ಏ.‌ 26ರಂದು ದಾವಣಗೆರೆಯಲ್ಲಿ ʼಸಂವಿಧಾನ ಸಂರಕ್ಷಕರ ಸಮಾವೇಶ’: ಪ್ರಕಾಶ್‌ ರಾಜ್‌, ಜಿಗ್ನೇಶ್‌ ಮೇವಾನಿ, ಮೇಧಾ ಭಾಗಿ

Date:

Advertisements

ಇದೇ ಏ.26ರಂದು ದಾವಣಗೆರೆಯಲ್ಲಿ ಎದ್ದೇಳು ಕರ್ನಾಟಕದ ವತಿಯಿಂದ ನಡೆಯುತ್ತಿರುವ ಸಂವಿಧಾನ ಸಂರಕ್ಷಕರ ಸಮಾವೇಶದಲ್ಲಿ ರಾಜ್ಯದ 120ಕ್ಕೂ ಹೆಚ್ಚು ಸಾಮಾಜಿಕ ಚಳವಳಿಗಳು, ವಿವಿಧ ಜಾತಿ, ಸಮುದಾಯಗಳ ಸಂಘಟನೆಗಳು ಭಾಗಿಯಾಗಲಿವೆ.

ಸಂವಿಧಾನ ಸಂರಕ್ಷಕರ ಮಹಾಸಮಾವೇಶವನ್ನು ಖ್ಯಾತ ಬಂಡಾಯ ಸಾಹಿತಿ ಬರಗೂರು ರಾಮಚಂದ್ರಪ್ಪನವರು ಉದ್ಘಾಟಿಸಲಿದ್ದಾರೆ. ಸರಕಾರದ ಯೋಜನಾ ಆಯೋಗದ ಮುಖ್ಯಸ್ಥರಾದ ಬಿ.ಆರ್.ಪಾಟೀಲ್, ಚಿತ್ರ ನಟ ಪ್ರಕಾಶ್ ರಾಜ್, ಗುಜರಾತಿನ ಶಾಸಕ ಹಾಗೂ ಹೋರಾಟಗಾರ ಜಿಗ್ನೇಶ್ ಮೇವಾನಿ, ಪ್ರಖರ ಚಿಂತಕರಾದ ಪರಕಾಲ ಪ್ರಭಾಕರ್, ಮುಸ್ಲಿಂ ಸಮುದಾಯದ ರಾಷ್ಟ್ರೀಯ ನಾಯಕರಾದ ಮೊಹಮ್ಮದ್ ಸಲೀಂ, ಸಂಯುಕ್ತ ಕಿಸಾನ್ ಮೋರ್ಚಾದ ಡಾ.ಸುನೀಲಮ್, ಚಲನಚಿತ್ರ ನಿರ್ದೇಶಕಿ ಕವಿತಾ ಲಂಕೇಶ್, ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯ್ಕ್, ಶೋಷಿತ ಸಮುದಾಯಗಳ ಒಕ್ಕೂಟದ ಪ್ರಧಾನ ಸಂಚಾಲಕರಾದ ಕೆ.ಎಂ.ರಾಮಚಂದ್ರಪ್ಪ, ರೈತ ಚಳವಳಿಯ ಮುಂದಾಳುಗಳಾದ ಹೆಚ್.ಆರ್.ಬಸವರಾಜಪ್ಪ, ಬಡಗಲಪುರ ನಾಗೇಂದ್ರ, ದಲಿತ ಚಳವಳಿಯ ಹಿರಿಯ ಮುಖಂಡರಾದ ಗುರುಪ್ರಸಾದ್ ಕೆರಗೋಡು, ಎನ್.ವೆಂಕಟೇಶ್, ಮಾವಳ್ಳಿ ಶಂಕರ್, ವಿ.ನಾಗರಾಜ್, ಕ್ರೈಸ್ತ ಸಮುದಾಯದ ಮುಖಂಡರಾದ ಫಾ.ವೀರೇಸ್ ಮೋರೆಸ್, ಫಾ.ಜೆರಾಲ್ಡ್, ಮಾನವ ಬಂಧುತ್ವ ವೇದಿಕೆಯ ಎ.ಬಿ.ರಾಮಚಂದ್ರಪ್ಪ, ರವಿ ನಾಯ್ಕರ್, ಜನಪರ ಚಿಂತಕ-ಹೋರಾಟಗಾರ ಪಾಟೀಲ್ ಇನ್ನು ಮುಂತಾದ ಅನೇಕ ಗಣ್ಯರು ಭಾಗವಹಿಸುತ್ತಿದ್ದಾರೆ

