿಸಿದರು.

ಬಿಜೆಪಿಯವರ ಹಗಲು ಕನಸು

ತನಿಖಾ ಸಂಸ್ಥೆಗಳಿಂದ ಕಾಂಗ್ರೆಸ್ ನವರ ಭ್ರಷ್ಟಾಚಾರ ಬೆಳಕಿಗೆ ಬರುತ್ತಿರುವುದಾಗಿ ಯಡಿಯೂರಪ್ಪ ತಿಳಿಸಿರುವ ಬಗ್ಗೆ ಉತ್ತರಿಸಿ, ಇವೆಲ್ಲ ಸುಳ್ಳು ಆರೋಪಗಳು ಎಂದರು. ಬಿಜೆಪಿ ಶಾಸಕ ಬಸವರಾಜ ಯತ್ನಾಳ್ ಅವರು ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಹೇಳಿದ್ದರ ಬಗ್ಗೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರು ಹಗಲುಗನಸು ಕಾಣುತ್ತಿದ್ದಾರೆ ಎಂದರು.

ಸಿದ್ದರಾಮಯ್ಯರವರು ಮುಂಚಿನ ಆಡಳಿತದ ವೈಖರಿ ತೋರುತ್ತಿಲ್ಲ ಎಂಬ ಯಡಿಯೂರಪ್ಪನವರ ಹೇಳಿಕೆಗೆ ಉತ್ತರಿಸಿ, “ಯಡಿಯೂರಪ್ಪನವರು ರಾಜಕೀಯದಿಂದ ನಿವೃತ್ತರಾಗಿದ್ದಾರೆ. ಬಿಜೆಪಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿತು. ವಿಧಾನಸಭೆಯಲ್ಲಿ ಅವರು ಕಣ್ಣೀರಿಟ್ಟಿದ್ದರು. ಅವರ ಪಕ್ಷದವರೇ ಅವರನ್ನು ಮನೆಗೆ ಕಳುಹಿಸಿದ್ದಾರೆ. ಅವರ ಹೇಳಿಕೆಗಳಿಗೆ ಏನೂ ಪ್ರತಿಕ್ರಿಯೆ ನೀಡುವುದಿಲ್ಲ” ಎಂದರು.

ಸರ್ಕಾರದಿಂದ ಯಾರನ್ನೂ ಕಳಿಸೋಲ್ಲ

ಕಾಂಗ್ರೆಸ್ ಶಾಸಕರು ದುಬೈಗೆ ಪ್ರವಾಸ ಹೋಗುವ ಬಗ್ಗೆ ಪ್ರತಿಕ್ರಿಯೆ ನೀಡಿ ”ಅವರ ಹಣದಲ್ಲಿ ಅವರು ಹೋಗುತ್ತಿದ್ದಾರೆ. ಸರ್ಕಾರದಿಂದ ನಾವು ಯಾರನ್ನೂ ಕಳಿಸೋಲ್ಲ” ಎಂದರು.

ಐದು ವರ್ಷ ಆಡಳಿತ

“ಐದು ವರ್ಷಕ್ಕೊಮ್ಮೆ ಚುನಾವಣೆ ನಡೆಯುತ್ತದೆ. ಜನ ನಮ್ಮನ್ನು ಆಯ್ಕೆ ಮಾಡಿದ್ದಾರೆ. ನಾವು ಐದು ವರ್ಷ ಆಡಳಿತ ಮಾಡುತ್ತೇವೆ. ಮತ್ತೆ ಚುನಾವಣೆಗೆ ಹೋಗುತ್ತೇವೆ. ಮತ್ತೆ ಜನ ನಮಗೆ ಆಶೀರ್ವಾದ ಮಾಡಲಿದ್ದಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....

ಬಿಹಾರದ ಖಜಾನೆ ಖಾಲಿ, ಆದರೂ ಪ್ರಧಾನಿ ಹುಟ್ಟುಹಬ್ಬಕ್ಕೆ ಕೋಟಿ ಕೋಟಿ ಪೋಲು: ತೇಜಸ್ವಿ ಯಾದವ್ ಆರೋಪ

ಬಿಹಾರದಲ್ಲಿ ತೀವ್ರ ಪ್ರವಾಹ ಪರಿಸ್ಥಿತಿಯಿಂದಾಗಿ ಲಕ್ಷಾಂತರ ಜನರು ತೊಂದರೆಯಲ್ಲಿರುವಾಗ ಮತ್ತು ರಾಜ್ಯ...

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ಹವಾಮಾನ ವರದಿ: ರಾಜ್ಯದ 16 ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ

ಬಂಗಾಳಕೊಲ್ಲಿ ಮತ್ತು ಉತ್ತರ ಅಂಡಮಾನ್ ಸಮುದ್ರ ಭಾಗದಲ್ಲಿ ತೀವ್ರ ವಾಯುಭಾರ ಕುಸಿತ...