ಕಾರ್ಮಿಕರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು: ಸಿಎಂ ಸಿದ್ದರಾಮಯ್ಯ

Date:

  • ದೇಶದಲ್ಲಿ ಕಾರ್ಮಿಕ ವರ್ಗ ಸಂಪತ್ತನ್ನು ಉತ್ಪಾದಿಸುತ್ತದೆ: ಸಿಎಂ
  • ಶೈಕ್ಷಣಿಕ ಧನಸಹಾಯ ಕಾರ್ಯಕ್ರಮ ಉದ್ಘಾಟಿಸಿದ ಸಿದ್ದರಾಮಯ್ಯ

ದೇಶದಲ್ಲಿ ಕಾರ್ಮಿಕ ವರ್ಗ ಸಂಪತ್ತನ್ನು ಉತ್ಪಾದಿಸುತ್ತದೆ. ಉಳಿದವರು ಅನುಭವಿಸುತ್ತಾರೆ. ಸಂವಿಧಾನದ ಪ್ರಕಾರ ಪ್ರತಿಯೊಬ್ಬರೂ ಸಮಾಜದ ಸಂಪತ್ತಿನಲ್ಲಿ ಸಮಪಾಲು ಹೊಂದಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

- Advertisement -

ಕಾರ್ಮಿಕ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಹಮ್ಮಿಕೊಂಡಿದ್ದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ 2022-23ನೇ ಸಾಲಿನ ಶೈಕ್ಷಣಿಕ ಧನಸಹಾಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

“ಪ್ರತಿಯೊಬ್ಬರೂ ಉತ್ಪಾದನೆಯಲ್ಲಿ ಪಾಲ್ಗೊಳ್ಳಬೇಕು ಎನ್ನುವ ಉದ್ದೇಶದಿಂದಲೇ ಬಸವಣ್ಣನವರು ಕಾಯಕ ಪದ್ಧತಿಯನ್ನು ಹೇಳಿದರು. ಹೀಗಾಗಿ ನಾವು ಕಾರ್ಮಿಕರ ಮಕ್ಕಳಿಗೆ ಈ ರೀತಿಯ ಕಾರ್ಯಕ್ರಮಗಳನ್ನು ರೂಪಿಸಿದ್ದೇವೆ. ಇದರಿಂದ ಸಮ ಸಮಾಜದ ಆಶಯಗಳನ್ನು ಜಾರಿಗೊಳಿಸುವ ಪ್ರಯತ್ನ ಮಾಡುತ್ತಿದ್ದೇವೆ” ಎಂದರು.

“ಶೂದ್ರ ಮತ್ತು ಮಹಿಳೆಯರನ್ನು ಶತ- ಶತಮಾನಗಳ ಕಾಲ ಶಿಕ್ಷಣದಿಂದ ವಂಚಿತರನ್ನಾಗಿ ಮಾಡಲಾಗಿತ್ತು. ಈ ಕಾರಣಕ್ಕೇ ಶೂದ್ರ ವರ್ಗಗಳು ಹಿಂದುಳಿಯುವಂತಾಯಿತು. ಅಸಮಾನತೆ ಹೆಚ್ಚಾಯಿತು. ಈ ಅಸಮಾನತೆಯನ್ನು ಅಳಿಸುವ ಉದ್ದೇಶ ನಮ್ಮ ಸರ್ಕಾರದ್ದು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೆಂಗಳೂರು ಮಳೆ: ಜನರಿಗೆ ನರಕದಿಂದ ಮುಕ್ತಿ ಸಿಗುವುದೆಂದು?

“9,60,000 ಮಕ್ಕಳಿಗೆ ಕಲ್ಯಾಣ ನಿಧಿ ಮೂಲಕ ಸಹಾಯಧನ ಬಿಡುಗಡೆ ಆಗುತ್ತಿದೆ. ಇದರ ಸದುಪಯೋಗ ಪಡಿಸಿಕೊಂಡು ಶಿಕ್ಷಣವಂತರಾಗಬೇಕು. ಶಿಕ್ಷಣದಿಂದ ಅಸಮಾನತೆ ದೂರ ಮಾಡಬಹುದು. ಸಹಾಯ ಧನ ಪಡೆಯುತ್ತಿರುವ ಇವರೆಲ್ಲರೂ ಅಸಂಘಟಿತ ಕಾರ್ಮಿಕರ ಮಕ್ಕಳು. ಶೇ 83 ರಷ್ಟು ಕಾರ್ಮಿಕರು ಇವತ್ತಿಗೂ ಅಸಂಘಟಿತರಾಗಿದ್ದಾರೆ. ದೇಶದಲ್ಲಿ ರೈತ ಸಮುದಾಯವನ್ನು ಬಿಟ್ಟರೆ ಎರಡನೇ ಅತೀ ದೊಡ್ಡ ಸಮುದಾಯ ಕಾರ್ಮಿಕ ಸಮುದಾಯ ಆಗಿದೆ” ಎಂದರು.