ದೇಶದ ಮತ್ತು ರಾಜ್ಯದ ವಿವಿಧ ಭಾಗಗಳಿಂದ ಅನೇಕ ಗಣ್ಯ ಮಹನೀಯರು ಈ ಕಾರ್ಯಕ್ರಮದಲ್ಲಿ ಸಂವಿಧಾನ ಸಂರಕ್ಷಕರು ರಾಜ್ಯವನ್ನು, ದೇಶವನ್ನು ಕಟ್ಟುವ ಸಂಕಲ್ಪವನ್ನು ಮಾಡಲಿದ್ದಾರೆ. ದಾವಣಗೆರೆಯ ಕಾರ್ಯಕ್ರಮಕ್ಕೆ ಜಾತಿ, ಧರ್ಮಗಳ ಬೇಧವಿಲ್ಲದೆ ರಾಜ್ಯ ಮತ್ತು ದೇಶದ ಬೇರೆ ಬೇರೆ ಕಡೆಗಳಿಂದ ಆಗಮಿಸುತ್ತಿದ್ದಾರೆ. ವಿಶೇಷವಾಗಿ ಸಂವಿಧಾನದ ಕುರಿತು ಚಿಂತನೆಯನ್ನು ಮಾಡಲಿಕ್ಕಿದ್ದಾರೆ. ಸಂವಿಧಾನದ ಕುರಿತು ಅರಿವನ್ನು ಮೂಡಿಸಲಿಕ್ಕಿದ್ದಾರೆ. ಸಂವಿಧಾನ ರಕ್ಷಿಸುವ ಕುರಿತು ವಿಚಾರ ವಿನಿಮಯ ನಡೆಯಲಿದೆ.

ಈ ಪ್ರಯುಕ್ತ ಏ.14ರಿಂದ ಪ್ರಾರಂಭವಾಗಿರುವ ದೇಶಪ್ರೇಮಿ ಯುವಾಂದೋಲನ ಬೈಕ್ ಜಾಥಾ ಕೊನೆ ದಿನವಾದ ನಾಳೆ
(ಏ.25) ದಾವಣಗೆರೆ ಪ್ರವೇಶಿಸಲಿದ್ದು, ಅಲ್ಲಿನ ಯುವಕ-ಯುವತಿಯರು ಅದ್ದೂರಿ ಸ್ವಾಗತ ಕೊರಲಿದ್ದಾರೆ. ಈ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಭಾಗದಿಂದ ಸುಮಾರು 10,000ಕ್ಕೂ ಹೆಚ್ಚು ಸಂವಿಧಾನ ಸಂರಕ್ಷಕ ಹೋರಾಟಗಾರರು ಭಾಗವಹಿಸಲಿದ್ದಾರೆ. ಈ ಸಮಾವೇಶದ ಕುರಿತು ಜನರಿಗೆ ಮಾಹಿತಿ ಮತ್ತು ಕಾರ್ಯಕ್ರಮಕ್ಕೆ ಆಹ್ವಾನ ನೀಡಲು ಇದೇ ಏ.14ರಿಂದ ಬೈಕ್ ಯಾನವು ಅಂಬೇಡ್ಕರ್ ಭೇಟಿ ನೀಡಿದ ಸ್ಥಳವಾದ ಗುಲ್ಬರ್ಗ ಜಿಲ್ಲೆಯ ವಾಡಿಯಿಂದ ಪ್ರಾರಂಭವಾಗಿದ್ದು ಅದೀಗ ಅದು ರಾಜ್ಯದ ಸುಮಾರು 20 ಜಿಲ್ಲೆಗಳ ಮೂಲಕ ಹಾದು, ಸರಿ ಸುಮಾರು 2000 ಕಿ.ಮೀ. ಕ್ರಮಿಸಿ ನಾಳೆ ದಾವಣಗೆರೆಗೆ ಆಗಮಿಸಲಿದೆ.
ಸಮಾವೇಶ ನಡೆಯುವ ಸ್ಥಳ : ಬೀರಲಿಂಗೇಶ್ವರ ದೇವಸ್ಥಾನದ ಆವರಣ, ಹೈಸ್ಕೂಲ್‌ ಫೀಲ್ಡ್‌ , ದಾವಣಗೆರೆ. ಸಮಯ: ಏ.26 ಬೆಳಿಗ್ಗೆ 11.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X