“ಜಾತಿ-ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸುವ ಪಟ್ಟಭದ್ರರನ್ನು ನಾವು ದೂರ ಇಡಬೇಕು. ಈ ಪಟ್ಟ ಭದ್ರರು ಸಾಮಾಜಿಕ ನ್ಯಾಯದ ವಿರೋಧಿಗಳು. ಈ ವಿಭಜಕರು ಶೂದ್ರ ಸಮುದಾಯ ಆರ್ಥಿಕವಾಗಿ, ಶೈಕ್ಷಣಿಕವಾಗಿ ಮೇಲೆ ಬರುವುದನ್ನು ವಿರೋಧಿಸುತ್ತಾರೆ. ಆದ್ದರಿಂದ ಜಾತಿ-ಧರ್ಮದ ಹೆಸರಿನಲ್ಲಿ ಸಮಾಜವನ್ನು ಒಡೆಯುವವರನ್ನು ನಾವು ವಿರೋಧಿಸಬೇಕು” ಎಂದು ಏಳಿದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಕಾರ್ಮಿಕ ಸಚಿವರಾದ ಸಂತೋಷ್ ಲಾಡ್, ವಿಧಾನ ಪರಿಷತ್ತಿನ ಸಭಾಪತಿಗಳಾದ ಬಸವರಾಜ ಹೊರಟ್ಟಿ, ಆಹಾರ ಸಚಿವರಾದ ಕೆ.ಹೆಚ್.ಮುನಿಯಪ್ಪ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಡಿತರ ಚೀಟಿ ಇ-ಕೆವೈಸಿ ಗಡುವು ವಿಸ್ತರಣೆ: ಸರ್ಕಾರ ಆದೇಶ

ಕರ್ನಾಟಕದಲ್ಲಿ ಎಪಿಎಲ್ ಮತ್ತು ಬಿಪಿಎಲ್ ಪಡಿತರ ಚೀಟಿದಾರರು ರೇಷನ್ ಕಾರ್ಡ್ ಇ-ಕೆವೈಸಿ...

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹತ್ತು ಹೊಸ ಯೋಜನೆಗಳ ಘೋಷಣೆ

ಕಲ್ಯಾಣ ಕರ್ನಾಟಕ ವಿಮೋಚನಾ ದಿನದ ಅಂಗವಾಗಿ ಸಿಎಂ‌ ಡಿ ಕೆ ಶಿವಕುಮಾರ್...

ಕಸ್ತೂರಿ ರಂಗನ್ ವರದಿ: ಸಿಎಂಗೆ ಮನವಿ ಸಲ್ಲಿಸಲು ಪಕ್ಷ, ಸಂಘಟನೆಗಳಿಗೆ ಅವಕಾಶವಿದೆ; ಟಿ.ಡಿ ರಾಜೇಗೌಡ 

ಕಸ್ತೂರಿರಂಗನ್ ವರದಿ ಕುರಿತು ತಮ್ಮ ಅಭಿಪ್ರಾಯ, ಆಕ್ಷೇಪಣೆ ಹಾಗೂ ಬೇಡಿಕೆಗಳನ್ನು ಮುಖ್ಯಮಂತ್ರಿ...

ಬೆಂಗಳೂರು | ಪತ್ನಿ ಮೇಲೆ ಆಸಿಡ್ ಸುರಿದು, ಮಚ್ಚಿನಿಂದ ಹಲ್ಲೆಗೈದ ವಿಕೃತ ಪತಿ

ನಡುರಸ್ತೆಯಲ್ಲೇ ಪತಿಯೊಬ್ಬ ತನ್ನ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಹೃದಯವಿದ್ರಾವಕ...